Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹಲ್ಲುಜ್ಜುವಾಗ ಆಕಸ್ಮಿಕವಾಗಿ ಬ್ರಶ್ ನುಂಗಿದ ಮಹಿಳೆ

ಪುಣೆಯ 40 ವರ್ಷದ ಮಹಿಳೆ ತನ್ನ ನಾಲಿಗೆಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಟೂತ್ ಬ್ರಷ್ ಅನ್ನು ನುಂಗಿದ ಅಪರೂಪದ ಘಟನೆ ನಡೆದಿದೆ. ಈ ಪ್ರಕರಣವು ಮಹಾರಾಷ್ಟ್ರದಲ್ಲಿ ಈ ರೀತಿಯ ಮೊದಲ ಪ್ರಕರಣವಾಗಿದೆ. ಇದು ಇಡೀ ದೇಶದ ವೈದ್ಯರನ್ನು ದಿಗ್ಭ್ರಮೆಗೊಳಿಸಿದೆ.

Viral News: ಹಲ್ಲುಜ್ಜುವಾಗ ಆಕಸ್ಮಿಕವಾಗಿ ಬ್ರಶ್ ನುಂಗಿದ ಮಹಿಳೆ
ಟೂತ್ ಬ್ರಷ್
Follow us
ಸುಷ್ಮಾ ಚಕ್ರೆ
|

Updated on: Nov 13, 2024 | 7:39 PM

ಪುಣೆ: ಮಹಾರಾಷ್ಟ್ರದ ಪುಣೆಯ ಮಹಿಳೆಯೊಬ್ಬರು ನಾಲಿಗೆಯನ್ನು ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ 20 ಸೆಂ.ಮೀ ಉದ್ದದ ಟೂತ್ ಬ್ರಷ್ ಅನ್ನು ನುಂಗಿದ್ದಾರೆ. ಈ ಘಟನೆ ಮಹಾರಾಷ್ಟ್ರದಲ್ಲಿ ಈ ರೀತಿ ನಡೆದ ಮೊದಲ ಪ್ರಕರಣವಾಗಿದೆ. ಇದು ಇಡೀ ದೇಶದ ವೈದ್ಯಕೀಯ ತಜ್ಞರನ್ನು ದಿಗ್ಭ್ರಮೆಗೊಳಿಸಿದೆ. ಪುಣೆಯ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ತಕ್ಷಣ ಆಪರೇಷನ್ ಮಾಡಿ ಬ್ರಶ್ ಅನ್ನು ಹೊರಗೆ ತೆಗೆದು, ಆಕೆ ಉಸಿರುಗಟ್ಟಿ ಸಾಯುವುದರಿಂದ ರಕ್ಷಿಸಲಾಯಿತು.

ಕಳೆದ ವರ್ಷ ಟೂತ್ ಬ್ರಷ್ ಅನ್ನು ನುಂಗಿ ಸ್ಪ್ಯಾನಿಷ್ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ ಭಾರತದಲ್ಲಿ ಕೂಡ ಅಂತಹದ್ದೇ ಘಟನೆ ನಡೆದಿದೆ. ಪುಣೆಯ ಮಹಿಳೆಯೊಬ್ಬರು ನಾಲಿಗೆಯನ್ನು ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ 20 ಸೆಂ.ಮೀ ಉದ್ದದ ಟೂತ್ ಬ್ರಷ್ ಅನ್ನು ನುಂಗಿದ್ದಾರೆ.

ಇದನ್ನೂ ಓದಿ: ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!

“ಮೊದಲಿಗೆ ಇದು ಅಸಾಧ್ಯವೆಂದು ತೋರುತ್ತಿದೆ” ಎಂದು ಆಪರೇಷನ್​ಗೆ ಹಾಜರಾದ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಅಭಿಜೀತ್ ಕರದ್ ಅವರು ಪುಣೆ ಮಿರರ್‌ಗೆ ಪ್ರತಿಕ್ರಿಯಿಸಿ, ಮಹಿಳೆಯು ಟೂತ್ ಬ್ರಷ್ ಅನ್ನು ಹೇಗೆ ನುಂಗಿರಬಹುದು ಎಂದು ಆಶ್ಚರ್ಯಪಟ್ಟಿದ್ದರು.

ಟೂತ್ ಬ್ರಷ್ ನುಂಗುವಿಕೆ ವಿಶ್ವಾದ್ಯಂತ ಬಹಳ ಅಪರೂಪವಾಗಿದೆ. ಈ ರೀತಿಯ 30ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ಟೂತ್ ಬ್ರಶ್ ನುಂಗುವವರು ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಸ್ಕಿಜೋಫ್ರೇನಿಯಾ, ಬುಲಿಮಿಯಾ ಅಥವಾ ಅನೋರೆಕ್ಸಿಯಾದಿಂದ ಬಳಲುತ್ತಿರುವವರು ಕೂಡ ಆಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Video: ಸರ್ಕಾರಿ ಕಾರಿನ ಮೇಲೆ ಹತ್ತಿ ಯುವತಿಯ ಅಶ್ಲೀಲ ನೃತ್ಯ; ವಿಡಿಯೋ ವೈರಲ್​​​

ಜನರು ನಾಣ್ಯಗಳಂತಹ ಸಣ್ಣ ವಸ್ತುಗಳನ್ನು ನುಂಗುವ ಪ್ರಕರಣಗಳು ಆಗಾಗ ನಡೆಯುತ್ತಿರುತ್ತದೆ. ಆದರೆ, ಈ ರೀತಿ ಬೃಹತ್ ಟೂತ್ ಬ್ರಷ್ ಅನ್ನು ನುಂಗಿರುವ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ದಾಖಲಾದ ವಿಲಕ್ಷಣ ಪ್ರಕರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ