AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿ ಕಾಮಗಾರಿಗೆಂದು ಅಗೆದಿದ್ದ ಹೊಂಡದಲ್ಲಿ ಬಿದ್ದ ಮಹಿಳೆ, ವಿಡಿಯೋ ವೈರಲ್

Tamil Nadu News: ತಮಿಳುನಾಡಿನ ಅನೇಕ ಪ್ರದೇಶಗಳಲ್ಲಿ ಆರಂಭಿಸಿರುವ ಮಳೆನೀರು ಒಳಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಇದು ಸಾರ್ವಜನಿಕರಿಗೆ ಕಟ್ಟಿಟ್ಟ ಅಪಾಯದ ಬುತ್ತಿ.

ಚರಂಡಿ ಕಾಮಗಾರಿಗೆಂದು ಅಗೆದಿದ್ದ ಹೊಂಡದಲ್ಲಿ ಬಿದ್ದ ಮಹಿಳೆ, ವಿಡಿಯೋ ವೈರಲ್
ಹೊಂಡದಲ್ಲಿ ಬಿದ್ದ ಮಹಿಳೆ
TV9 Web
| Updated By: Digi Tech Desk|

Updated on:Oct 07, 2022 | 1:17 PM

Share

Viral Video : ಎಲ್ಲೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಅನೇಕ ಅವಘಡಗಳು ಸಂಭವಿಸುತ್ತಿವೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುತ್ತಿದೆ. ತಮಿಳುನಾಡಿನ ಚೆಂಗಲ್‌ಪೇಟೆಯ ಮಹಿಳೆಯೊಬ್ಬರು ಮಳೆನೀರಿನ ಚರಂಡಿ ಕಾಮಗಾರಿಗಾಗಿ ಅಗೆದಿದ್ದ ಹೊಂಡದಲ್ಲಿ ಬಿದ್ದಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಗುರುವಾರ ಸುರಿದ ಭಾರೀ ಮಳೆಯಿಂದಾಗಿ ಹೊಂಡವು ತುಂಬಿಹೋಗಿತ್ತು. ಇದನ್ನು ಗಮನಿಸದ ಆ ಮಹಿಳೆ ತಮ್ಮ ಮನೆಯ ಎದುರಿಗೆ ತೋಡಿದ್ದ ಹೊಂಡಕ್ಕೆ ಬಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗುತ್ತಿದೆ.

ವಾರ್ಡ್ ನಂಬರ್ 12ರ ನಿವಾಸಿಯಾಗಿರುವ ಈ ಮಹಿಳೆ ತಮ್ಮ ಮನೆಯಿಂದ ಹೊರಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಎದೆಮಟ್ಟದ ತನಕ ನೀರು ಆವರಿಸಿದರೂ ಧೈರ್ಯದಿಂದ ಯಶಸ್ವಿಯಾಗಿ ಹೊಂಡವನ್ನು ದಾಟಿಕೊಂಡು ಹೊರಬಂದಿದ್ದಾರೆ. ನಂತರ ಸ್ಥಳೀಯರು ರಸ್ತೆದಾಟಲು ಈಕೆಗೆ ಸಹಾಯ ಮಾಡಿದ್ದಾರೆ. ಯಾವುದೇ ಗಾಯನೋವುಗಳು ಸಂಭವಿಸಿಲ್ಲದೇ ಇರುವುದು ಅದೃಷ್ಟ.

ಮಾನ್ಸೂನ್​ ಪೂರ್ವ ಈ ಮಳೆಯು ಮುಡಿಚೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರವಾಗಿ ಸುರಿದಿದೆ. ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರದವರೆಗೂ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಮಧ್ಯೆ, ತಮಿಳುನಾಡಿನ ಅನೇಕ ಪ್ರದೇಶಗಳಲ್ಲಿ ಆರಂಭಿಸಿರುವ ಮಳೆನೀರು ಒಳಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಇದು ಸಾರ್ವಜನಿಕರಿಗೆ ಕಟ್ಟಿಟ್ಟ ಅಪಾಯದ ಬುತ್ತಿ. ಸೆಪ್ಟೆಂಬರ್​ನಲ್ಲಿ ಚೆನ್ನೈ ಹೊರವಲಯದಲ್ಲಿ ಅಗೆದಿದ್ದ ಮಳೆನೀರಿನ ಚರಂಡಿಯೊಳಗೆ ವ್ಯಕ್ತಿಯೊಬ್ಬ ಬೈಕ್​ಸಮೇತ ಬಿದ್ದಿದ್ದ ಘಟನೆಯನ್ನು ಇಲ್ಲಿ ಸ್ಮರಿಸಬಹುದು.

Published On - 1:08 pm, Fri, 7 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ