AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು

ಮಹಿಳೆ ಬಟ್ ಲಿಫ್ಟ್ ಹಾಗೂ ಸ್ತನದ ಆಕಾರವನ್ನು ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಆರೋಗ್ಯವಾಗಿದ್ದ ಕೇಡೆಲ್ ಏಕಾಏಕಿ ಸಾವನ್ನಪ್ಪಿರುವುದು ವೈದ್ಯರ ನಿರ್ಲಕ್ಷ್ಯದಿಂದಲೇ ಎಂದು ಕುಟುಂಬಸ್ಥರು ಆರೋಪಿಸಿರುವುದಾಗಿ ದಿ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ  ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು
ಅಕ್ಷತಾ ವರ್ಕಾಡಿ
|

Updated on: Aug 21, 2024 | 3:30 PM

Share

ಬ್ರಿಟನ್‌ನ ಮಹಿಳೆಯೊಬ್ಬರು ಕಾಸ್ಮೆಟಿಕ್ ಸರ್ಜರಿಯ ವೇಳೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೇಡೆಲ್ ಬ್ರೌನ್(38) ಮೃತ ಮಹಿಳೆ. ಈಕೆ 5,400 ಪೌಂಡ್‌ ಅಂದರೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಬಟ್ ಲಿಫ್ಟ್, ಹೊಟ್ಟೆ ಹಾಗೂ ಸ್ತನದ ಆಕಾರವನ್ನು ಹೆಚ್ಚಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗಾ ಆರೋಗ್ಯವಾಗಿದ್ದ ಕೇಡೆಲ್ ಏಕಾಏಕಿ ಸಾವನ್ನಪ್ಪಿರುವುದು ವೈದ್ಯರ ನಿರ್ಲಕ್ಷ್ಯದಿಂದಲೇ ಎಂದು ಕುಟುಂಬಸ್ಥರು ಆರೋಪಿಸಿರುವುದಾಗಿ ದಿ ಸ್ಟ್ಯಾಂಡರ್ಡ್ ವರದಿ ಮಾಡಿದೆ.

ಶಸ್ತ್ರಚಿಕಿತ್ಸೆಯಾದ ಕೇವಲ 10 ಗಂಟೆಗಳ ನಂತರ, ಕೇಡೆಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೆಲ ಗಂಟೆಗಳ ಬಳಿಕ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ ಮೃತದೇಹವನ್ನು ನೋಡಲು ಅನುಮತಿ ನೀಡಲಿಲ್ಲ ಮತ್ತು ಮರುದಿನ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಯಿತು ಎಂದು ಕೇಡೆಲ್ ಸಹೋದರಿ ಲೀನ್ನೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಪ್ರಯಾಣಿಕರ ಮುಂದೆಯೇ ಮೆಟ್ರೋದಲ್ಲಿ ಕಿಸ್ ಮಾಡ್ಕೊಂಡು ಪ್ರಯಾಣಿಸಿದ ಜೋಡಿ

ಕೇಡೆಲ್ ಅವರ ದೇಹವನ್ನು ಅಂತಿಮವಾಗಿ ಯುಕೆಗೆ ಹಿಂದಿರುಗಿಸಿದಾಗ, ಆಕೆಯ ಮೆದುಳು, ಶ್ವಾಸಕೋಶಗಳು ಮತ್ತು ಹೃದಯ ಮೃತದೇಹದಿಂದ ನಾಪತ್ತೆಯಾಗಿದ್ದವು ಎಂದು ಆಕೆಯ ಸಹೋದರಿ ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸದ್ಯ ತನಿಖೆ ಮುಂದುವರಿದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​