AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಮಾನದಲ್ಲಿ ಮಾಸ್ಕ್​ ತೆಗೆದು ಆಹಾರ ಸೇವಿಸಿದ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ

ಮಹಿಳೆ ಹಾಗೂ ವೃದ್ಧನ ನಡುವೆ ಗಲಾಟೆಯನ್ನು ತಪ್ಪಿಸಲು ಮಧ್ಯ ಬಂದ ವಿಮಾನ ಸಿಬ್ಬಂದಿ ಮಹಿಳೆಗೆ ಸರಿಯಾಗಿ ಮಾಸ್ಕ್​ ಧರಸಲು ಹೇಳುತ್ತಾರೆ. ಈ ವೇಳೆ ಕೋಪಗೊಂಡ ಮಹಿಳೆ ವೃದ್ಧನ ಬಳಿ ಕೈತೋರಿಸಿ ಅವರಿಗೆ ಮೊದಲು ಮಾಸ್ಕ್​ ಧರಿಸಲು ಹೇಳಿ ಎಂದು ಗುದ್ದಿದ್ದಾರೆ.

Viral Video: ವಿಮಾನದಲ್ಲಿ ಮಾಸ್ಕ್​ ತೆಗೆದು ಆಹಾರ ಸೇವಿಸಿದ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ
ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ
TV9 Web
| Edited By: |

Updated on:Dec 30, 2021 | 3:45 PM

Share

ವಿಮಾನದಲ್ಲಿ ಮಾಸ್ಕ್​ ತೆಗೆದು  ತಿಂಡಿ ತಿಂದಿದ್ದಕ್ಕಾಗಿ ಮಹಿಳೆಯೊಬ್ಬಳು ವೃದ್ಧರೊಬ್ಬರಿಗೆ ಕಪಾಳಮೋಕ್ಷ ಮಾಡಿ, ಗುದ್ದಿದ  ಘಟನೆ ನಡೆದಿದೆ. ಡೆಲ್ಟಾ ಏರ್​ಲೈನ್ಸ್​ನ ವಿಮಾನದಲ್ಲಿ ಈ ಘಟನೆ ನಡೆದಿದೆ.  ಇದರ ವೀಡಿಯೋ ಈಗ ಸಾಮಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವ್ಯಕ್ತಿಗೆ ಹೊಡೆದ ಮಹಿಳೆಯೂ ಸರಿಯಾಗಿ ಮಾಸ್ಕ್​ ಧರಿಸದ ಕಾರಣ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಟ್ಲಾಂಟಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ.  

ವೀಡಿಯೋದಲ್ಲಿ ಮಹಿಳೆ ವೃದ್ಧನ ಬಳಿ ಬಂದು ಮಾಸ್ಕ್​ ತೆಗೆದು ತೆಗೆದಿದ್ದೀರಾ ಎಂದು ಬೆದರಿಸಿದ್ದಾಳೆ. ಆಗ ಅವರು ತಿನ್ನುತ್ತಿದ್ದೇನೆ ಎಂದಿದ್ದಾರೆ. ಅದನ್ನು ಸರಿಯಾಗಿ ಕೇಳಿಸಿಕೊಳ್ಳುವಷ್ಟು ತಾಳ್ಮೆ ಇಲ್ಲದ ಮಹಿಳೆ ನಿಮಗೆ ಇಲ್ಲಿ ಕೂರಲು ಯಾರು ಹೇಳಿದ್ದಾರೆ ಎಂದು ಗುದ್ದಿದ್ದಾರೆ. ಬಳಿಕ ಅವರ ನಡುವೆ ವಾಗ್ವಾದ ನಡೆದಿದೆ. ಆಗ ಮಹಿಳೆ ನಿಮಗೆ ನನ್ನ ಬಳಿ ಎದುರು ಮಾತನಾಡಲು ಎಷ್ಟು ಧೈರ್ಯ ಎಂದು ಕೇಳಿದ್ದಾಳೆ.  ಹೀಗೆ ಅವರ ನಡುವೆ ಹಲವು ಮಾತಗಳು ನಡೆದಿವೆ. ಈ ವೇಳೆ  ವೃದ್ಧ, ಕುಳಿತುಕೊಳ್ಳಿ ಕರೆನ್​, ಜನರು ನಿಮ್ಮನ್ನು ನೋಡಿ ನಗುತ್ತಿದ್ದಾರೆ. ದೇವರು ಎಂದಿಗೂ ನಿಂತು ಕೂಗಬಾರದು ಎಂದು ತಮಾಷೆ ಮಾಡಿದ್ದಾರೆ. ಕರೆನ್​ ಎಂದರೆ ಅಸಹ್ಯ ಅಥವಾ  ಬಿಳಿ ಮಹಿಳೆಗೆ ಅವಮಾನ ಮಾಡುವ ಪದವಾಗಿದೆ.

ಮಹಿಳೆ ಹಾಗೂ ವೃದ್ಧನ ನಡುವೆ ಗಲಾಟೆಯನ್ನು ತಪ್ಪಿಸಲು ಮಧ್ಯ ಬಂದ ವಿಮಾನ ಸಿಬ್ಬಂದಿ ಮಹಿಳೆಗೆ ಸರಿಯಾಗಿ ಮಾಸ್ಕ್​ ಧರಸಲು ಹೇಳುತ್ತಾರೆ. ಈ ವೇಳೆ ಕೋಪಗೊಂಡ ಮಹಿಳೆ ವೃದ್ಧನ ಬಳಿ ಕೈತೋರಿಸಿ ಅವರಿಗೆ ಮೊದಲು ಮಾಸ್ಕ್​ ಧರಿಸಲು ಹೇಳಿ ಎಂದು ಗುದ್ದಿದ್ದಾರೆ. ತಕ್ಷಣ ವಿಮಾನ ಸಿಬ್ಬಂದಿ ಮಹಿಳೆಯನ್ನು ದೂರ ಸರಿಸದಿದ್ದಾರೆ. ಅಟ್ಲಾಂಟದಲ್ಲಿ ವಿಮಾನ ಲ್ಯಾಂಡ್​ ಆಗುತ್ತಿದ್ದಂತೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:

ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ

Published On - 3:39 pm, Thu, 30 December 21

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು