AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಮಾನದಲ್ಲಿ ಮಾಸ್ಕ್​ ತೆಗೆದು ಆಹಾರ ಸೇವಿಸಿದ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ

ಮಹಿಳೆ ಹಾಗೂ ವೃದ್ಧನ ನಡುವೆ ಗಲಾಟೆಯನ್ನು ತಪ್ಪಿಸಲು ಮಧ್ಯ ಬಂದ ವಿಮಾನ ಸಿಬ್ಬಂದಿ ಮಹಿಳೆಗೆ ಸರಿಯಾಗಿ ಮಾಸ್ಕ್​ ಧರಸಲು ಹೇಳುತ್ತಾರೆ. ಈ ವೇಳೆ ಕೋಪಗೊಂಡ ಮಹಿಳೆ ವೃದ್ಧನ ಬಳಿ ಕೈತೋರಿಸಿ ಅವರಿಗೆ ಮೊದಲು ಮಾಸ್ಕ್​ ಧರಿಸಲು ಹೇಳಿ ಎಂದು ಗುದ್ದಿದ್ದಾರೆ.

Viral Video: ವಿಮಾನದಲ್ಲಿ ಮಾಸ್ಕ್​ ತೆಗೆದು ಆಹಾರ ಸೇವಿಸಿದ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ
ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ
TV9 Web
| Edited By: |

Updated on:Dec 30, 2021 | 3:45 PM

Share

ವಿಮಾನದಲ್ಲಿ ಮಾಸ್ಕ್​ ತೆಗೆದು  ತಿಂಡಿ ತಿಂದಿದ್ದಕ್ಕಾಗಿ ಮಹಿಳೆಯೊಬ್ಬಳು ವೃದ್ಧರೊಬ್ಬರಿಗೆ ಕಪಾಳಮೋಕ್ಷ ಮಾಡಿ, ಗುದ್ದಿದ  ಘಟನೆ ನಡೆದಿದೆ. ಡೆಲ್ಟಾ ಏರ್​ಲೈನ್ಸ್​ನ ವಿಮಾನದಲ್ಲಿ ಈ ಘಟನೆ ನಡೆದಿದೆ.  ಇದರ ವೀಡಿಯೋ ಈಗ ಸಾಮಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವ್ಯಕ್ತಿಗೆ ಹೊಡೆದ ಮಹಿಳೆಯೂ ಸರಿಯಾಗಿ ಮಾಸ್ಕ್​ ಧರಿಸದ ಕಾರಣ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಟ್ಲಾಂಟಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ.  

ವೀಡಿಯೋದಲ್ಲಿ ಮಹಿಳೆ ವೃದ್ಧನ ಬಳಿ ಬಂದು ಮಾಸ್ಕ್​ ತೆಗೆದು ತೆಗೆದಿದ್ದೀರಾ ಎಂದು ಬೆದರಿಸಿದ್ದಾಳೆ. ಆಗ ಅವರು ತಿನ್ನುತ್ತಿದ್ದೇನೆ ಎಂದಿದ್ದಾರೆ. ಅದನ್ನು ಸರಿಯಾಗಿ ಕೇಳಿಸಿಕೊಳ್ಳುವಷ್ಟು ತಾಳ್ಮೆ ಇಲ್ಲದ ಮಹಿಳೆ ನಿಮಗೆ ಇಲ್ಲಿ ಕೂರಲು ಯಾರು ಹೇಳಿದ್ದಾರೆ ಎಂದು ಗುದ್ದಿದ್ದಾರೆ. ಬಳಿಕ ಅವರ ನಡುವೆ ವಾಗ್ವಾದ ನಡೆದಿದೆ. ಆಗ ಮಹಿಳೆ ನಿಮಗೆ ನನ್ನ ಬಳಿ ಎದುರು ಮಾತನಾಡಲು ಎಷ್ಟು ಧೈರ್ಯ ಎಂದು ಕೇಳಿದ್ದಾಳೆ.  ಹೀಗೆ ಅವರ ನಡುವೆ ಹಲವು ಮಾತಗಳು ನಡೆದಿವೆ. ಈ ವೇಳೆ  ವೃದ್ಧ, ಕುಳಿತುಕೊಳ್ಳಿ ಕರೆನ್​, ಜನರು ನಿಮ್ಮನ್ನು ನೋಡಿ ನಗುತ್ತಿದ್ದಾರೆ. ದೇವರು ಎಂದಿಗೂ ನಿಂತು ಕೂಗಬಾರದು ಎಂದು ತಮಾಷೆ ಮಾಡಿದ್ದಾರೆ. ಕರೆನ್​ ಎಂದರೆ ಅಸಹ್ಯ ಅಥವಾ  ಬಿಳಿ ಮಹಿಳೆಗೆ ಅವಮಾನ ಮಾಡುವ ಪದವಾಗಿದೆ.

ಮಹಿಳೆ ಹಾಗೂ ವೃದ್ಧನ ನಡುವೆ ಗಲಾಟೆಯನ್ನು ತಪ್ಪಿಸಲು ಮಧ್ಯ ಬಂದ ವಿಮಾನ ಸಿಬ್ಬಂದಿ ಮಹಿಳೆಗೆ ಸರಿಯಾಗಿ ಮಾಸ್ಕ್​ ಧರಸಲು ಹೇಳುತ್ತಾರೆ. ಈ ವೇಳೆ ಕೋಪಗೊಂಡ ಮಹಿಳೆ ವೃದ್ಧನ ಬಳಿ ಕೈತೋರಿಸಿ ಅವರಿಗೆ ಮೊದಲು ಮಾಸ್ಕ್​ ಧರಿಸಲು ಹೇಳಿ ಎಂದು ಗುದ್ದಿದ್ದಾರೆ. ತಕ್ಷಣ ವಿಮಾನ ಸಿಬ್ಬಂದಿ ಮಹಿಳೆಯನ್ನು ದೂರ ಸರಿಸದಿದ್ದಾರೆ. ಅಟ್ಲಾಂಟದಲ್ಲಿ ವಿಮಾನ ಲ್ಯಾಂಡ್​ ಆಗುತ್ತಿದ್ದಂತೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:

ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ

Published On - 3:39 pm, Thu, 30 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ