AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತನ್ನ ಸೋದರಸಂಬಂಧಿಯನ್ನೇ ಪ್ರೀತಿಸಿ ಮದುವೆಯಾದ ಯುವತಿ

ಆರು ತಿಂಗಳ ಡೇಟಿಂಗ್ ನಂತರ ಡಿಎನ್‌ಎ ಪರೀಕ್ಷೆಯ ಮೂಲಕ ಇಬ್ಬರೂ ಸೋದರಸಂಬಂಧಿಗಳು ಎಂದು ತಿಳಿಯಿತು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾಳೆ. ಜೊತೆಗೆ ಆತನನ್ನು ತಬ್ಬಿಕೊಂಡು ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ.

Viral: ತನ್ನ ಸೋದರಸಂಬಂಧಿಯನ್ನೇ ಪ್ರೀತಿಸಿ ಮದುವೆಯಾದ ಯುವತಿ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
| Updated By: Ganapathi Sharma|

Updated on:Nov 25, 2023 | 7:02 PM

Share

ಮದುವೆಗೆ ಸಂಬಂಧಿಸಿದಂತೆ ಪ್ರಪಂಚದಾದ್ಯಂತ ವಿಭಿನ್ನ ಸಂಪ್ರದಾಯಗಳು ಇವೆ. ಅವುಗಳಲ್ಲಿ ಸಾಮಾನ್ಯವಾದ ಒಂದು ವಿಷಯವೆಂದರೆ ಬಾಳಸಂಗಾತಿಯನ್ನು ಆಯ್ಕೆ ಮಾಡುವಂತಹ ಸಂದರ್ಭದಲ್ಲಿ ಅವರಿಬ್ಬರ ನಡುವೆ ಯಾವುದೇ ರಕ್ತ ಸಂಬಂಧ ಇರಬಾರದು. ಆದರೆ ಅಮೇರಿಕದ ಯುವತಿಯೊಬ್ಬಳಿಗೆ 6 ತಿಂಗಳ ಡೇಟಿಂಗ್​​ ನಂತರ ತನ್ನ ಪ್ರಿಯಕರ ಸೋದರಸಂಬಂಧಿ ಎಂದು ತಿಳಿದುಬಂದಿದೆ. ಅದರೂ ಕೂಡ ಸಂಬಂಧದಿಂದ ಹೊರಬರದೇ ಮದುವೆಯಾಗಲು ನಿರ್ಧರಿಸಿದ್ದಾರೆ. ಸ್ವತಃ ಈ ವಿಷಯವನ್ನು ಮಹಿಳೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಇದೀಗಾ ಭಾರೀ ಟೀಕೆಗೆ ಕಾರಣವಾಗಿದೆ.

ಈ ವಿಚಿತ್ರ ಪ್ರಕರಣ ಅಮೆರಿಕದ ಉತಾಹ್‌ನಲ್ಲಿ ನಡೆದಿದ್ದು, ಕೆನಾ(20) ಎಂಬ ಯುವತಿ ವೀಡಿಯೊವನ್ನು ಹಂಚಿಕೊಂಡಿದ್ದು, ತನ್ನ ಸಂಗಾತಿಯಾಗಿ ತಾನು ಆಯ್ಕೆ ಮಾಡಿರುವ ವ್ಯಕ್ತಿ ಬೇರೆ ಯಾರೂ ಅಲ್ಲ ತನ್ನ ಸೋದರಸಂಬಂಧಿ ಎಂದು ಬಹಿರಂಗಪಡಿಸಿದ್ದಾಳೆ. ಆರು ತಿಂಗಳ ಡೇಟಿಂಗ್ ನಂತರ ಡಿಎನ್‌ಎ ಪರೀಕ್ಷೆಯ ಮೂಲಕ ಇಬ್ಬರೂ ಸೋದರಸಂಬಂಧಿಗಳು ಎಂದು ತಿಳಿಯಿತು ಎಂದು ಹೇಳಿಕೊಂಡಿದ್ದಾಳೆ. ಜೊತೆಗೆ ಆತನನ್ನು ತಬ್ಬಿಕೊಂಡು ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ.‘

ಇದನ್ನೂ ಓದಿ: ಪುಟ್ಟ ಬಾಲಕಿಯರಿಬ್ಬರ ಪ್ರಾಣ ತೆಗೆದ ಕಣ್ಣಾಮುಚ್ಚಾಲೆ ಆಟ ; ಏನಿದು ಘಟನೆ?

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಟೀಕೆಗೆ ಕಾರಣವಾಗಿದೆ. ಈ ಸಂಬಂಧ ಕಾನೂನುಬಾಹಿರ ಮಾತ್ರವಲ್ಲ, ಅಂತಹ ಸಂಬಂಧದಿಂದ ಹುಟ್ಟುವ ಮಗುವಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನೆಟ್ಟಿಗರು ಬರೆದುಕೊಂಡಿದ್ದಾರೆ. ಸೋದರಸಂಬಂಧಿಗಳ ನಡುವಿನ ವಿವಾಹಗಳನ್ನು ನಿಷೇಧಿಸಲಾಗಿರುವ ಅಮೆರಿಕದ 24 ರಾಜ್ಯಗಳಲ್ಲಿ ಉತಾಹ್ ಕೂಡ ಒಂದಾಗಿದೆ . ಆದರೆ ನ್ಯೂಯಾರ್ಕ್ ಮತ್ತು ಫ್ಲೋರಿಡಾ ಸೇರಿದಂತೆ 19 ಇತರ ಸ್ಥಳಗಳಲ್ಲಿ ಇಂತಹ ಮದುವೆಗಳನ್ನು ಅನುಮತಿಸಲಾಗಿದೆ. ಅದಕ್ಕಾಗಿಯೇ ಮೂಲತಃ ಉತಾಹ್ ಮೂಲದವರಾಗಿದ್ದರೂ, ಕೆನ್ನಾ ಮತ್ತು ಆಕೆಯ ಪತಿ ಈಗ ಸನ್ಶೈನ್ ರಾಜ್ಯದಲ್ಲಿ ವಾಸಿಸುತ್ತಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:53 pm, Sat, 25 November 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ