Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಮಾನದಲ್ಲಿ ಮಾಸ್ಕ್​ ತೆಗೆದು ಆಹಾರ ಸೇವಿಸಿದ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ

ಮಹಿಳೆ ಹಾಗೂ ವೃದ್ಧನ ನಡುವೆ ಗಲಾಟೆಯನ್ನು ತಪ್ಪಿಸಲು ಮಧ್ಯ ಬಂದ ವಿಮಾನ ಸಿಬ್ಬಂದಿ ಮಹಿಳೆಗೆ ಸರಿಯಾಗಿ ಮಾಸ್ಕ್​ ಧರಸಲು ಹೇಳುತ್ತಾರೆ. ಈ ವೇಳೆ ಕೋಪಗೊಂಡ ಮಹಿಳೆ ವೃದ್ಧನ ಬಳಿ ಕೈತೋರಿಸಿ ಅವರಿಗೆ ಮೊದಲು ಮಾಸ್ಕ್​ ಧರಿಸಲು ಹೇಳಿ ಎಂದು ಗುದ್ದಿದ್ದಾರೆ.

Viral Video: ವಿಮಾನದಲ್ಲಿ ಮಾಸ್ಕ್​ ತೆಗೆದು ಆಹಾರ ಸೇವಿಸಿದ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ
ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ
Follow us
TV9 Web
| Updated By: Pavitra Bhat Jigalemane

Updated on:Dec 30, 2021 | 3:45 PM

ವಿಮಾನದಲ್ಲಿ ಮಾಸ್ಕ್​ ತೆಗೆದು  ತಿಂಡಿ ತಿಂದಿದ್ದಕ್ಕಾಗಿ ಮಹಿಳೆಯೊಬ್ಬಳು ವೃದ್ಧರೊಬ್ಬರಿಗೆ ಕಪಾಳಮೋಕ್ಷ ಮಾಡಿ, ಗುದ್ದಿದ  ಘಟನೆ ನಡೆದಿದೆ. ಡೆಲ್ಟಾ ಏರ್​ಲೈನ್ಸ್​ನ ವಿಮಾನದಲ್ಲಿ ಈ ಘಟನೆ ನಡೆದಿದೆ.  ಇದರ ವೀಡಿಯೋ ಈಗ ಸಾಮಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವ್ಯಕ್ತಿಗೆ ಹೊಡೆದ ಮಹಿಳೆಯೂ ಸರಿಯಾಗಿ ಮಾಸ್ಕ್​ ಧರಿಸದ ಕಾರಣ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಟ್ಲಾಂಟಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ.  

ವೀಡಿಯೋದಲ್ಲಿ ಮಹಿಳೆ ವೃದ್ಧನ ಬಳಿ ಬಂದು ಮಾಸ್ಕ್​ ತೆಗೆದು ತೆಗೆದಿದ್ದೀರಾ ಎಂದು ಬೆದರಿಸಿದ್ದಾಳೆ. ಆಗ ಅವರು ತಿನ್ನುತ್ತಿದ್ದೇನೆ ಎಂದಿದ್ದಾರೆ. ಅದನ್ನು ಸರಿಯಾಗಿ ಕೇಳಿಸಿಕೊಳ್ಳುವಷ್ಟು ತಾಳ್ಮೆ ಇಲ್ಲದ ಮಹಿಳೆ ನಿಮಗೆ ಇಲ್ಲಿ ಕೂರಲು ಯಾರು ಹೇಳಿದ್ದಾರೆ ಎಂದು ಗುದ್ದಿದ್ದಾರೆ. ಬಳಿಕ ಅವರ ನಡುವೆ ವಾಗ್ವಾದ ನಡೆದಿದೆ. ಆಗ ಮಹಿಳೆ ನಿಮಗೆ ನನ್ನ ಬಳಿ ಎದುರು ಮಾತನಾಡಲು ಎಷ್ಟು ಧೈರ್ಯ ಎಂದು ಕೇಳಿದ್ದಾಳೆ.  ಹೀಗೆ ಅವರ ನಡುವೆ ಹಲವು ಮಾತಗಳು ನಡೆದಿವೆ. ಈ ವೇಳೆ  ವೃದ್ಧ, ಕುಳಿತುಕೊಳ್ಳಿ ಕರೆನ್​, ಜನರು ನಿಮ್ಮನ್ನು ನೋಡಿ ನಗುತ್ತಿದ್ದಾರೆ. ದೇವರು ಎಂದಿಗೂ ನಿಂತು ಕೂಗಬಾರದು ಎಂದು ತಮಾಷೆ ಮಾಡಿದ್ದಾರೆ. ಕರೆನ್​ ಎಂದರೆ ಅಸಹ್ಯ ಅಥವಾ  ಬಿಳಿ ಮಹಿಳೆಗೆ ಅವಮಾನ ಮಾಡುವ ಪದವಾಗಿದೆ.

ಮಹಿಳೆ ಹಾಗೂ ವೃದ್ಧನ ನಡುವೆ ಗಲಾಟೆಯನ್ನು ತಪ್ಪಿಸಲು ಮಧ್ಯ ಬಂದ ವಿಮಾನ ಸಿಬ್ಬಂದಿ ಮಹಿಳೆಗೆ ಸರಿಯಾಗಿ ಮಾಸ್ಕ್​ ಧರಸಲು ಹೇಳುತ್ತಾರೆ. ಈ ವೇಳೆ ಕೋಪಗೊಂಡ ಮಹಿಳೆ ವೃದ್ಧನ ಬಳಿ ಕೈತೋರಿಸಿ ಅವರಿಗೆ ಮೊದಲು ಮಾಸ್ಕ್​ ಧರಿಸಲು ಹೇಳಿ ಎಂದು ಗುದ್ದಿದ್ದಾರೆ. ತಕ್ಷಣ ವಿಮಾನ ಸಿಬ್ಬಂದಿ ಮಹಿಳೆಯನ್ನು ದೂರ ಸರಿಸದಿದ್ದಾರೆ. ಅಟ್ಲಾಂಟದಲ್ಲಿ ವಿಮಾನ ಲ್ಯಾಂಡ್​ ಆಗುತ್ತಿದ್ದಂತೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:

ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ

Published On - 3:39 pm, Thu, 30 December 21

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ