AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಹಿಳೆಯ ಮಾತಿಗೆ ಚಪ್ಪಾಳೆ ತಟ್ಟಿ ಪ್ರತಿಕ್ರಿಯಿಸಿದ ಅಳಿಲು ಮರಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಮಹಿಳೆಯೂ ಅಳಿಲಿನ ಮರಿ ಜತೆಗೆ ನಡೆಸಿದ ಮುದ್ದಾದ ಸಂಭಾಷಣೆಯ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕ್ಯೂಟ್ ವಿಡಿಯೋಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಹಿಳೆಯ ಮಾತಿಗೆ ಚಪ್ಪಾಳೆ ತಟ್ಟಿ ಪ್ರತಿಕ್ರಿಯಿಸಿದ ಅಳಿಲು ಮರಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 31, 2026 | 11:41 AM

Share

ಮೂಕ ಪ್ರಾಣಿ ಪಕ್ಷಿಗಳ ಜತೆಗೆ ಮನುಷ್ಯನ ಸಂಭಾಷಣೆಯ ಕ್ಯೂಟ್ ದೃಶ್ಯಗಳು ಆಗಾಗ್ಗೆ ವೈರಲ್ ಆಗುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದೆ. ಮಹಿಳೆಯೊಬ್ಬಳು ಅಳಿಲು ಮರಿ (baby squirrel) ಜತೆಗೆ ಸಂಭಾಷಣೆಯ ನಡೆಸಿದ್ದಾಳೆ. ಮಹಿಳೆ ಚಪ್ಪಾಳೆ ತಟ್ಟುತ್ತಿದ್ದಂತೆ ಅಳಿಲು ಮರಿ ಚಪ್ಪಾಳೆ ತಟ್ಟಿ ಮುದ್ದಾಗಿ ಪ್ರತಿಕ್ರಿಯಿಸಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹಿಳೆಯ ಜತೆಗೆ ಅಳಿಲು ಮರಿಯ ಕ್ಯೂಟ್‌ ಸಂಭಾಷಣೆ

ಗುಲ್ಲಿ ಕಾ ಗುಂಡ (Gully Ka Gunda) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ ತಾಯಿಯಾದವಳು ಈ ಜಗತ್ತಿನಲ್ಲಿ ಎಲ್ಲವನ್ನು ಹಿಡಿತಕ್ಕೆ ತೆಗೆದುಕೊಳ್ಳುತ್ತಾಳೆ ಎಂದು ಶೀರ್ಷಿಕೆ ನೀಡಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮಹಿಳೆಯೊಬ್ಬಳು ಅಳಿಲು ಮರಿ ಮುಂದೆ ಚಪ್ಪಾಳೆ ತಟ್ಟುತ್ತಾ, ಅಳಿಲು ಮರಿಗೆ ಚಪ್ಪಾಳೆ ತಟ್ಟಲು ಹೇಳಿದ್ದಾಳೆ. ಆಕೆಯ ಮಾತಿಗೆ ಸ್ಪಂದಿಸಿದ ಅಳಿಲು ಮರಿ ಚಪ್ಪಾಳೆ ತಟ್ಟಿ ಪ್ರತಿಕ್ರಿಯಿಸಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮನೆಮಾಲೀಕನ ಬಳಿ ಬಾಳೆಹಣ್ಣು ಬೇಕೆಂದು ಹಠ ಹಿಡಿದು ಕುಳಿತ ಮುದ್ದಿನ ಶ್ವಾನ

ಆಗಸ್ಟ್ 26 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಎರಡುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ಮಾತು ನಿಜ ಎಂದಿದ್ದಾರೆ. ಇನ್ನೊಬ್ಬರು, ಮನುಷ್ಯನಿಗೆ ಇರಲಿ , ಪ್ರಾಣಿಗೆ ಇರಲಿ ತಾಯಿಗೆ ಎಲ್ಲವನ್ನು ಕಲಿಸುವ ಶಕ್ತಿಯಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಭಾರತೀಯ ತಾಯಿಗೆ ಮಾತ್ರ ಈ ರೀತಿ ಸಾಧ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!