AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ಪೋರ್ಟ್​ನಲ್ಲಿ ಆನ್​ಲೈನ್​ ಶಾಪಿಂಗ್​ನಲ್ಲಿ ಕಳೆದು ಹೋಗಿ ವಿಮಾನ ತಪ್ಪಿಸಿಕೊಂಡ ಯುವತಿ

ಬೇಗ ತಾವಂದುಕೊಂಡ ಸ್ಥಳವನ್ನು ತಲುಪಬಹುದು ಎನ್ನುವ ಕಾರಣದಿಂದ ಎಲ್ಲರೂ ಹಣ ಹೆಚ್ಚಾದರೂ ತೊಂದರೆಯಿಲ್ಲ ಎಂದು ವಿಮಾನವನ್ನು ಆಯ್ಕೆ ಮಾಡುತ್ತಾರೆ. ನೀವು ರೈಲು ಅಥವಾ ಬಸ್​ನಲ್ಲಿ ಪ್ರಯಾಣಿಸಬೇಕಿದ್ದರೆ ಒಂದೊಮ್ಮೆ ನೀವು ತಡವಾಗಿ ಆಗಮಿಸಿದರೂ ಬಸ್​, ರೈಲು ಚಲಿಸುತ್ತಿರುವಾಗಲೂ ಓಡಿ ಹೋಗಿ ಹತ್ತಬಹುದು.

ಏರ್​ಪೋರ್ಟ್​ನಲ್ಲಿ ಆನ್​ಲೈನ್​ ಶಾಪಿಂಗ್​ನಲ್ಲಿ ಕಳೆದು ಹೋಗಿ ವಿಮಾನ ತಪ್ಪಿಸಿಕೊಂಡ ಯುವತಿ
ಚೀನಾ ಮಹಿಳೆ
ನಯನಾ ರಾಜೀವ್
|

Updated on:Nov 19, 2023 | 10:54 AM

Share

ಬೇಗ ತಾವಂದುಕೊಂಡ ಸ್ಥಳವನ್ನು ತಲುಪಬಹುದು ಎನ್ನುವ ಕಾರಣದಿಂದ ಎಲ್ಲರೂ ಹಣ ಹೆಚ್ಚಾದರೂ ತೊಂದರೆಯಿಲ್ಲ ಎಂದು ವಿಮಾನವನ್ನು ಆಯ್ಕೆ ಮಾಡುತ್ತಾರೆ. ನೀವು ರೈಲು ಅಥವಾ ಬಸ್​ನಲ್ಲಿ ಪ್ರಯಾಣಿಸಬೇಕಿದ್ದರೆ ಒಂದೊಮ್ಮೆ ನೀವು ತಡವಾಗಿ ಆಗಮಿಸಿದರೂ ಬಸ್​, ರೈಲು ಚಲಿಸುತ್ತಿರುವಾಗಲೂ ಓಡಿ ಹೋಗಿ ಹತ್ತಬಹುದು.

ಆದರೆ ವಿಮಾನದಲ್ಲಿ ಪ್ರಯಾಣಿಸಬೇಕಿದ್ದರೆ ಗಂಟೆಗಟ್ಟಲೆ ಮೊದಲೇ ವಿಮಾನ ನಿಲ್ದಾಣವನ್ನು ತಲುಪಬೇಕು. ತಪಾಸಣೆ ಸೇರಿದಂತೆ ಹಲವು ಪ್ರಕ್ರಿಯೆಗಳನ್ನು ಪೂರೈಸಬೇಕಾಗುತ್ತದೆ. ಆದರೆ ವಿಮಾನವನ್ನು ತಪ್ಪಿಸಿಕೊಂಡರೆ ಓಡಿ ಹೋಗಿ ಹಿಡಿಯಲು ಸಾಧ್ಯವಿಲ್ಲವಲ್ಲವೇ.

ಯುವತಿಯೊಬ್ಬರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ. ಇವರು ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣಕ್ಕೆ ಹೋಗಿದ್ದರು. ಎಲ್ಲಾ ಪ್ರಕ್ರಿಯೆಗಳು ಮುಗಿದಿತ್ತು ಆದರೂ ವಿಮಾನವನ್ನು ತಪ್ಪಿಸಿಕೊಂಡಿದ್ದಾರೆ.

ಮತ್ತಷ್ಟು ಓದಿ: ನೀರಿನೊಳಗೆ ಜಾದು ಪ್ರದರ್ಶನ, ವಿಶ್ವ ದಾಖಲೆ ಬರೆದ 13 ವರ್ಷದ ಪೋರಿ

ಆಕೆ ಬೋರ್ಡಿಂಗ್​ ಗೇಟ್​ನಲ್ಲಿ ಕುಳಿತಿದ್ದಳು, ಹೇಗೂ ವಿಮಾನ ಹೊರಡುವುದು ತಡವಿದೆ ಎಂದು ಆನ್​ಲೈನ್ ಶಾಪಿಂಗ್ ಮಾಡೋಣವೆಂದು ಶಾಪಿಂಗ್ ಆ್ಯಪ್​ನಲ್ಲಿ ಕಳೆದುಹೋಗಿದ್ದಳು. ವಿಮಾನ ಬಂದ ಪರಿವೇ ಆಕೆಗಿರಲಿಲ್ಲ.

ಶಾಂಘೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ, ಬಹಳ ಸಮಯದ ನಂತರ ಪ್ರಯಾಣಿಕರು ಆಕೆಯನ್ನು ಮಾತನಾಡಿಸಿದ್ದಾರೆ, ಆಕೆ ಎಷ್ಟು ಸಮಯ ಆನ್​ಲೈನ್​ ಶಾಪಿಂಗ್​ನಲ್ಲಿ ಕಳೆದಿದ್ದಾಳೆ ಎಂಬುದೂ ಕೂಡ ಅರ್ಥವಾಗಲಿಲ್ಲ. ಶಾಪಿಂಗ್​ ಮಾಡುವ ಉತ್ಸಾಹದಲ್ಲಿ ವಿಮಾನವನ್ನು ತಪ್ಪಿಸಿಕೊಡಿರುವ ವಿಚಾರ ತಿಳಿದು, ವಿಮಾನ ನಿಲ್ದಾಣದಲ್ಲಿ ಬಿದ್ದು ಹೊರಳಾಡಿ ಅತ್ತಿರುವ ವಿಡಿಯೋ ವೈರಲ್ ಆಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Sun, 19 November 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ