Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಸಾರ್ವಜನಿಕವಾಗಿ ವ್ಯಕ್ತಿಯ ಬಳಿ ಪ್ಯಾಂಟ್​ ಸ್ವಚ್ಛಗೊಳಿಸಿಕೊಂಡ ಮಹಿಳಾ ಪೊಲೀಸ್​ ಅಧಿಕಾರಿ

ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಬಳಿ ತನ್ನ ಪ್ಯಾಂಟ್​ಅನ್ನು ಸ್ವಚ್ಛಗೊಳಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಧ್ಯಪ್ರದೇಶದ ರೇವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಮಧ್ಯಪ್ರದೇಶ: ಸಾರ್ವಜನಿಕವಾಗಿ ವ್ಯಕ್ತಿಯ ಬಳಿ ಪ್ಯಾಂಟ್​ ಸ್ವಚ್ಛಗೊಳಿಸಿಕೊಂಡ ಮಹಿಳಾ ಪೊಲೀಸ್​ ಅಧಿಕಾರಿ
ಮಹಿಳಾ ಅಧಿಕಾರಿಯ ಪ್ಯಾಂಟ್​ ಕ್ಲೀನ್​ ಮಾಡುತ್ತಿರುವುದು
Follow us
TV9 Web
| Updated By: Pavitra Bhat Jigalemane

Updated on: Jan 12, 2022 | 12:16 PM

ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ವ್ಯಕ್ತಿಯೊಬ್ಬನ ಬಳಿ ತನ್ನ ಪ್ಯಾಂಟ್​ಅನ್ನು ಸ್ವಚ್ಛಗೊಳಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಧ್ಯಪ್ರದೇಶದ ರೇವಾ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು. ಮಹಿಳಾ ಪೊಲೀಸ್​ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವ್ಯಕ್ತಿ ಗಾಡಿ ತಿರುಗಿಸುವ ವೇಳೆ ಆಕೆಯ ಪ್ಯಾಂಟ್​ಗೆ ಕೆಸರು ತಾಗಿಸಿದ್ದಾನೆ ಎಂದು ವ್ಯಕ್ತಿಯ ಬಳಿ ಕಾಲನ್ನು ಬಟ್ಟೆಯಿಂದ ಒರೆಸುವಂತೆ ಕೇಳಿದ್ದು ಆತ ಸ್ವಚ್ಛಗೊಳಿಸಿದ್ದಾನೆ. ಸಾರ್ವಜನಿಕವಾಗಿ ದರ್ಪ ತೋರಿದ ಮಹಿಳಾ ಪೊಲೀಸ್​ ಅನ್ನು ಹೋಮ್​ ಗಾರ್ಡ್​ ಪೊಲೀಸ್​  ಶಶಿಕಲಾ ಎಂದು ಗುರುತಿಸಲಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

ವಿಡಿಯೋದಲ್ಲಿ ಆಕೆಯ ಬಟ್ಟೆಗೆ ಕೆಸರು ತಾಗಿರುವುದು ಎಲ್ಲಿಯೂ ಕಾಣುವುದಿಲ್ಲ.  7 ಸೆಕೆಂಡ್​ಗಳ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬಗ್ಗಿ ಕೆಂಪು ಬಟ್ಟೆಯಲ್ಲಿ ಮಹಿಳಾ ಪೊಲೀಸ್​ ಅಧಿಕಾರಿಯ ಬಿಳಿಯ ಪ್ಯಾಂಟನ್ನು ಒರೆಸುವುದನ್ನು ಕಾಣಬಹುದು. ವಿಡಿಯೋದ ಕೊನೆಯಲ್ಲಿ ಆಕೆ ಆತನ ಕೆನ್ನೆಗೆ ಹೊಡೆಯುತ್ತಾಳೆ. ಆದರೆ ಮಹಿಳಾ ಅಧಿಕಾರಿ ಮುಖಕ್ಕೆ ಸ್ಕಾರ್ಪ್​ ಧರಿಸಿದ್ದ ಕಾರಣ ಆಕೆಯ ಮುಖವನ್ನು ಗುರುತಿಸಲು ಸಾಧ್ಯವಾಗಿವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದಂತೆ ನೆಟ್ಟಿಗರ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಮದ್ಯಪ್ರದೇಶದ ರೇವಾ ಎಸ್​ಪಿ ಶಿವಕುಮಾರ್​ ಮಾತನಾಡಿ, ಯಾರಾದರು ಘಟನೆಯ ಬಗ್ಗೆ ದೂರು ನೀಡಿದರೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಜನರನ್ನು ಕಾಯುವ ಪೊಲೀಸರೇ ಸಾರ್ವಜನಿಕವಾಗಿ ಜನರ ಮೇಲೆ ದೌರ್ಜನ್ಯ ಮಾಡುವುದು ಸರಿಯಲ್ಲ ಎಂದು ಮಹಿಳಾ ಪೊಲೀಸ್​ ಅಧಿಕಾರಿ ನಡೆಗೆ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ:

ತಾಯಿಯನ್ನು ಪ್ರೀತಿಯಿಂದ ಮುದ್ದಾಡಿದ ಹುಲಿ ಮರಿ: ವಿಡಿಯೋ ವೈರಲ್​

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!