AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು ದಪ್ಪಗಿದ್ದೀಯ’ ಎಂದು ಪತಿ ಪದೇಪದೇ ಗೇಲಿ ಮಾಡಿದಕ್ಕೆ ಆತ್ಮಹತ್ಯೆಗೆ ಶರಣಾದ ಪತ್ನಿ

ಅಸ್ಲಂ ಕಾಂಡೆ ಮತ್ತು ತೆಹ್ಮಿನಾ 2016 ರಲ್ಲಿ ವಿವಾಹವಾಗಿದ್ದರು. ಆದರೆ ಪತ್ನಿ ತೆಹ್ಮಿನಾ ಸಾಕಷ್ಟು ದಪ್ಪಗಿದ್ದರಿಂದ ಮಗುವನ್ನು ಹೆರಲು ಸಾಧ್ಯವಾಗದ ಕಾರಣ ಬೇರೊಬ್ಬಳನ್ನು ಮದುವೆಯಾಗುವುದಾಗಿ ಪತಿ ಅಸ್ಲಂ ಕಾಂಡೆ ಪತೀ ದಿನ ಹೇಳುತ್ತಿದ್ದ. ಇದಲ್ಲದೇ ನೀನು ದಪ್ಪಗಿದ್ದೀಯ, ನಿಂಗೆ ಡ್ರೆಸ್ಸಿಂಗ್​ ಸೆನ್ಸ್ ಇಲ್ಲ ಎಂದು ಪದೇ ಪದೇ ಗೇಲಿ ಮಾಡುತ್ತಿದ್ದ. ಇದರಿಂದ ಖಿನ್ನತೆಗೆ ಜಾರಿದ್ದಳು.

'ನೀನು ದಪ್ಪಗಿದ್ದೀಯ' ಎಂದು ಪತಿ ಪದೇಪದೇ  ಗೇಲಿ ಮಾಡಿದಕ್ಕೆ ಆತ್ಮಹತ್ಯೆಗೆ ಶರಣಾದ ಪತ್ನಿ
Women dies after husband calls her fat Image Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 23, 2024 | 2:33 PM

Share

ಮುಂಬೈ: ನೀನು ದಪ್ಪಗಿದ್ದೀಯ, ನಿಂಗೆ ಡ್ರೆಸ್ಸಿಂಗ್​ ಸೆನ್ಸ್ ಇಲ್ಲ ಎಂದು ಪ್ರತೀ ದಿನ ಗಂಡ ಹೆಂಡತಿಯನ್ನು ರೇಗಿಸುತ್ತಿದ್ದ. ಇದರಿಂದಾಗಿ ಸಾಕಷ್ಟು ನೊಂದಿದ್ದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಪದೇ ಪದೇ ಗೇಲಿ ಮಾಡುತ್ತಿದ್ದ ಎಂದು ಪತ್ನಿ ಸಾವನ್ನಪ್ಪಿರುವ ಘಟನೆ ಮುಂಬೈನ ಬೈಕುಲ್ಲಾದಲ್ಲಿ ನಡೆದಿದೆ. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು ಆಕೆಯ ತಾಯಿ ದೂರಿನ ಮೇರೆಗೆ ಪತಿ ಹಾಗೂ ಆತನ ಸಹೋದರಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಮಹಿಳೆಯನ್ನು ತೆಹ್ಮಿನಾ ಅಸ್ಲಂ ಕಾಂಡೆ ಮತ್ತು ಆಕೆಯ ಪತಿ ಅಸ್ಲಂ ಕಾಂಡೆ ಎಂದು ಗುರುತಿಸಲಾಗಿದೆ. “ನನ್ನ ಮಗಳು ಸಾಕಷ್ಟು ಮಾನಸಿಕವಾಗಿ ನೊಂದಿದ್ದಳು. ಆದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ಮಗಳ ಸಾವಿಗೆ ನ್ಯಾಯ ಒದಗಿಸಿಕೊಡಿ” ಎಂದು ಮೃತ ಮಹಿಳೆಯ ತಾಯಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ತಂಗಿ ಪರೀಕ್ಷೆಯಲ್ಲಿ ಕಾಪಿ ಮಾಡಲು ಸಹಾಯವಾಗಲೆಂದು ಪೊಲೀಸ್​​​ ವೇಷ ತೊಟ್ಟು ಬಂದ ಅಣ್ಣ

ಪೊಲೀಸರ ವಿವರಗಳ ಪ್ರಕಾರ, ಅಸ್ಲಂ ಕಾಂಡೆ ಮತ್ತು ತೆಹ್ಮಿನಾ 2016 ರಲ್ಲಿ ವಿವಾಹವಾಗಿದ್ದರು. ಆದರೆ ಪತ್ನಿ ತೆಹ್ಮಿನಾ ಸಾಕಷ್ಟು ದಪ್ಪಗಿದ್ದರಿಂದ ಮಗುವನ್ನು ಹೆರಲು ಸಾಧ್ಯವಾಗದ ಕಾರಣ ಬೇರೊಬ್ಬಳನ್ನು ಮದುವೆಯಾಗುವುದಾಗಿ ಪತಿ ಅಸ್ಲಂ ಕಾಂಡೆ(43) ಪತೀ ದಿನ ಹೇಳುತ್ತಿದ್ದ. ಇದಲ್ಲದೇ ನೀನು ದಪ್ಪಗಿದ್ದೀಯ, ನಿಂಗೆ ಡ್ರೆಸ್ಸಿಂಗ್​ ಸೆನ್ಸ್ ಇಲ್ಲ ಎಂದು ಪದೇ ಪದೇ ಗೇಲಿ ಮಾಡುತ್ತಿದ್ದ. ಇದರಿಂದ ಖಿನ್ನತೆಗೆ ಜಾರಿದ್ದಳು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪತಿ ತನ್ನ ಹೆಂಡತಿಗೆ ಅಪಹಾಸ್ಯ ಮಾಡುತ್ತಿದ್ದಾನೆ ಎಂಬ ಆರೋಪದ ಆಧಾರದ ಮೇಲೆ ಪತಿ ಮತ್ತು ಆತನ ಸಹೋದರಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ