AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಮ ಮಂದಿರ ಥೀಮ್​​​ನಲ್ಲಿ ಮೂಡಿಬಂದ ಕ್ರಿಸ್ಮಸ್ ಕೇಕ್

Christmas: ಇಂದು ಕ್ರಿಸ್ಮಸ್. ವಿಶ್ವದೆಲ್ಲೆಡೇ ಕ್ರಿಸ್ಮಸ್ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ.   ಇನ್ನೂ ಕ್ರಿಸ್ಮಸ್ ಹಬ್ಬದಲ್ಲಿ  ಮುಖ್ಯವಾಗಿ  ಕೇಕ್ ಇರ್ಲೇ ಬೇಕು ಅಲ್ವಾ. ಅನೇಕರು ವಿವಿಧ ಬಗೆಯ ಕೇಕ್​​​ಗಳನ್ನು ಮನೆಯಲ್ಲಿಯೇ ತಯಾರಿದರೆ,  ಇನ್ನೂ ಕೆಲವರು ತಮಗೆ ಬೇಕಾದ ಕೇಕ್​​​ಗಳನ್ನು  ಮಾರುಕಟ್ಟೆಯಿಂದ ಖರೀದಿಸುತ್ತಾರೆ. ಅದೇ ರೀತಿ  ಇಲ್ಲೊಬ್ಬರು ಕೇಕ್ ಆರ್ಟಿಸ್ ಈ ಬಾರಿಯ ಕ್ರಿಸ್ಮಸ್ ಸಲುವಾಗಿ ರಾಮ ಮಂದಿರ ಥೀಮ್ ಅಲ್ಲಿ ವಿಶೇಷವಾದ  ಕೇಕ್ ಒಂದನ್ನು ತಯಾರಿಸಿದ್ದು, ಇದೀಗ ಎಲ್ಲೆಡೆ ಸುದ್ದಿಯಾಗಿದೆ. ಈ ಕುರಿತ ಇಂಟರೆಸ್ಟಿಂಗ್ ವಿಡಿಯೋ ಇಲ್ಲಿದೆ ನೋಡಿ.

Viral Video: ರಾಮ ಮಂದಿರ ಥೀಮ್​​​ನಲ್ಲಿ ಮೂಡಿಬಂದ ಕ್ರಿಸ್ಮಸ್ ಕೇಕ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 25, 2023 | 2:43 PM

Share

ಅಯೋಧ್ಯೆಯಲ್ಲಿ  ನಿರ್ಮಾಣವಾಗುತ್ತಿರುವ ಭವ್ಯವಾದ ರಾಮ ಮಂದಿರ  ಲೋಕಾರ್ಪಣೆಗೆ ಕ್ಷಣಗಣನೆ ಶುರುವಾಗಿದೆ. ಈ ಒಂದು ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು  ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ರಾಮ ಮಂದಿರದಲ್ಲಿ ಜನವರಿ 22 ರಂದು ಶ್ರೀ ರಾಮನ ಪ್ರತಿಷ್ಠೆ, ಮಂದಿರ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಈ ನಡುವೆ ಪವಿತ್ರ ರಾಮಮಂದಿರಕ್ಕೆ  ತಮ್ಮ ಅಳಿಲು ಸೇವೆಯನ್ನು ಸಲ್ಲಿಸಬೇಕೆಂದು ಭಕ್ತರು ಒಂದಲ್ಲಾ ರೂಪದಲ್ಲಿ ರಾಮಮಂದಿರಕ್ಕೆ ತಮ್ಮ ಕೈಲಾದದಷ್ಟು ಕಾಣಿಕೆಯನ್ನು ಸಲ್ಲಿಸುತ್ತಿದ್ದಾರೆ. ಇತ್ತೀಚಿಗೆ  ಗುಜರಾತಿನ ವಜ್ರದ ವ್ಯಾಪಾರಿಯೊಬ್ಬರು, ರಾಮಮಂದಿರಕ್ಕೆ ಉಡುಗೊರೆಯಾಗಿ ನೀಡಲು  ರಾಮ ಮಂದಿರದ ಪರಿಕಲ್ಪನೆಯಲ್ಲಿ ವಜ್ರದ ಹಾರವನ್ನು ತಯಾರಿಸಿ ಸುದ್ದಿಯಲ್ಲಿದ್ದರು. ಹಾಗೇನೆ  ಕೆಲವು ದಿನಗಳ ಹಿಂದೆಯಷ್ಟೆ ಭಕ್ತರೊಬ್ಬರು 45 ದಿನ ಪರಿಮಳ ಸೂಸುವ 108 ಅಡಿ ಉದ್ದದ ಅಗರಬತ್ತಿಯನ್ನು ಶ್ರೀ ರಾಮನಿಗೆ ಕಾಣಿಕೆಯಾಗಿ  ನೀಡಿ ಸುದ್ದಿಯಲ್ಲಿದ್ದರು. ಅದೇ ರೀತಿ ಇಲ್ಲೊಬ್ಬರು ಕೇಕ್ ಆರ್ಟಿಸ್ಟ್ ತಾನು ಕೂಡಾ ರಾಮ ಮಂದಿರದ ಸಲುವಾಗಿ ಏನಾದರೂ ವಿಶಿಷ್ಟವಾದದ್ದು ಮಾಡಬೇಕೆಂದು, ರಾಮ ಮಂದಿರ ಥೀಮ್ ಅಲ್ಲಿ ಕ್ರಿಸ್ಮಸ್ ಕೇಕ್ ಅನ್ನು ತಯಾರಿಸಿದ್ದಾರೆ. ಇದೀಗ ಈ ಸುದ್ದಿ ಎಲ್ಲೆಡೆ ವೈರಲ್ ಆಗಿದೆ.

ಪಶ್ಚಿಮ ಬಂಗಾಳದ ಸಿಲಿಗುರಿಯ ಕೇಕ್ ಆರ್ಟಿಸ್ಟ್  ಪ್ರಿಯಾಂಕ  ಎಂಬವರು  ರಾಮ ಮಂದಿರ ಥೀಮ್ ಅಲ್ಲಿ ಅದ್ಭುತವಾದ ಕೇಕ್ ತಯಾರಿಸಿದ್ದು,  ಜನವರಿ 22 ರಂದು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ, ಇದಕ್ಕೆ ಸಂಬಂಧಿಸಿದಂತೆ ಏನನ್ನಾದರೂ ಮಾಡಲು ಬಯಸಿದ್ದೆ, ಹಾಗಾಗಿ ನಾನು ಕೇಕ್ ಆರ್ಟಿಸ್ಟ್ ಆಗಿರುವುದರಿಂದ  ರಾಮ ಮಂದಿರ ಥೀಮ್ ಅಲ್ಲಿ ಕೇಕ್ ತಯಾರಿಸಿದ್ದೇನೆ ಎಂದು ಪ್ರಿಯಾಂಕ  ಸುದ್ದಿ ಸಂಸ್ಥೆ  ANI ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬನ್ನಿ ಫ್ರೆಂಚ್ ಫ್ರೈಸ್ ಮಾಡೋಣ, ಇಷ್ಟು ಮುದ್ದಾಗಿ ಹೇಳಿಕೊಟ್ರೆ, ಯಾರ್ ತಾನೇ ಕಲಿಯಲ್ಲ ಹೇಳಿ!

ವೈರಲ್​​ ವಿಡಿಯೋ ಇಲ್ಲಿದೆ:

ಡಿಸೆಂಬರ್ 24 ರಂದು ಈ ವಿಡಿಯೋವನ್ನು X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ 411K ವೀಕ್ಷಣೆಗಳನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?