AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಸ್ಸಿಗೆ ಹಾಯ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ವಿಡಿಯೋ ವೈರಲ್

Woman : ಸಿಸಿ ಕ್ಯಾಮೆರಾದಲ್ಲಿ ಈ ದುರಂತ ಸೆರೆಯಾಗಿದೆ. ತಾನು ಸತ್ತರೆ ತನ್ನ ಮಗನ ಕಾಲೇಜು ಶುಲ್ಕಕ್ಕೆ ಸರಕಾರ ಸಹಾಯ ಮಾಡಬಹುದು ಎಂಬ ಆಶಯದಿಂದ ಈಕೆ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಈ ಟ್ವೀಟ್ ಹೇಳುತ್ತಿದೆ.

Viral Video: ಬಸ್ಸಿಗೆ ಹಾಯ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ವಿಡಿಯೋ ವೈರಲ್
ಬಸ್ಸಿಗೆ ತಾನಾಗಿಯೇ ಹಾಯ್ದು ಮೃತಪಟ್ಟ ಮಹಿಳೆ
ಶ್ರೀದೇವಿ ಕಳಸದ
|

Updated on: Jul 18, 2023 | 10:25 AM

Share

Accident : ಈಕೆ ಇಷ್ಟೊಂದು ವೇಗದಲ್ಲಿ ಯಾಕೆ ನಡೆಯುತ್ತಿದ್ದಾಳೆ ಎಂದು ಯೋಚಿಸುತ್ತಿರುವಾಗಲೇ ಎದುರಿಗೆ ಬಂದ ಬಸ್ಸಿಗೆ ಈಕೆ ತಾನಾಗಿಯೇ ಹಾಯ್ದುಬಿಡುತ್ತಾಳೆ. ಈ ದೃಶ್ಯ ಯಾರ ಎದೆಯನ್ನೂ ನಡುಗಿಸುವಂತಿದೆ. ‘ತನ್ನ ಸಾವಿನಿಂದಾಗಿ ತನ್ನ ಕುಟುಂಬಕ್ಕೆ ಸರ್ಕಾರ ಹಣ ಸಹಾಯ ಮಾಡಬಹುದು, ಮಗನ ಕಾಲೇಜು ಶುಲ್ಕ ಪಾವತಿಸಲು ಅನುಕೂಲವಾಗಬಹುದು ಎಂಬ ಆಶಯದಿಂದ ಈ ತಾಯಿ ಬಸ್ಸಿಗೆ ಹಾಯ್ದು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.’ ಎಂದು ಪ್ರೊ. ಅಶೋಕ ಸ್ವೈನ್​ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಇದು ಯಾವ ರಾಜ್ಯದಲ್ಲಿ ನಡೆದಿದೆ ಮತ್ತು ಈಕೆಯ ಹಿನ್ನೆಲೆ ಏನು, ಆತ್ಮಹತ್ಯೆಗೆ ಕಾರಣವೇನು ಎನ್ನುವುದಕ್ಕೆ ಸ್ಪಷ್ಟವಾದ ಕಾರಣಗಳು ತಿಳಿದುಬಂದಿಲ್ಲ. ಆದರೆ ನೆಟ್ಟಿಗರು ಈ ದೃಶ್ಯ ನೋಡಿ ಮರಗುತ್ತಿದ್ದಾರೆ. ಅವರ ಚರ್ಚೆ ಬಡವರು, ಶ್ರೀಮಂತರು, ಮತ್ತು ರಾಜಕಾರಣಿಗಳ ಸುತ್ತ ತಿರುಗುತ್ತಿದೆ. ಈಗಾಗಲೇ ಈ ವಿಡಿಯೋ ಅನ್ನು, 1 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. ಸುಮಾರು 800ಕ್ಕೂ ಹೆಚ್ಚು ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Viral Video: ಥಟ್​ ಅಂತ ಹೇಳಿ! ಇವರನ್ನು ಹೀಗೆ ಬೇಸರಗೊಳಿಸಿದ್ದು ಯಾರು?

ಇದು ಕಳೆದ ತಿಂಗಳು ಒಡಿಶಾದಲ್ಲಿ ನಡೆದಿತ್ತು. ವಿಶ್ವಗುರುವಿನ ಯುಗದಲ್ಲಿ ಶಿಕ್ಷಣಕ್ಕಾಗಿ ಎಂಥ ದುರಂತಕ್ಕೆ ನಾವೆಲ್ಲ ಸಾಕ್ಷಿಯಾಗಬೇಕಿದೆ, ಬಹಳ ದುಃಖವಾಗುತ್ತಿದೆ ಎಂದಿದ್ದಾರೆ ಒಬ್ಬರು. ನಮ್ಮ ದೇಶದಲ್ಲಿ ಇನ್ನೂ ಬಡತನವಿದೆ ಎಂದರೆ ಇದು ನಾಚಿಕೆಯಿಂದ ತಲೆತಗ್ಗಿಸುವಂಥ ವಿಷಯ. ರಾಜಕಾರಣಿಗಳು ಶ್ರೀಮಂತ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡುವಲ್ಲಿ ಮುಳುಗಿದ್ದಾರೆ. ಹಾಗಾಗಿ ಬಡವರು ಬಡವರಾಗಿಯೇ ಉಳಿದು ಅದರ ಭಾರ ತಾಳಲಾರದೆ ಇಂಥ ನಿರ್ಧಾರಕ್ಕೆ ಬರಬೇಕಾಗುತ್ತಿರುವುದು ವಿಷಾದನೀಯ ಎಂದಿದ್ಧಾರೆ ಇನ್ನೊಬ್ಬರು.

ಇದನ್ನೂ ಓದಿ : Viral: ಪಾಕಿಸ್ತಾನ; ಕರಾಚಿಯಲ್ಲಿ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ

ಈ ಘಟನೆಯ ಬಗ್ಗೆ ಈಕೆ ನಿಮಗೆ ಹಿಂದಿನ ದಿನ ಮೆಸೇಜ್ ಕಳಿಸಿದ್ದಳೇ? ಎಂದು ಕೊಂಕಾಡಿದ್ದಾರೆ ಒಬ್ಬರು. ಇದನ್ನು ಆತ್ಮಹತ್ಯೆ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಆದರೆ ಈಕೆ ಹೀಗೆ ಜೀವ ಕಳೆದುಕೊಂಡು ಡ್ರೈವರ್​ ಜೀವನಪರ್ಯಂತ ಆಘಾತದಲ್ಲಿ ಉಳಿಯುವಂತೆ ಮಾಡಿದಳೇನೋ ಎಂದು ಇನ್ನೊಬ್ಬರು ಹೇಳಿದ್ದಾರೆ. ಆನಂದ್​ ಮಹೀಂದ್ರಾ ಈ ವಿಡಿಯೋ ನೋಡಿದರೆ ಇದರಲ್ಲೂ ಏನಾದರೂ ಸ್ಫೂರ್ತಿದಾಯಕ ವಿಷಯವನ್ನು ಕಂಡುಕೊಳ್ಳುತ್ತಾರೆ ಹಾಗಾಗಿ ಈ ವಿಡಿಯೋ ಹೈಡ್ ಮಾಡಿ ಎಂದಿದ್ದಾರೆ ಇನ್ನೂ ಒಬ್ಬರು.

ಒಟ್ಟಿನಲ್ಲಿ ಒಂದು ಜೀವ ತಾನಾಗಿಯೇ ಹೀಗೆ ಜೀವ ಕಳೆದುಕೊಳ್ಳುತ್ತದೆ ಎಂದರೆ ಅದಕ್ಕೆ ಸಮಾಜವೇ ಹೊಣೆ. ಕಾರಣಗಳು ಏನೇ ಇರಬಹುದು.

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!