Viral Video: ಬಸ್ಸಿಗೆ ಹಾಯ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ವಿಡಿಯೋ ವೈರಲ್

Woman : ಸಿಸಿ ಕ್ಯಾಮೆರಾದಲ್ಲಿ ಈ ದುರಂತ ಸೆರೆಯಾಗಿದೆ. ತಾನು ಸತ್ತರೆ ತನ್ನ ಮಗನ ಕಾಲೇಜು ಶುಲ್ಕಕ್ಕೆ ಸರಕಾರ ಸಹಾಯ ಮಾಡಬಹುದು ಎಂಬ ಆಶಯದಿಂದ ಈಕೆ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಈ ಟ್ವೀಟ್ ಹೇಳುತ್ತಿದೆ.

Viral Video: ಬಸ್ಸಿಗೆ ಹಾಯ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ವಿಡಿಯೋ ವೈರಲ್
ಬಸ್ಸಿಗೆ ತಾನಾಗಿಯೇ ಹಾಯ್ದು ಮೃತಪಟ್ಟ ಮಹಿಳೆ
Follow us
|

Updated on: Jul 18, 2023 | 10:25 AM

Accident : ಈಕೆ ಇಷ್ಟೊಂದು ವೇಗದಲ್ಲಿ ಯಾಕೆ ನಡೆಯುತ್ತಿದ್ದಾಳೆ ಎಂದು ಯೋಚಿಸುತ್ತಿರುವಾಗಲೇ ಎದುರಿಗೆ ಬಂದ ಬಸ್ಸಿಗೆ ಈಕೆ ತಾನಾಗಿಯೇ ಹಾಯ್ದುಬಿಡುತ್ತಾಳೆ. ಈ ದೃಶ್ಯ ಯಾರ ಎದೆಯನ್ನೂ ನಡುಗಿಸುವಂತಿದೆ. ‘ತನ್ನ ಸಾವಿನಿಂದಾಗಿ ತನ್ನ ಕುಟುಂಬಕ್ಕೆ ಸರ್ಕಾರ ಹಣ ಸಹಾಯ ಮಾಡಬಹುದು, ಮಗನ ಕಾಲೇಜು ಶುಲ್ಕ ಪಾವತಿಸಲು ಅನುಕೂಲವಾಗಬಹುದು ಎಂಬ ಆಶಯದಿಂದ ಈ ತಾಯಿ ಬಸ್ಸಿಗೆ ಹಾಯ್ದು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.’ ಎಂದು ಪ್ರೊ. ಅಶೋಕ ಸ್ವೈನ್​ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಇದು ಯಾವ ರಾಜ್ಯದಲ್ಲಿ ನಡೆದಿದೆ ಮತ್ತು ಈಕೆಯ ಹಿನ್ನೆಲೆ ಏನು, ಆತ್ಮಹತ್ಯೆಗೆ ಕಾರಣವೇನು ಎನ್ನುವುದಕ್ಕೆ ಸ್ಪಷ್ಟವಾದ ಕಾರಣಗಳು ತಿಳಿದುಬಂದಿಲ್ಲ. ಆದರೆ ನೆಟ್ಟಿಗರು ಈ ದೃಶ್ಯ ನೋಡಿ ಮರಗುತ್ತಿದ್ದಾರೆ. ಅವರ ಚರ್ಚೆ ಬಡವರು, ಶ್ರೀಮಂತರು, ಮತ್ತು ರಾಜಕಾರಣಿಗಳ ಸುತ್ತ ತಿರುಗುತ್ತಿದೆ. ಈಗಾಗಲೇ ಈ ವಿಡಿಯೋ ಅನ್ನು, 1 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. ಸುಮಾರು 800ಕ್ಕೂ ಹೆಚ್ಚು ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Viral Video: ಥಟ್​ ಅಂತ ಹೇಳಿ! ಇವರನ್ನು ಹೀಗೆ ಬೇಸರಗೊಳಿಸಿದ್ದು ಯಾರು?

ಇದು ಕಳೆದ ತಿಂಗಳು ಒಡಿಶಾದಲ್ಲಿ ನಡೆದಿತ್ತು. ವಿಶ್ವಗುರುವಿನ ಯುಗದಲ್ಲಿ ಶಿಕ್ಷಣಕ್ಕಾಗಿ ಎಂಥ ದುರಂತಕ್ಕೆ ನಾವೆಲ್ಲ ಸಾಕ್ಷಿಯಾಗಬೇಕಿದೆ, ಬಹಳ ದುಃಖವಾಗುತ್ತಿದೆ ಎಂದಿದ್ದಾರೆ ಒಬ್ಬರು. ನಮ್ಮ ದೇಶದಲ್ಲಿ ಇನ್ನೂ ಬಡತನವಿದೆ ಎಂದರೆ ಇದು ನಾಚಿಕೆಯಿಂದ ತಲೆತಗ್ಗಿಸುವಂಥ ವಿಷಯ. ರಾಜಕಾರಣಿಗಳು ಶ್ರೀಮಂತ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡುವಲ್ಲಿ ಮುಳುಗಿದ್ದಾರೆ. ಹಾಗಾಗಿ ಬಡವರು ಬಡವರಾಗಿಯೇ ಉಳಿದು ಅದರ ಭಾರ ತಾಳಲಾರದೆ ಇಂಥ ನಿರ್ಧಾರಕ್ಕೆ ಬರಬೇಕಾಗುತ್ತಿರುವುದು ವಿಷಾದನೀಯ ಎಂದಿದ್ಧಾರೆ ಇನ್ನೊಬ್ಬರು.

ಇದನ್ನೂ ಓದಿ : Viral: ಪಾಕಿಸ್ತಾನ; ಕರಾಚಿಯಲ್ಲಿ ಮಾರಿ ಮಾತಾ ಹಿಂದೂ ದೇವಸ್ಥಾನ ಧ್ವಂಸ

ಈ ಘಟನೆಯ ಬಗ್ಗೆ ಈಕೆ ನಿಮಗೆ ಹಿಂದಿನ ದಿನ ಮೆಸೇಜ್ ಕಳಿಸಿದ್ದಳೇ? ಎಂದು ಕೊಂಕಾಡಿದ್ದಾರೆ ಒಬ್ಬರು. ಇದನ್ನು ಆತ್ಮಹತ್ಯೆ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಆದರೆ ಈಕೆ ಹೀಗೆ ಜೀವ ಕಳೆದುಕೊಂಡು ಡ್ರೈವರ್​ ಜೀವನಪರ್ಯಂತ ಆಘಾತದಲ್ಲಿ ಉಳಿಯುವಂತೆ ಮಾಡಿದಳೇನೋ ಎಂದು ಇನ್ನೊಬ್ಬರು ಹೇಳಿದ್ದಾರೆ. ಆನಂದ್​ ಮಹೀಂದ್ರಾ ಈ ವಿಡಿಯೋ ನೋಡಿದರೆ ಇದರಲ್ಲೂ ಏನಾದರೂ ಸ್ಫೂರ್ತಿದಾಯಕ ವಿಷಯವನ್ನು ಕಂಡುಕೊಳ್ಳುತ್ತಾರೆ ಹಾಗಾಗಿ ಈ ವಿಡಿಯೋ ಹೈಡ್ ಮಾಡಿ ಎಂದಿದ್ದಾರೆ ಇನ್ನೂ ಒಬ್ಬರು.

ಒಟ್ಟಿನಲ್ಲಿ ಒಂದು ಜೀವ ತಾನಾಗಿಯೇ ಹೀಗೆ ಜೀವ ಕಳೆದುಕೊಳ್ಳುತ್ತದೆ ಎಂದರೆ ಅದಕ್ಕೆ ಸಮಾಜವೇ ಹೊಣೆ. ಕಾರಣಗಳು ಏನೇ ಇರಬಹುದು.

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ