AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ

ಮಹಿಳೆಯೊಬ್ಬರು ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಲೇ ಡ್ರೈವರ್​ ಬಸ್​ ಅನ್ನು ಆಸ್ಪತ್ರೆಯ ಕಡೆಗೆ ತೆಗೆದುಕೊಂಡು ಹೋಗಿದ್ದಾನೆ.

ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಹ ಪ್ರಯಾಣಿಕರ ಸಹಕಾರಕ್ಕೆ ಭಾರೀ ಮೆಚ್ಚುಗೆ
ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
TV9 Web
| Edited By: |

Updated on:Jan 15, 2022 | 4:50 PM

Share

ಮನುಷ್ಯನ ಹುಟ್ಟು ಸಾವು ಎರಡೂ ಯಾವಾಗ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹುಟ್ಟಿಗಾಗಲೀ ಸಾವಿಗಾಗಲೀ ಇಂತಹದ್ದೇ ಜಾಗ ಆಗಬೇಕೆಂದಿಲ್ಲ. ಇದೀಗ ಬಸ್​ನಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ (Birth) ನೀಡಿದ ಘಟನೆ ನಡೆದಿದೆ. ಬ್ರೆಜಿಲ್​ನ ರಿಯೋ ಡಿ ಜನೈರೋ ( Rio de Janeiro)ದಲ್ಲಿ ಈ ಘಟನೆ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಿದ್ದಂತೆ ಇತರ ಪ್ರಯಾಣಿಕರು ಆಕೆಗೆ ಸಹಾಯದ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral)​ ಆಗಿದ್ದು ನೆಟ್ಟಿಗರ ಮನ ಗೆದ್ದಿದೆ.

ಗುಡ್​ನ್ಯೂಸ್​ ಮೂಮೆಂಟ್​ ಎನ್ನುವ ಇನ್ಸ್ಟಾಗ್ರಾಮ್​ ಪುಟ ಈ ವಿಡಿಯೋವನ್ನು ಹಂಚಿಕೊಂಡಿದೆ. ಮಹಿಳೆಯೊಬ್ಬರು ಬಸ್​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಲೇ ಡ್ರೈವರ್​ ಬಸ್​ ಅನ್ನು ಆಸ್ಪತ್ರೆಯ ಕಡೆಗೆ ತೆಗೆದುಕೊಂಡು ಹೋಗಿದ್ದಾನೆ. ರಿಯೊ ಡಿ ಜನೈರೋದ ರೋಚಾ ಫರಿಯಾ ಆಸ್ಪತ್ರೆಗೆ ಮಹಿಳೆಯನ್ನು ಕರೆದೊಯ್ಯಲಾಯಿತು. ಅಲ್ಲಿಯ ಸಿಬ್ಬಂದಿಯ ಸಹಾಯ ಪಡೆದು ಸುಸೂತ್ರವಾಗಿ ಹೆರಿಗೆ ಮಾಡಿಸಲಾಗಿದೆ. ಬಸ್​ನಲ್ಲಿದ್ದ ಸಹ ಪ್ರಯಾಣಿಕರು ಕೂಡ ಮಹಿಳೆಗೆ ಸಹಾಯಮಾಡಿದ್ದಾರೆ. ಮಹಿಳೆ ಗಂಡು ಮಗುವುಗೆ ಜನ್ಮ ನೀಡಿದ್ದಾರೆ ಎಂದು ಮಾಹಿತಿ ಮೂಲಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆರೋಗ್ಯ ಇಲಾಖೆಯ ಹೇಳಿಕೆ ಉಲ್ಲೇಖಿಸಿ ತಾಯಿ ಮತ್ತು ಶಿಶು ಸುರಕ್ಷಿತವಾಗಿದ್ದಾರೆ ಎಂಬುದಾಗಿಯೂ  ಗುಡ್​ನ್ಯೂಸ್​ ಮೂಮೆಂಟ್​ ಮಾಹಿತಿ ಹಂಚಿಕೊಂಡಿದೆ.

ವಿಡಿಯೋ ಹಂಚಿಕೊಂಡಾಗಿನಿಂದ ಈ ವರೆಗೆ 16 ಗಂಟೆಗಳಲ್ಲಿ 50 ಸಾವಿರ ಲೈಕ್ಸ್​ಗಳನ್ನು ಪಡೆದಿದ್ದು, ಜಗತ್ತಿನಾದ್ಯಂತ ವಿಡಿಯೋ ವೈರಲ್​ ಅಗಿದೆ. ವಿಡಿಯೋ ನೋಡಿ ನೆಟ್ಟಿಗರು ಮಾನವೀಯತೆ ಇನ್ನೂ ಜೀವಂತವಾಗಿದೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಕರ್ಮ ರಿಟರ್ನ್ಸ್​: ಬಾಲವನ್ನು ಎಳೆಯಲು ಹೋದವನನ್ನು ಒದ್ದು ಬೀಳಿಸಿದ ಒಂಟೆ; ವಿಡಿಯೋ ವೈರಲ್​​

Published On - 4:48 pm, Sat, 15 January 22

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ