AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕನ್​​ ಕರಿ ಕೇಳಿದ ಗಂಡನ ಮೆದುಳು ಹೊರಬರುವಂತೆ ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿ

ಸಸ್ಯಾಹಾರಿಯಾಗಿದ್ದ ಪತ್ನಿಯ ಬಳಿ ಮಾಂಸಹಾರ ಮಾಡಿಕೊಡು ಎಂದು ಗಂಡ ಪದೇ ಪದೇ ಬೇಡಿಕೆ ಇಡುತ್ತಿದ್ದ. ಇದರಿಂದಾಗಿ ಆಗಾಗ ಗಂಡ ಹೆಂಡತಿಯ ನಡುವೆ ಜಗಳಗಳು ನಡೆಯುತ್ತಿತ್ತು. ಇದೀಗ ಮತ್ತೆ ಮಾಂಸಾಹಾರಕ್ಕೆ ಬೇಡಿಕೆ ಇಟ್ಟಿದ್ದು, ಕೋಪಗೊಂಡ ಪತ್ನಿ ಗಂಡನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಂದು ಹಾಕಿದ್ದಾಳೆ.

ಚಿಕನ್​​ ಕರಿ ಕೇಳಿದ ಗಂಡನ ಮೆದುಳು ಹೊರಬರುವಂತೆ ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿ
ಗಂಡನ ಮೆದುಳು ಹೊರಬರುವಂತೆ ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿ
ಅಕ್ಷತಾ ವರ್ಕಾಡಿ
|

Updated on:Aug 10, 2024 | 5:03 PM

Share

ಉತ್ತರ ಪ್ರದೇಶ: ಮಹಿಳೆಯೊಬ್ಬಳು ತನ್ನ ಗಂಡನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಂದಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ಗುರುವಾರ ನಡೆದ ಈ ಭೀಕರ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ ತನ್ನ ಗಂಡನ ಮೇಲೆ ಕುಳಿತು ಆತನ ತಲೆಗೆ ಇಟ್ಟಿಗೆಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ರೋಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪತ್ನಿಯನ್ನು ಬಂಧಿಸಿದ್ದಾರೆ. ದೈನಿಕ್ ಭಾಸ್ಕರ್ ಅವರ ವರದಿಯ ಪ್ರಕಾರ, ಗಂಡ ಪದೇ ಪದೇ ಮಾಂಸಾಹಾರ ತಯಾರಿಸಲು ಹೇಳುತ್ತಿದ್ದ, ಇದರಿಂದ ಕೋಪಗೊಂಡ ಪತ್ನಿ ಆತನನ್ನೇ ಭೀಕರವಾಗಿ ಕೊಂದು ಹಾಕಿದ್ದಾಳೆ ಎಂದು ತಿಳಿದುಬಂದಿದೆ.

ಸತ್ಯಪಾಲ್ (40) ಮತ್ತು ಗಾಯತ್ರಿ ದೇವಿ (39) ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ಹತೌಡಾ ಗ್ರಾಮದಲ್ಲಿ ವಾಸಿಸುತ್ತಿದ್ದರು. ದಂಪತಿಗೆ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದು, ಮಗಳು ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದು, ಮಗ 12ನೇ ತರಗತಿಯಲ್ಲಿ ಓದುತ್ತಿದ್ದಾನೆ.

ವರದಿಯ ಪ್ರಕಾರ, ಗಾಯತ್ರಿ ಸಸ್ಯಾಹಾರಿಯಾಗಿದ್ದು, ಸತ್ಯಪಾಲ್ ಮಾಂಸಾಹಾರಿ ಆಹಾರವನ್ನು ತುಂಬಾ ಇಷ್ಟಪಡುತ್ತಿದ್ದ. ಇದಲ್ಲದೇ ಆಗಾಗ್ಗೆ ಮನೆಯಲ್ಲಿ ಚಿಕನ್​ ಮಾಂಸಾಹಾರ ತಯಾರಿಸುವಂತೆ ಹೆಂಡತಿಯ ಬಳಿ ಹೇಳುತ್ತಿದ್ದ. ಇದರಿಂದಾಗಿ ಆಗಾಗ ಗಂಡ ಹೆಂಡತಿಯ ನಡುವೆ ಜಗಳಗಳು ನಡೆಯುತ್ತಿತ್ತು.

ಇದನ್ನೂ ಓದಿ: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ

ಗುರುವಾರ ಸತ್ಯಪಾಲ್ ಮತ್ತೆ ಮಾಂಸಾಹಾರಕ್ಕೆ ಬೇಡಿಕೆ ಇಟ್ಟಿದ್ದಾನೆ. ಗಾಯತ್ರಿ ನಿರಾಕರಿಸಿದಾಗ, ಅವರಿಬ್ಬರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಈ ಜಗಳದ ನಡುವೆ ಗಾಯತ್ರಿ ಇಟ್ಟಿಗೆ ಎತ್ತಿಕೊಂಡು ಗಂಡನ ಮೇಲೆ ಹಲ್ಲೆ ನಡೆಸಿದ್ದಾಳೆ. ಸತ್ಯಪಾಲ್ ಹೊರಗೆ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಗಾಯತ್ರಿ ಅವನನ್ನು ಹಿಂಬಾಲಿಸಿ, ನೆಲಕ್ಕೆ ಕೆಡವಿ, ನಂತರ ಅವನ ಎದೆಯ ಮೇಲೆ ಕುಳಿತು, ಪಟ್ಟುಬಿಡದೆ ಇಟ್ಟಿಗೆಯಿಂದ ಅವನ ತಲೆಗೆ ಹೊಡೆದಿದ್ದಾಳೆ. ಅವಳ ಕೋಪವು ಎಷ್ಟು ತೀವ್ರವಾಗಿತ್ತು ಎಂದರೆ, ಆಕೆ ಹೊಡೆದ ಏಟಿಗೆ ಆತನ ಮೆದುಳು ಹೊರಬಂದಿದೆ.

ಗಾಯತ್ರಿ ಈ ಹಿಂದೆ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚೇತರಿಸಿಕೊಂಡಿದ್ದಾರೆ ಎಂದು ಸತ್ಯಪಾಲ್ ಅವರ ಸಂಬಂಧಿಕರು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದು ಗಾಯತ್ರಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಗಳು ಮಹಿಳೆಯು ಇನ್ನೂ ಮಾನಸಿಕವಾಗಿ ಅಸ್ಥಿರವಾಗಿರಬಹುದು ಎಂದು ಸೂಚಿಸಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:56 am, Sat, 10 August 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ