AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯೊಳಗಿತ್ತು 2ಕೆಜಿಯಷ್ಟು ತೂಕದ ಕೂದಲಿನ ಮುದ್ದೆ

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಿಂದ ವೈದ್ಯರು 2 ಕೆಜಿ ತೂಕದ ಕೂದಲಿನ ಮುದ್ದೆಯನ್ನು ಹೊರಗೆ ತೆಗೆದಿರುವ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ ಕೂದಲುಗಳನ್ನು ಹೊರತೆಗೆದಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 15 ವರ್ಷಗಳಿಂದ ಆಕೆ ಕೂದಲು ತಿನ್ನುತ್ತಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹಿಳೆಯ ಹೊಟ್ಟೆಯೊಳಗಿತ್ತು 2ಕೆಜಿಯಷ್ಟು ತೂಕದ ಕೂದಲಿನ ಮುದ್ದೆ
ಶಸ್ತ್ರಚಿಕಿತ್ಸೆImage Credit source: BD
ನಯನಾ ರಾಜೀವ್
|

Updated on: Oct 06, 2024 | 2:24 PM

Share

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಿಂದ ವೈದ್ಯರು 2 ಕೆಜಿ ತೂಕದ ಕೂದಲಿನ ಮುದ್ದೆಯನ್ನು ಹೊರಗೆ ತೆಗೆದಿರುವ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವೈದ್ಯರು 31 ವರ್ಷದ ಮಹಿಳೆಯ ಹೊಟ್ಟೆಯಿಂದ ಕೂದಲುಗಳನ್ನು ಹೊರತೆಗೆದಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 15 ವರ್ಷಗಳಿಂದ ಆಕೆ ಕೂದಲು ತಿನ್ನುತ್ತಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೀರ್ಘಕಾಲದವರೆಗೆ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ ರೋಗಿಗೆ ಟ್ರೈಕೊಲೊಟೊಮೇನಿಯಾ ಇದೆ ಎಂದು ಗುರುತಿಸಲಾಯಿತು. ಇದು ಅಪರೂಪದ ಮಾನಸಿಕ ಅಸ್ವಸ್ಥತೆಯಾಗಿದ್ದು, ಈ ಕಾಯಿಲೆಯು ಆಕೆಗೆ ಕೂದಲು ತಿನ್ನುವಂತೆ ಪ್ರಚೋದನೆ ನೀಡುತ್ತಿತ್ತು. ಇದು 25 ವರ್ಷಗಳಲ್ಲಿ ಬರೇಲಿಯಲ್ಲಿ ಟ್ರೈಕೊಲೊಟೊಮೇನಿಯಾದ ಮೊದಲ ಪ್ರಕರಣವಾಗಿದೆ.

ಮಹಿಳೆಯು 16 ವರ್ಷ ವಯಸ್ಸಿನಿಂದಲೂ ಈ ಸ್ಥಿತಿಯೊಂದಿಗೆ ಹೋರಾಡುತ್ತಿದ್ದಳು. ಆಕೆಯ ಹೊಟ್ಟೆಯಲ್ಲಿ ಕೂದಲು ಸಂಗ್ರಹವಾಗುವುದು ಗಮನಾರ್ಹ ಅಡಚಣೆ ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಪರಿಹಾರ ಸಿಗಲಿಲ್ಲ.

ಮತ್ತಷ್ಟು ಓದಿ: Viral Video: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಸೆಪ್ಟೆಂಬರ್ 22 ರಂದು ಮಹಿಳೆಯನ್ನು ಬರೇಲಿಯ ಸರ್ಕಾರಿ ಮಹಾರಾಣಾ ಪ್ರತಾಪ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಹಲವು ಪರೀಕ್ಷೆಗಳ ಬಳಿಕ ಹಿರಿಯ ಶಸ್ತ್ರಚಿಕಿತ್ಸಕ ಡಾ.ಎಂ.ಪಿ.ಸಿಂಗ್ ಮತ್ತು ಡಾ.ಅಂಜಲಿ ಸೋನಿ ನೇತೃತ್ವದ ವೈದ್ಯಕೀಯ ತಂಡವು ಶಸ್ತ್ರಚಿಕಿತ್ಸೆ ಅಗತ್ಯ ಎಂದು ನಿರ್ಧರಿಸಿತು.

ಹೊಟ್ಟೆಯಿಂದ ಬೃಹತ್ ಕೂದಲಿನ ಬಂಡಲ್​ನ್ನು ತೆಗೆದುಹಾಕಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ, ಮಹಿಳೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್