AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಹೋಗುವುದಿಲ್ಲ ಎಂದು ಬಾಲಕನ ರಗಳೆ; ಮಗನ ಕೈಕಾಲು ಕಟ್ಟಿ ಶಾಲೆಗೆ ಕರೆತಂದ ಅಮ್ಮನ ಹರಸಾಹಸ ನೀವು ನೋಡಲೇಬೇಕು

Viral Video: ಬಾಲಕ ಶಾಲೆಗೆ ಹೋಗುವುದಿಲ್ಲ ಎಂದು ಜೋರಾಗಿ ಕೂಗುತ್ತಿದ್ದಾನೆ. ಮಹಿಳೆ ಆತನನ್ನು ಶಾಲೆಗೆ ಕರೆತರಲು ಹರಸಾಹವನ್ನೇ ಪಟ್ಟಿದ್ದಾಳೆ. ಚಿಕ್ಕ ಮಕ್ಕಳ ವಿಡಿಯೋಗಳು ಮನಸ್ಸು ಗೆಲ್ಲುವುದಂತೂ ಸತ್ಯ.

ಶಾಲೆಗೆ ಹೋಗುವುದಿಲ್ಲ ಎಂದು ಬಾಲಕನ ರಗಳೆ; ಮಗನ ಕೈಕಾಲು ಕಟ್ಟಿ ಶಾಲೆಗೆ ಕರೆತಂದ ಅಮ್ಮನ ಹರಸಾಹಸ ನೀವು ನೋಡಲೇಬೇಕು
ಶಾಲೆಗೆ ಹೋಗುವುದಿಲ್ಲ ಎಂದು ಬಾಲಕನ ರಗಳೆ
TV9 Web
| Edited By: |

Updated on:Sep 12, 2021 | 12:52 PM

Share

ವಿಶ್ವದಾದ್ಯಂತ ಕೊರೊನಾ ಹಾವಳಿಯಿಂದ ಶಾಲಾ ಕಾಲೇಜುಗಳು ಮುಚ್ಚಲ್ಪಟ್ಟವು. ಕೊವಿಡ್19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದ್ದಂತೆಯೇ ಹಂತ ಹಂತವಾಗಿ ಶಾಲೆಗಳನ್ನು ತೆರೆಯಲಾಯಿತು. ಇಷ್ಟು ದಿನಗಳ ಕಾಲ ಮನೆಯಲ್ಲಿದ್ದ ಕೆಲ ಮಕ್ಕಳು ಶಾಲೆಗೆ ಹೋಗಲು ರಗಳೆ, ರಂಪಾಟ ಮಾಡುವ ಕೆಲವೊಂದಿಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ವೈರಲ್ ಆದ ಈ ವಿಡಿಯೋದ ದೃಶ್ಯವನ್ನು ಗಮನಿಸಿದರೆ, ಮಹಿಳೆ ಮಗುವನ್ನು ಶಾಲೆಗೆ ಕರೆತರುತ್ತಿದ್ದಾಳೆ. ಶಾಲೆಗೆ ಬರುವುದಿಲ್ಲ ಎಂದು ಹಠ ಮಾಡುತ್ತಿರುವ ತನ್ನ ಮಗನನ್ನು ಎತ್ತಿಕೊಂಡು ಬಂದಿದ್ದಾಳೆ. ತಾಯಿ ಮುಂದೆ ಹೋಗುತ್ತಿದ್ದಂತೆಯೇ ಹಿಂಬದಿಯಿಂದ ಇಬ್ಬರು ಬಾಲಕನನ್ನು ಎತ್ತಿಕೊಂಡು ಬರುತ್ತಿರುವ ದೃಶ್ಯ ವಿಡಿಯೋದಲ್ಲಿ ನೋಡಬಹುದು.

ಮಗ ಶಾಲೆಗೆ ಹೋಗುವುದಿಲ್ಲ ಎಂದು ಜೋರಾಗಿ ಕೂಗುತ್ತಿದ್ದಾನೆ. ಮಹಿಳೆ ಆತನನ್ನು ಶಾಲೆಗೆ ಕರೆತರಲು ಹರಸಾಹವನ್ನೇ ಪಟ್ಟಿದ್ದಾಳೆ. ಚಿಕ್ಕ ಮಕ್ಕಳ ವಿಡಿಯೋಗಳು ಹೆಚ್ಚು ಮನಸ್ಸು ಗೆಲ್ಲುವುದಂತೂ ಸತ್ಯ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ತಮಾಷೆಯ ವಿಡಿಯೋ ನೆಟ್ಟಿಗರಿಗೆ ಹೆಚ್ಚು ಇಷ್ಟವಾಗಿದೆ. ನಮಗೆ ಶಾಲಾ ದಿನಗಳ ಹಳೆಯ ನೆನಪುಗಳೆಲ್ಲಾ ಮರುಕಳಿಸುತ್ತಿದೆ ಎಂದು ಓರ್ವರು ಹೇಳಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

Viral Video: ಪ್ಯಾರಾಗ್ಲೈಡಿಂಗ್​ ಮಾಡಿದ ಶ್ವಾನ; ನೆಟ್ಟಿಗರ ಮನಗೆದ್ದಿರುವ ಅಪರೂಪದ ವಿಡಿಯೊ ಇಲ್ಲಿದೆ

Published On - 12:52 pm, Sun, 12 September 21

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!