AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೆಳೆಯನೊಂದಿಗೆ ಲವ್ ಬ್ರೇಕಪ್; ಖುಷಿಯನ್ನು ಕುಟುಂಬದೊಂದಿಗೆ ಸಂಭ್ರಮಿಸಿದ ಯುವತಿ

ಈ ಬ್ರೇಕಪ್ ನೋವು ಸಾವಿನ ನೋವಿಗಿಂತ ಕಡಿಮೆಯೇನಿಲ್ಲ. ಈ ನೋವಿನಿಂದ ಹೊರಬರಲಾರದೆ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡವರು ಹಲವರಿದ್ದಾರೆ. ಆದ್ರೆ ಇಲ್ಲೊಬ್ಬಳು ಯುವತಿ ಮಾತ್ರ ಲವ್ ಬ್ರೇಕ್ ಮಾಡಿಕೊಂಡು, ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಈ ಖುಷಿಯನ್ನು ಕುಟುಂಬ ಸದಸ್ಯರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾಳೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Viral Video: ಗೆಳೆಯನೊಂದಿಗೆ ಲವ್ ಬ್ರೇಕಪ್; ಖುಷಿಯನ್ನು ಕುಟುಂಬದೊಂದಿಗೆ ಸಂಭ್ರಮಿಸಿದ ಯುವತಿ
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on: May 14, 2024 | 4:11 PM

Share

ಪ್ರೀತಿ ಅನ್ನೋದು ಪ್ರತಿಯೊಬ್ಬರ ಜೀವನದಲ್ಲಿ ಕೂಡಾ ಆಗುವಂತಹ ಒಂದು ಪವಿತ್ರ ಸಂಬಂಧ. ಆದ್ರೆ ಪ್ರೀತಿ ಮಾಡಿದವರೆಲ್ಲಾ ಒಂದಾಗುತ್ತಾರೆ ಎಂದೇನಿಲ್ಲ. ಕೆಲವೊಂದು ಕಾಣಗಳಿಂದ ಈ ಪ್ರೇಮಿಗಳು ದೂವಾಗಬೇಕಾದಂತಹ ಪರಿಸ್ಥಿತಿ ಎದುರಾಗುತ್ತದೆ. ಈ ಪ್ರೀತಿಯ ಸಂಬಂಧದಿಂದ ಬ್ರೇಕ್ ಅಪ್ ಮಾಡಿಕೊಂಡು ಹೊರಗೆ ಬರುವುದು ಸಾಕಷ್ಟು ಕಷ್ಟಕರವಾದ ವಿಚಾರ ಅಂತಾನೇ ಹೇಳ್ಬೋದು. ಈ ಬ್ರೇಕ್ ಅಪ್ ನೋವಿನಿಂದ ಹೊರ ಬರಲಾರದೆ ತಮ್ಮ ಸಂಗಾತಿಯ ಗುಂಗಿನಲ್ಲಿ ಜೀವನವನ್ನು ಹಾಳು ಮಾಡಿಕೊಳ್ಳುವವರು ಸಾಕಷ್ಟು ಜನ ಇದ್ದಾರೆ. ಆದ್ರೆ ಇಲ್ಲೊಬ್ಬ ಯುವತಿ ಮಾತ್ರ ಲವ್ ಬ್ರೇಕ್‌ ಅಪ್‌ಗೆಲ್ಲ ನೋ ಟೆನ್ಷನ್‌ ಎನ್ನುತ್ತಾ, ಬ್ರೇಕಪ್ ಖುಷಿಯನ್ನು ಕುಟುಂಬ ಸದಸ್ಯರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾಳೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವನ್ನು @FadeHubb ಎಂಬ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಕುಟುಂಬದೊಂದಿಗೆ ಬ್ರೇಕ್‌ ಅಪ್‌ ಸಂಭ್ರಮಾಚರಣೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್‌ ವಿಡಿಯೋದಲ್ಲಿ ಯುವತಿಯೊಬ್ಬಳು ಕುಟುಂಬ ಸದಸ್ಯರ ಸಮ್ಮುಖದಲ್ಲಿ ತನ್ನ ಗೆಳಯನಿಗೆ ಬ್ರೇಕಪ್‌ ಮೆಸೇಜ್‌ ಕಳುಹಿಸುತ್ತಾಳೆ. ನಂತರ ಈ ಒಂದು ಖುಷಿಯ ವಿಚಾರವನ್ನು ಕುಟುಂಬ ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮದಿಂದ ಆಚರಿಸುವಂತಹ ದೃಶ್ಯವನ್ನು ಕಾಣಬಹುದು. ಮೇ 09 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3.6 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಅಬ್ಬಬ್ಬಾ ಈ ಸಮಾಜದಲ್ಲಿ ಇಂತಹ ವಿಚಿತ್ರಗಳೂ ಕೂಡಾ ನಡೆಯುತ್ತದೆಯೇ ಎಂದು ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು