Viral News: ಹಲ್ಲುಜ್ಜುವಾಗ ಆಕಸ್ಮಿಕವಾಗಿ ಬ್ರಶ್ ನುಂಗಿದ ಮಹಿಳೆ

ಪುಣೆಯ 40 ವರ್ಷದ ಮಹಿಳೆ ತನ್ನ ನಾಲಿಗೆಯನ್ನು ಸ್ವಚ್ಛಗೊಳಿಸುತ್ತಿದ್ದಾಗ ಟೂತ್ ಬ್ರಷ್ ಅನ್ನು ನುಂಗಿದ ಅಪರೂಪದ ಘಟನೆ ನಡೆದಿದೆ. ಈ ಪ್ರಕರಣವು ಮಹಾರಾಷ್ಟ್ರದಲ್ಲಿ ಈ ರೀತಿಯ ಮೊದಲ ಪ್ರಕರಣವಾಗಿದೆ. ಇದು ಇಡೀ ದೇಶದ ವೈದ್ಯರನ್ನು ದಿಗ್ಭ್ರಮೆಗೊಳಿಸಿದೆ.

Viral News: ಹಲ್ಲುಜ್ಜುವಾಗ ಆಕಸ್ಮಿಕವಾಗಿ ಬ್ರಶ್ ನುಂಗಿದ ಮಹಿಳೆ
ಟೂತ್ ಬ್ರಷ್
Follow us
ಸುಷ್ಮಾ ಚಕ್ರೆ
|

Updated on: Nov 13, 2024 | 7:39 PM

ಪುಣೆ: ಮಹಾರಾಷ್ಟ್ರದ ಪುಣೆಯ ಮಹಿಳೆಯೊಬ್ಬರು ನಾಲಿಗೆಯನ್ನು ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ 20 ಸೆಂ.ಮೀ ಉದ್ದದ ಟೂತ್ ಬ್ರಷ್ ಅನ್ನು ನುಂಗಿದ್ದಾರೆ. ಈ ಘಟನೆ ಮಹಾರಾಷ್ಟ್ರದಲ್ಲಿ ಈ ರೀತಿ ನಡೆದ ಮೊದಲ ಪ್ರಕರಣವಾಗಿದೆ. ಇದು ಇಡೀ ದೇಶದ ವೈದ್ಯಕೀಯ ತಜ್ಞರನ್ನು ದಿಗ್ಭ್ರಮೆಗೊಳಿಸಿದೆ. ಪುಣೆಯ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ತಕ್ಷಣ ಆಪರೇಷನ್ ಮಾಡಿ ಬ್ರಶ್ ಅನ್ನು ಹೊರಗೆ ತೆಗೆದು, ಆಕೆ ಉಸಿರುಗಟ್ಟಿ ಸಾಯುವುದರಿಂದ ರಕ್ಷಿಸಲಾಯಿತು.

ಕಳೆದ ವರ್ಷ ಟೂತ್ ಬ್ರಷ್ ಅನ್ನು ನುಂಗಿ ಸ್ಪ್ಯಾನಿಷ್ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ ಭಾರತದಲ್ಲಿ ಕೂಡ ಅಂತಹದ್ದೇ ಘಟನೆ ನಡೆದಿದೆ. ಪುಣೆಯ ಮಹಿಳೆಯೊಬ್ಬರು ನಾಲಿಗೆಯನ್ನು ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ 20 ಸೆಂ.ಮೀ ಉದ್ದದ ಟೂತ್ ಬ್ರಷ್ ಅನ್ನು ನುಂಗಿದ್ದಾರೆ.

ಇದನ್ನೂ ಓದಿ: ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!

“ಮೊದಲಿಗೆ ಇದು ಅಸಾಧ್ಯವೆಂದು ತೋರುತ್ತಿದೆ” ಎಂದು ಆಪರೇಷನ್​ಗೆ ಹಾಜರಾದ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಅಭಿಜೀತ್ ಕರದ್ ಅವರು ಪುಣೆ ಮಿರರ್‌ಗೆ ಪ್ರತಿಕ್ರಿಯಿಸಿ, ಮಹಿಳೆಯು ಟೂತ್ ಬ್ರಷ್ ಅನ್ನು ಹೇಗೆ ನುಂಗಿರಬಹುದು ಎಂದು ಆಶ್ಚರ್ಯಪಟ್ಟಿದ್ದರು.

ಟೂತ್ ಬ್ರಷ್ ನುಂಗುವಿಕೆ ವಿಶ್ವಾದ್ಯಂತ ಬಹಳ ಅಪರೂಪವಾಗಿದೆ. ಈ ರೀತಿಯ 30ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ಟೂತ್ ಬ್ರಶ್ ನುಂಗುವವರು ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಸ್ಕಿಜೋಫ್ರೇನಿಯಾ, ಬುಲಿಮಿಯಾ ಅಥವಾ ಅನೋರೆಕ್ಸಿಯಾದಿಂದ ಬಳಲುತ್ತಿರುವವರು ಕೂಡ ಆಗಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Video: ಸರ್ಕಾರಿ ಕಾರಿನ ಮೇಲೆ ಹತ್ತಿ ಯುವತಿಯ ಅಶ್ಲೀಲ ನೃತ್ಯ; ವಿಡಿಯೋ ವೈರಲ್​​​

ಜನರು ನಾಣ್ಯಗಳಂತಹ ಸಣ್ಣ ವಸ್ತುಗಳನ್ನು ನುಂಗುವ ಪ್ರಕರಣಗಳು ಆಗಾಗ ನಡೆಯುತ್ತಿರುತ್ತದೆ. ಆದರೆ, ಈ ರೀತಿ ಬೃಹತ್ ಟೂತ್ ಬ್ರಷ್ ಅನ್ನು ನುಂಗಿರುವ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ದಾಖಲಾದ ವಿಲಕ್ಷಣ ಪ್ರಕರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಿಟಿಟಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಟಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ