AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಲ್ಯದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್​​ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಯುವತಿ

ಕೆಲವೊಮ್ಮೆ ನಾವು ಮಾಡುವಂತಹ ಸಣ್ಣ ಸಹಾಯ ಅಥವಾ ಕೆಲಸವು ಇನ್ನೊಬ್ಬರ ಮುಖದಲ್ಲಿ ಸಂತೋಷವನ್ನು ಮೂಡಿಸುತ್ತದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವತಿಯೊಬ್ಬಳು ಆಟೋ ಚಾಲಕರೊಬ್ಬರಿಗೆ ನೀರಿನ ಬಾಟಲಿಯನ್ನು ಉಡುಗೊರೆ ರೂಪದಲ್ಲಿ ನೀಡಿದ್ದಾಳೆ. ಈ ಸರ್ಪ್ರೈಸ್ ಗಿಫ್ಟ್ ಕಂಡು ಆ ವ್ಯಕ್ತಿ ಭಾವುಕರಾಗಿದ್ದಾರೆ.

Viral Video: ಬಾಲ್ಯದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್​​ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಯುವತಿ
ಮಾಲಾಶ್ರೀ ಅಂಚನ್​
| Edited By: |

Updated on: May 08, 2024 | 12:40 PM

Share

ನಮ್ಮ ಜಗತ್ತು ಎಷ್ಟೇ ಮುಂದುವರೆದಿದ್ದರೂ ಮನುಷ್ಯರಲ್ಲಿ ದಯಾ ಮನೋಭಾವವೊಂದು ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಈ ದಯಾಗುಣ ಹಾಗೂ ಮಾನವೀಯತೆಯೇ ಮನುಷ್ಯ ಸಂಬಂಧಗಳನ್ನು ಪರಸ್ಪರ ಬೆಸೆಯುತ್ತದೆ. ಹೀಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿ ಮನುಕುಲಕ್ಕೆ ಒಳಿತು ಮಾಡಬೇಕೆಂದು ಬಯಸುವ ಹಲವು ಜನರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಅದೇ ರೀತಿ ಇಲ್ಲೊಬ್ಬ ಯುವತಿ ದಿನವಿಡೀ ಕಷ್ಟ ಪಟ್ಟು ಆಟೋ ಓಡಿಸಿ ಜೀವನ ಸಾಗಿಸುವ ಆಟೋ ಚಾಲಕರೊಬ್ಬರಿಗೆ ನೀರಿನ ಬಾಟಲಿಯೊಂದನ್ನು ಉಡುಗೊರೆ ನೀಡಿದ್ದಾಳೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ವಿಡಿಯೋವನ್ನು @cheerfullbong ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ.

View this post on Instagram

A post shared by JOY + EE (@cheerfulbong)

ವೈರಲ್ ವಿಡಿಯೋದಲ್ಲಿ ಯುವತಿಯೊಬ್ಬಳು ತನ್ನನ್ನು ಸಣ್ಣ ವಯಸ್ಸಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್ ಒಬ್ಬರಿಗೆ ನೀರಿನ ಬಾಟಲಿಯನ್ನು ಉಡುಗೊರೆಯಾಗಿ ನೀಡಿರುವ ದೃಶ್ಯವನ್ನು ಕಾಣಬಹುದು. ದಿನವಿಡೀ ಕಷ್ಟಪಟ್ಟು ಕೆಲಸ ಮಾಡುವ ಆಟೋ ಡ್ರೈವರ್ ಕುಡಿಯುವ ನೀರಿಗೆ ಅಷ್ಟೇನೂ ಸ್ವಚ್ಛವಾಗಿರದ ಪ್ಲಾಸ್ಟಿಕ್ ಬಾಟಲಿಯನ್ನು ಬಳಸುತ್ತಿರುವುದನ್ನು ಗಮನಿಸಿದ ಆ ಯುವತಿ, ಇವರಿಗೆ ಒಂದೊಳ್ಳೆ ಗುಣಮಟ್ಟದ ನೀರಿನ ಬಾಟಲಿಯನ್ನು ಕೊಡಬೇಕು ಎಂದು ಯೋಜಿಸಿ, ಕಾರ್ಮಿಕರ ದಿನದಂದು ಬಾಟಲಿಯನ್ನು ಉಡುಗೊರೆಯಾಗಿ ನೀಡುತ್ತಾಳೆ. ಈ ಸರ್ಪ್ರೈಸ್ ಉಡುಗೊರೆಯನ್ನು ಕಂಡು ಆಟೋಚಾಲಕ ಭಾವುಕರಾಗಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

ಒಂದು ವಾರದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆಟೋ ಚಾಲಕನ ಮುಖದಲ್ಲಿ ನಗು ತರಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳು ಎಂದು ನೆಟ್ಟಿಗರು ಯುವತಿಯ ಸತ್ಕಾರ್ಯವನ್ನು ಶ್ಲಾಘಿಸಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ