AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ

ಮಹಿಳೆಯೊಬ್ಬರು ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಲೇ ಡ್ರೈವರ್​ ಬಸ್​ ಅನ್ನು ಆಸ್ಪತ್ರೆಯ ಕಡೆಗೆ ತೆಗೆದುಕೊಂಡು ಹೋಗಿದ್ದಾನೆ.

ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ
ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
TV9 Web
| Edited By: |

Updated on:Jan 15, 2022 | 4:50 PM

Share

ಮನುಷ್ಯನ ಹುಟ್ಟು ಸಾವು ಎರಡೂ ಯಾವಾಗ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹುಟ್ಟಿಗಾಗಲೀ ಸಾವಿಗಾಗಲೀ ಇಂತಹದ್ದೇ ಜಾಗ ಆಗಬೇಕೆಂದಿಲ್ಲ. ಇದೀಗ ಬಸ್​ನಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ (Birth) ನೀಡಿದ ಘಟನೆ ನಡೆದಿದೆ. ಬ್ರೆಜಿಲ್​ನ ರಿಯೋ ಡಿ ಜನೈರೋ ( Rio de Janeiro)ದಲ್ಲಿ ಈ ಘಟನೆ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಿದ್ದಂತೆ ಇತರ ಪ್ರಯಾಣಿಕರು ಆಕೆಗೆ ಸಹಾಯದ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral)​ ಆಗಿದ್ದು ನೆಟ್ಟಿಗರ ಮನ ಗೆದ್ದಿದೆ.

ಗುಡ್​ನ್ಯೂಸ್​ ಮೂಮೆಂಟ್​ ಎನ್ನುವ ಇನ್ಸ್ಟಾಗ್ರಾಮ್​ ಪುಟ ಈ ವಿಡಿಯೋವನ್ನು ಹಂಚಿಕೊಂಡಿದೆ. ಮಹಿಳೆಯೊಬ್ಬರು ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಲೇ ಡ್ರೈವರ್​ ಬಸ್​ ಅನ್ನು ಆಸ್ಪತ್ರೆಯ ಕಡೆಗೆ ತೆಗೆದುಕೊಂಡು ಹೋಗಿದ್ದಾನೆ. ರಿಯೊ ಡಿ ಜನೈರೋದ ರೋಚಾ ಫರಿಯಾ ಆಸ್ಪತ್ರೆಗೆ ಮಹಿಳೆಯನ್ನು ಕರೆದೊಯ್ಯಲಾಯಿತು. ಅಲ್ಲಿಯ ಸಿಬ್ಬಂದಿಯ ಸಹಾಯ ಪಡೆದು ಸುಸೂತ್ರವಾಗಿ ಹೆರಿಗೆ ಮಾಡಿಸಲಾಗಿದೆ. ಬಸ್​ನಲ್ಲಿದ್ದ ಸಹ ಪ್ರಯಾಣಿಕರು ಕೂಡ ಮಹಿಳೆಗೆ ಸಹಾಯಮಾಡಿದ್ದಾರೆ. ಮಹಿಳೆ ಗಂಡು ಮಗುವುಗೆ ಜನ್ಮ ನೀಡಿದ್ದಾರೆ ಎಂದು ಮಾಹಿತಿ ಮೂಲಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆರೋಗ್ಯ ಇಲಾಖೆಯ ಹೇಳಿಕೆ ಉಲ್ಲೇಖಿಸಿ ತಾಯಿ ಮತ್ತು ಶಿಶು ಸುರಕ್ಷಿತವಾಗಿದ್ದಾರೆ ಎಂಬುದಾಗಿಯೂ  ಗುಡ್​ನ್ಯೂಸ್​ ಮೂಮೆಂಟ್​ ಮಾಹಿತಿ ಹಂಚಿಕೊಂಡಿದೆ.

ವಿಡಿಯೋ ಹಂಚಿಕೊಂಡಾಗಿನಿಂದ ಈ ವರೆಗೆ 16 ಗಂಟೆಗಳಲ್ಲಿ 50 ಸಾವಿರ ಲೈಕ್ಸ್​ಗಳನ್ನು ಪಡೆದಿದ್ದು, ಜಗತ್ತಿನಾದ್ಯಂತ ವಿಡಿಯೋ ವೈರಲ್​ ಅಗಿದೆ. ವಿಡಿಯೋ ನೋಡಿ ನೆಟ್ಟಿಗರು ಮಾನವೀಯತೆ ಇನ್ನೂ ಜೀವಂತವಾಗಿದೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಕರ್ಮ ರಿಟರ್ನ್ಸ್​: ಬಾಲವನ್ನು ಎಳೆಯಲು ಹೋದವನನ್ನು ಒದ್ದು ಬೀಳಿಸಿದ ಒಂಟೆ; ವಿಡಿಯೋ ವೈರಲ್​​

Published On - 4:48 pm, Sat, 15 January 22

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು