Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಸ್​ ಪ್ಯಾಕ್​ ಕವರ್​ನ್ನು ಸೀರೆಯಂತೆ ಹೊಲಿದು ಧರಿಸಿದ ಯುವತಿ; ವಿಡಿಯೋ ವೈರಲ್​

ಲೇಸ್​ ಪ್ಯಾಕ್​ ಕವರ್​ನ ಸೇರೆಯ ವಿಡಿಯೋ ನೋಡಿ ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿ ಸೀರೆಯನ್ನು ಧರಿಸಿವುದಾದರೆ ಹೀಗೆ ಧರಿಸಿ, ಇಲ್ಲವಾದರೆ ಅದನ್ನು ಧರಿಸಬೇಡಿ ಎಂದು ಕಾಮೆಂಟ್ ಮಾಡಿದ್ದಾರೆ.

ಲೇಸ್​ ಪ್ಯಾಕ್​ ಕವರ್​ನ್ನು ಸೀರೆಯಂತೆ ಹೊಲಿದು ಧರಿಸಿದ ಯುವತಿ; ವಿಡಿಯೋ ವೈರಲ್​
ಲೇಸ್​ ಪ್ಯಾಕ್​ ಕವರ್​ ಸೀರೆ ಉಟ್ಟ ಯುವತಿ
Follow us
TV9 Web
| Updated By: Pavitra Bhat Jigalemane

Updated on: Feb 08, 2022 | 12:01 PM

ಫ್ರೆಂಚ್​ ಫ್ರೈಸ್​, ಆಲೋ ಚಿಪ್ಸ್​ಅನ್ನುಬಾಯಿ ಚಪ್ಪರಿಸಿ ತಿನ್ನುವ ನಾವು ಅದರ ಕವರ್​ ಅನ್ನು ಎಲ್ಲೆಂದರಲ್ಲಿ ಬಿಸಾಡುತ್ತೇವೆ. ಇದರಿಂದ ಪ್ಲಾಸ್ಟಿಕ್​ ಭೂಮಿ ಸೇರಿ ಪರಿಸರ ಮಾಲಿನ್ಯ ಉಂಟು ಮಾಡುತ್ತದೆ. ಆಲೂ ಚಿಪ್ಸ್​ಗಳು ಆರೋಗ್ಯಕ್ಕೆ ಒಳತೋ, ಕೆಡುಕೋ ಊಟದ ಜತೆ ಸೈಡ್​​ ಡಿಶ್​ ಎಂದು ಬಳಸುತ್ತೇವೆ. ಟೈಮ್​ ಪಾಸ್​ಗೂ ಇದನ್ನು ತಿನ್ನುತ್ತೇವೆ. ತಿಂದ ಬಳಿಕ ಕವರ್​ ಅನ್ನು  ಎಸೆಯುತ್ತೇವೆ. ಆದರೆ ಇಲ್ಲೊಬ್ಬರು ಮಹಿಳೆ ಅದೇ ಆಲೂಗಡ್ಡೆ ಚಿಪ್ಸ್​ನ ಲೇಸ್​ ಪ್ಯಾಕ್​ನ ಕವರ್ (Potato Chips Wrapper)​ ಅನ್ನು ಸೀರೆಯನ್ನಾಗಿ (Saree) ಮಾಡಿಕೊಂಡಿದ್ದಾರೆ. ಅದನ್ನು ಧರಿಸಿ ಕ್ಯಾಟ್​ ವಾಕ್​ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ (Instagram) ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

View this post on Instagram

A post shared by BeBadass.in (@bebadass.in)

ಇನ್ಸ್ಟಾಗ್ರಾಮ್​ನಲ್ಲಿ ಇದರ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಮಹಿಳೆ ಲೇಸ್​ ಪ್ಯಾಕ್​ನ ಕವರ್​ ಅನ್ನು ಉಲ್ಟಾ ಮಾಡಿ ಸೀರೆಯ ನೆರಿಗೆ ಮತ್ತು ಸೆರಗನ್ನಾಗಿ ಹೊಲಿಸಿಕೊಂಡಿದ್ದಾರೆ. ಕವರ್​ನ ಎದುರು ಭಾಗವನ್ನು ಸೀರೆಯ ಬಾರ್ಡರ್​ಅನ್ನಾಗಿ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ BeBadass.in ಎನ್ನುವ ಖಾತೆ ಹಂಚಿಕೊಂಡಿದೆ. ವಿಡಿಯೋ ಹಂಚಿಕೊಂಡಾಗಿನಿಂದ ಈವರೆಗೆ ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, 55 ಸಾವಿರಕ್ಕೂ ಅಧಿಕ ಲೈಕ್ಸ್​ ಪಡೆದಿದೆ.

ವಿಡಿಯೋ ನೋಡಿ ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿ ಸೀರೆಯನ್ನು ಧರಿಸಿವುದಾದರೆ ಹೀಗೆ ಧರಿಸಿ, ಇಲ್ಲವಾದರೆ ಅದನ್ನು ಧರಿಸಬೇಡಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಸೀರೆಯನ್ನು  ತಿರಸ್ಕರಿಸಿದ್ದು, ಆರೆಂಜ್​ ಕಲ್​ರನ್ಲಿ ಮಾಡಬೇಕಿತ್ತು ಕಾಮೆಂಟ್​ ​ ಮಾಡಿದ್ದಾರೆ. ಸದ್ಯ ವೈರಲ್​ ಆಗಿರುವ ಹೊಸ ವಿನ್ಯಾಸದ ಉಡುಗೆಯ ವಿಡಿಯೋ ಕಂಡು  ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಮನೆಯ ಬಳಿ ಬಂದ ಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಅಧಿಕಾರಿ: ಧೈರ್ಯಕ್ಕೆ ಮೆಚ್ಚಿದ ಜನ

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ