AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಲ್ಯದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್​​ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಯುವತಿ

ಕೆಲವೊಮ್ಮೆ ನಾವು ಮಾಡುವಂತಹ ಸಣ್ಣ ಸಹಾಯ ಅಥವಾ ಕೆಲಸವು ಇನ್ನೊಬ್ಬರ ಮುಖದಲ್ಲಿ ಸಂತೋಷವನ್ನು ಮೂಡಿಸುತ್ತದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವತಿಯೊಬ್ಬಳು ಆಟೋ ಚಾಲಕರೊಬ್ಬರಿಗೆ ನೀರಿನ ಬಾಟಲಿಯನ್ನು ಉಡುಗೊರೆ ರೂಪದಲ್ಲಿ ನೀಡಿದ್ದಾಳೆ. ಈ ಸರ್ಪ್ರೈಸ್ ಗಿಫ್ಟ್ ಕಂಡು ಆ ವ್ಯಕ್ತಿ ಭಾವುಕರಾಗಿದ್ದಾರೆ.

Viral Video: ಬಾಲ್ಯದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್​​ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಯುವತಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 08, 2024 | 12:40 PM

ನಮ್ಮ ಜಗತ್ತು ಎಷ್ಟೇ ಮುಂದುವರೆದಿದ್ದರೂ ಮನುಷ್ಯರಲ್ಲಿ ದಯಾ ಮನೋಭಾವವೊಂದು ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಈ ದಯಾಗುಣ ಹಾಗೂ ಮಾನವೀಯತೆಯೇ ಮನುಷ್ಯ ಸಂಬಂಧಗಳನ್ನು ಪರಸ್ಪರ ಬೆಸೆಯುತ್ತದೆ. ಹೀಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿ ಮನುಕುಲಕ್ಕೆ ಒಳಿತು ಮಾಡಬೇಕೆಂದು ಬಯಸುವ ಹಲವು ಜನರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಅದೇ ರೀತಿ ಇಲ್ಲೊಬ್ಬ ಯುವತಿ ದಿನವಿಡೀ ಕಷ್ಟ ಪಟ್ಟು ಆಟೋ ಓಡಿಸಿ ಜೀವನ ಸಾಗಿಸುವ ಆಟೋ ಚಾಲಕರೊಬ್ಬರಿಗೆ ನೀರಿನ ಬಾಟಲಿಯೊಂದನ್ನು ಉಡುಗೊರೆ ನೀಡಿದ್ದಾಳೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಈ ವಿಡಿಯೋವನ್ನು @cheerfullbong ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ.

View this post on Instagram

A post shared by JOY + EE (@cheerfulbong)

ವೈರಲ್ ವಿಡಿಯೋದಲ್ಲಿ ಯುವತಿಯೊಬ್ಬಳು ತನ್ನನ್ನು ಸಣ್ಣ ವಯಸ್ಸಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್ ಒಬ್ಬರಿಗೆ ನೀರಿನ ಬಾಟಲಿಯನ್ನು ಉಡುಗೊರೆಯಾಗಿ ನೀಡಿರುವ ದೃಶ್ಯವನ್ನು ಕಾಣಬಹುದು. ದಿನವಿಡೀ ಕಷ್ಟಪಟ್ಟು ಕೆಲಸ ಮಾಡುವ ಆಟೋ ಡ್ರೈವರ್ ಕುಡಿಯುವ ನೀರಿಗೆ ಅಷ್ಟೇನೂ ಸ್ವಚ್ಛವಾಗಿರದ ಪ್ಲಾಸ್ಟಿಕ್ ಬಾಟಲಿಯನ್ನು ಬಳಸುತ್ತಿರುವುದನ್ನು ಗಮನಿಸಿದ ಆ ಯುವತಿ, ಇವರಿಗೆ ಒಂದೊಳ್ಳೆ ಗುಣಮಟ್ಟದ ನೀರಿನ ಬಾಟಲಿಯನ್ನು ಕೊಡಬೇಕು ಎಂದು ಯೋಜಿಸಿ, ಕಾರ್ಮಿಕರ ದಿನದಂದು ಬಾಟಲಿಯನ್ನು ಉಡುಗೊರೆಯಾಗಿ ನೀಡುತ್ತಾಳೆ. ಈ ಸರ್ಪ್ರೈಸ್ ಉಡುಗೊರೆಯನ್ನು ಕಂಡು ಆಟೋಚಾಲಕ ಭಾವುಕರಾಗಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

ಒಂದು ವಾರದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆಟೋ ಚಾಲಕನ ಮುಖದಲ್ಲಿ ನಗು ತರಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳು ಎಂದು ನೆಟ್ಟಿಗರು ಯುವತಿಯ ಸತ್ಕಾರ್ಯವನ್ನು ಶ್ಲಾಘಿಸಿದ್ದಾರೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ