AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ

ಮಹಿಳೆಯೊಬ್ಬರು ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಲೇ ಡ್ರೈವರ್​ ಬಸ್​ ಅನ್ನು ಆಸ್ಪತ್ರೆಯ ಕಡೆಗೆ ತೆಗೆದುಕೊಂಡು ಹೋಗಿದ್ದಾನೆ.

ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ
ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
TV9 Web
| Edited By: |

Updated on:Jan 15, 2022 | 4:50 PM

Share

ಮನುಷ್ಯನ ಹುಟ್ಟು ಸಾವು ಎರಡೂ ಯಾವಾಗ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹುಟ್ಟಿಗಾಗಲೀ ಸಾವಿಗಾಗಲೀ ಇಂತಹದ್ದೇ ಜಾಗ ಆಗಬೇಕೆಂದಿಲ್ಲ. ಇದೀಗ ಬಸ್​ನಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ (Birth) ನೀಡಿದ ಘಟನೆ ನಡೆದಿದೆ. ಬ್ರೆಜಿಲ್​ನ ರಿಯೋ ಡಿ ಜನೈರೋ ( Rio de Janeiro)ದಲ್ಲಿ ಈ ಘಟನೆ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಿದ್ದಂತೆ ಇತರ ಪ್ರಯಾಣಿಕರು ಆಕೆಗೆ ಸಹಾಯದ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral)​ ಆಗಿದ್ದು ನೆಟ್ಟಿಗರ ಮನ ಗೆದ್ದಿದೆ.

ಗುಡ್​ನ್ಯೂಸ್​ ಮೂಮೆಂಟ್​ ಎನ್ನುವ ಇನ್ಸ್ಟಾಗ್ರಾಮ್​ ಪುಟ ಈ ವಿಡಿಯೋವನ್ನು ಹಂಚಿಕೊಂಡಿದೆ. ಮಹಿಳೆಯೊಬ್ಬರು ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಲೇ ಡ್ರೈವರ್​ ಬಸ್​ ಅನ್ನು ಆಸ್ಪತ್ರೆಯ ಕಡೆಗೆ ತೆಗೆದುಕೊಂಡು ಹೋಗಿದ್ದಾನೆ. ರಿಯೊ ಡಿ ಜನೈರೋದ ರೋಚಾ ಫರಿಯಾ ಆಸ್ಪತ್ರೆಗೆ ಮಹಿಳೆಯನ್ನು ಕರೆದೊಯ್ಯಲಾಯಿತು. ಅಲ್ಲಿಯ ಸಿಬ್ಬಂದಿಯ ಸಹಾಯ ಪಡೆದು ಸುಸೂತ್ರವಾಗಿ ಹೆರಿಗೆ ಮಾಡಿಸಲಾಗಿದೆ. ಬಸ್​ನಲ್ಲಿದ್ದ ಸಹ ಪ್ರಯಾಣಿಕರು ಕೂಡ ಮಹಿಳೆಗೆ ಸಹಾಯಮಾಡಿದ್ದಾರೆ. ಮಹಿಳೆ ಗಂಡು ಮಗುವುಗೆ ಜನ್ಮ ನೀಡಿದ್ದಾರೆ ಎಂದು ಮಾಹಿತಿ ಮೂಲಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆರೋಗ್ಯ ಇಲಾಖೆಯ ಹೇಳಿಕೆ ಉಲ್ಲೇಖಿಸಿ ತಾಯಿ ಮತ್ತು ಶಿಶು ಸುರಕ್ಷಿತವಾಗಿದ್ದಾರೆ ಎಂಬುದಾಗಿಯೂ  ಗುಡ್​ನ್ಯೂಸ್​ ಮೂಮೆಂಟ್​ ಮಾಹಿತಿ ಹಂಚಿಕೊಂಡಿದೆ.

ವಿಡಿಯೋ ಹಂಚಿಕೊಂಡಾಗಿನಿಂದ ಈ ವರೆಗೆ 16 ಗಂಟೆಗಳಲ್ಲಿ 50 ಸಾವಿರ ಲೈಕ್ಸ್​ಗಳನ್ನು ಪಡೆದಿದ್ದು, ಜಗತ್ತಿನಾದ್ಯಂತ ವಿಡಿಯೋ ವೈರಲ್​ ಅಗಿದೆ. ವಿಡಿಯೋ ನೋಡಿ ನೆಟ್ಟಿಗರು ಮಾನವೀಯತೆ ಇನ್ನೂ ಜೀವಂತವಾಗಿದೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಕರ್ಮ ರಿಟರ್ನ್ಸ್​: ಬಾಲವನ್ನು ಎಳೆಯಲು ಹೋದವನನ್ನು ಒದ್ದು ಬೀಳಿಸಿದ ಒಂಟೆ; ವಿಡಿಯೋ ವೈರಲ್​​

Published On - 4:48 pm, Sat, 15 January 22

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!