Viral: ತನ್ನ ಸೋದರಸಂಬಂಧಿಯನ್ನೇ ಪ್ರೀತಿಸಿ ಮದುವೆಯಾದ ಯುವತಿ

ಆರು ತಿಂಗಳ ಡೇಟಿಂಗ್ ನಂತರ ಡಿಎನ್‌ಎ ಪರೀಕ್ಷೆಯ ಮೂಲಕ ಇಬ್ಬರೂ ಸೋದರಸಂಬಂಧಿಗಳು ಎಂದು ತಿಳಿಯಿತು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾಳೆ. ಜೊತೆಗೆ ಆತನನ್ನು ತಬ್ಬಿಕೊಂಡು ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ.

Viral: ತನ್ನ ಸೋದರಸಂಬಂಧಿಯನ್ನೇ ಪ್ರೀತಿಸಿ ಮದುವೆಯಾದ ಯುವತಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Nov 25, 2023 | 7:02 PM

ಮದುವೆಗೆ ಸಂಬಂಧಿಸಿದಂತೆ ಪ್ರಪಂಚದಾದ್ಯಂತ ವಿಭಿನ್ನ ಸಂಪ್ರದಾಯಗಳು ಇವೆ. ಅವುಗಳಲ್ಲಿ ಸಾಮಾನ್ಯವಾದ ಒಂದು ವಿಷಯವೆಂದರೆ ಬಾಳಸಂಗಾತಿಯನ್ನು ಆಯ್ಕೆ ಮಾಡುವಂತಹ ಸಂದರ್ಭದಲ್ಲಿ ಅವರಿಬ್ಬರ ನಡುವೆ ಯಾವುದೇ ರಕ್ತ ಸಂಬಂಧ ಇರಬಾರದು. ಆದರೆ ಅಮೇರಿಕದ ಯುವತಿಯೊಬ್ಬಳಿಗೆ 6 ತಿಂಗಳ ಡೇಟಿಂಗ್​​ ನಂತರ ತನ್ನ ಪ್ರಿಯಕರ ಸೋದರಸಂಬಂಧಿ ಎಂದು ತಿಳಿದುಬಂದಿದೆ. ಅದರೂ ಕೂಡ ಸಂಬಂಧದಿಂದ ಹೊರಬರದೇ ಮದುವೆಯಾಗಲು ನಿರ್ಧರಿಸಿದ್ದಾರೆ. ಸ್ವತಃ ಈ ವಿಷಯವನ್ನು ಮಹಿಳೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಇದೀಗಾ ಭಾರೀ ಟೀಕೆಗೆ ಕಾರಣವಾಗಿದೆ.

ಈ ವಿಚಿತ್ರ ಪ್ರಕರಣ ಅಮೆರಿಕದ ಉತಾಹ್‌ನಲ್ಲಿ ನಡೆದಿದ್ದು, ಕೆನಾ(20) ಎಂಬ ಯುವತಿ ವೀಡಿಯೊವನ್ನು ಹಂಚಿಕೊಂಡಿದ್ದು, ತನ್ನ ಸಂಗಾತಿಯಾಗಿ ತಾನು ಆಯ್ಕೆ ಮಾಡಿರುವ ವ್ಯಕ್ತಿ ಬೇರೆ ಯಾರೂ ಅಲ್ಲ ತನ್ನ ಸೋದರಸಂಬಂಧಿ ಎಂದು ಬಹಿರಂಗಪಡಿಸಿದ್ದಾಳೆ. ಆರು ತಿಂಗಳ ಡೇಟಿಂಗ್ ನಂತರ ಡಿಎನ್‌ಎ ಪರೀಕ್ಷೆಯ ಮೂಲಕ ಇಬ್ಬರೂ ಸೋದರಸಂಬಂಧಿಗಳು ಎಂದು ತಿಳಿಯಿತು ಎಂದು ಹೇಳಿಕೊಂಡಿದ್ದಾಳೆ. ಜೊತೆಗೆ ಆತನನ್ನು ತಬ್ಬಿಕೊಂಡು ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ.‘

ಇದನ್ನೂ ಓದಿ: ಪುಟ್ಟ ಬಾಲಕಿಯರಿಬ್ಬರ ಪ್ರಾಣ ತೆಗೆದ ಕಣ್ಣಾಮುಚ್ಚಾಲೆ ಆಟ ; ಏನಿದು ಘಟನೆ?

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಟೀಕೆಗೆ ಕಾರಣವಾಗಿದೆ. ಈ ಸಂಬಂಧ ಕಾನೂನುಬಾಹಿರ ಮಾತ್ರವಲ್ಲ, ಅಂತಹ ಸಂಬಂಧದಿಂದ ಹುಟ್ಟುವ ಮಗುವಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನೆಟ್ಟಿಗರು ಬರೆದುಕೊಂಡಿದ್ದಾರೆ. ಸೋದರಸಂಬಂಧಿಗಳ ನಡುವಿನ ವಿವಾಹಗಳನ್ನು ನಿಷೇಧಿಸಲಾಗಿರುವ ಅಮೆರಿಕದ 24 ರಾಜ್ಯಗಳಲ್ಲಿ ಉತಾಹ್ ಕೂಡ ಒಂದಾಗಿದೆ . ಆದರೆ ನ್ಯೂಯಾರ್ಕ್ ಮತ್ತು ಫ್ಲೋರಿಡಾ ಸೇರಿದಂತೆ 19 ಇತರ ಸ್ಥಳಗಳಲ್ಲಿ ಇಂತಹ ಮದುವೆಗಳನ್ನು ಅನುಮತಿಸಲಾಗಿದೆ. ಅದಕ್ಕಾಗಿಯೇ ಮೂಲತಃ ಉತಾಹ್ ಮೂಲದವರಾಗಿದ್ದರೂ, ಕೆನ್ನಾ ಮತ್ತು ಆಕೆಯ ಪತಿ ಈಗ ಸನ್ಶೈನ್ ರಾಜ್ಯದಲ್ಲಿ ವಾಸಿಸುತ್ತಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:53 pm, Sat, 25 November 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್