AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೆಳೆಯನೊಂದಿಗೆ ಲವ್ ಬ್ರೇಕಪ್; ಖುಷಿಯನ್ನು ಕುಟುಂಬದೊಂದಿಗೆ ಸಂಭ್ರಮಿಸಿದ ಯುವತಿ

ಈ ಬ್ರೇಕಪ್ ನೋವು ಸಾವಿನ ನೋವಿಗಿಂತ ಕಡಿಮೆಯೇನಿಲ್ಲ. ಈ ನೋವಿನಿಂದ ಹೊರಬರಲಾರದೆ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡವರು ಹಲವರಿದ್ದಾರೆ. ಆದ್ರೆ ಇಲ್ಲೊಬ್ಬಳು ಯುವತಿ ಮಾತ್ರ ಲವ್ ಬ್ರೇಕ್ ಮಾಡಿಕೊಂಡು, ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಈ ಖುಷಿಯನ್ನು ಕುಟುಂಬ ಸದಸ್ಯರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾಳೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Viral Video: ಗೆಳೆಯನೊಂದಿಗೆ ಲವ್ ಬ್ರೇಕಪ್; ಖುಷಿಯನ್ನು ಕುಟುಂಬದೊಂದಿಗೆ ಸಂಭ್ರಮಿಸಿದ ಯುವತಿ
ಮಾಲಾಶ್ರೀ ಅಂಚನ್​
| Edited By: |

Updated on: May 14, 2024 | 4:11 PM

Share

ಪ್ರೀತಿ ಅನ್ನೋದು ಪ್ರತಿಯೊಬ್ಬರ ಜೀವನದಲ್ಲಿ ಕೂಡಾ ಆಗುವಂತಹ ಒಂದು ಪವಿತ್ರ ಸಂಬಂಧ. ಆದ್ರೆ ಪ್ರೀತಿ ಮಾಡಿದವರೆಲ್ಲಾ ಒಂದಾಗುತ್ತಾರೆ ಎಂದೇನಿಲ್ಲ. ಕೆಲವೊಂದು ಕಾಣಗಳಿಂದ ಈ ಪ್ರೇಮಿಗಳು ದೂವಾಗಬೇಕಾದಂತಹ ಪರಿಸ್ಥಿತಿ ಎದುರಾಗುತ್ತದೆ. ಈ ಪ್ರೀತಿಯ ಸಂಬಂಧದಿಂದ ಬ್ರೇಕ್ ಅಪ್ ಮಾಡಿಕೊಂಡು ಹೊರಗೆ ಬರುವುದು ಸಾಕಷ್ಟು ಕಷ್ಟಕರವಾದ ವಿಚಾರ ಅಂತಾನೇ ಹೇಳ್ಬೋದು. ಈ ಬ್ರೇಕ್ ಅಪ್ ನೋವಿನಿಂದ ಹೊರ ಬರಲಾರದೆ ತಮ್ಮ ಸಂಗಾತಿಯ ಗುಂಗಿನಲ್ಲಿ ಜೀವನವನ್ನು ಹಾಳು ಮಾಡಿಕೊಳ್ಳುವವರು ಸಾಕಷ್ಟು ಜನ ಇದ್ದಾರೆ. ಆದ್ರೆ ಇಲ್ಲೊಬ್ಬ ಯುವತಿ ಮಾತ್ರ ಲವ್ ಬ್ರೇಕ್‌ ಅಪ್‌ಗೆಲ್ಲ ನೋ ಟೆನ್ಷನ್‌ ಎನ್ನುತ್ತಾ, ಬ್ರೇಕಪ್ ಖುಷಿಯನ್ನು ಕುಟುಂಬ ಸದಸ್ಯರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾಳೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವನ್ನು @FadeHubb ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಕುಟುಂಬದೊಂದಿಗೆ ಬ್ರೇಕ್‌ ಅಪ್‌ ಸಂಭ್ರಮಾಚರಣೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್‌ ವಿಡಿಯೋದಲ್ಲಿ ಯುವತಿಯೊಬ್ಬಳು ಕುಟುಂಬ ಸದಸ್ಯರ ಸಮ್ಮುಖದಲ್ಲಿ ತನ್ನ ಗೆಳಯನಿಗೆ ಬ್ರೇಕಪ್‌ ಮೆಸೇಜ್‌ ಕಳುಹಿಸುತ್ತಾಳೆ. ನಂತರ ಈ ಒಂದು ಖುಷಿಯ ವಿಚಾರವನ್ನು ಕುಟುಂಬ ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮದಿಂದ ಆಚರಿಸುವಂತಹ ದೃಶ್ಯವನ್ನು ಕಾಣಬಹುದು. ಮೇ 09 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.6 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಈ ಸಮಾಜದಲ್ಲಿ ಇಂತಹ ವಿಚಿತ್ರಗಳೂ ಕೂಡಾ ನಡೆಯುತ್ತದೆಯೇ ಎಂದು ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​