AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ನಡುರಸ್ತೆಯಲ್ಲೇ ಯುವತಿಯ ವಿಚಿತ್ರ ಡ್ಯಾನ್ಸ್ ;ವಿಡಿಯೋ ವೈರಲ್​​

ವೈರಲ್ ಆಗಿರುವ ವಿಡಿಯೋದಲ್ಲಿ, ರಸ್ತೆಯ ಮಧ್ಯದಲ್ಲಿ ಯುವತಿಯೊಬ್ಬಳು ಭೂಲ್ ಭುಲಯ್ಯ ಸಿನಿಮಾದ 'ಮಂಜುಲಿಕಾ'ನಂತೆ ನೃತ್ಯ ಮಾಡುವುದನ್ನು ಕಾಣಬಹುದು. ಯುವತಿಯ ಅವತಾರ ಕಂಡು ಒಂದು ಕ್ಷಣ ಸಾರ್ವಜನಿಕರು ಶಾಕ್​ ಆಗಿದ್ದಾರೆ.

Video Viral: ನಡುರಸ್ತೆಯಲ್ಲೇ ಯುವತಿಯ ವಿಚಿತ್ರ ಡ್ಯಾನ್ಸ್ ;ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: May 16, 2024 | 4:51 PM

Share

ಇತ್ತೀಚಿನ ದಿನಗಳಲ್ಲಿ ರೀಲ್ಸ್​​ ಹುಚ್ಚು ಹೆಚ್ಚಾಗಿದೆ. ಮಾರ್ಕೆಟ್​​ನಿಂದ ಹಿಡಿದು ಮೆಟ್ರೋ, ರೈಲ್ವೇ ಸ್ಟೇಷನ್​​ ಎಲ್ಲೆಂದರಲ್ಲಿ ರೀಲ್ಸ್​​ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಯುವತಿಯೊಬ್ಬಳು ನಡುರಸ್ತೆಯಲ್ಲೇ ವಿಚಿತ್ರವಾಗಿ ಡ್ಯಾನ್ಸ್ ಮಾಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಯುವತಿ ಅವತಾರ ಕಂಡು ಒಂದು ಕ್ಷಣ ಸಾರ್ವಜನಿಕರು ಶಾಕ್​ ಆಗಿದ್ದು, ಸಾರ್ವಜನಿಕರ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಕೂಡ ವಿಡಿಯೋದಲ್ಲಿ ತೋರಿಸಲಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ರಸ್ತೆಯ ಮಧ್ಯದಲ್ಲಿ ಯುವತಿಯೊಬ್ಬಳು ಭೂಲ್ ಭುಲಯ್ಯ ಸಿನಿಮಾದ ‘ಮಂಜುಲಿಕಾ’ನಂತೆ ನೃತ್ಯ ಮಾಡುವುದನ್ನು ಕಾಣಬಹುದು. ಯುವತಿಯನ್ನು ಮೇಘಾಲಯದ ಶಿಲ್ಲಾಂಗ್‌ನ ಇನ್‌ಸ್ಟಾಗ್ರಾಮ್ ಪ್ರಭಾವಿ ಪ್ರೀತಿ ಥಾಪಾ ಎಂದು ಗುರುತಿಸಲಾಗಿದೆ. ವಿಡಿಯೋದಲ್ಲಿ ಈಕೆ ಹಸಿರು ಸೀರೆಯಲ್ಲಿ ವಿಚಿತ್ರ ಕೂದಲು ಹಾಗೂ ಮೇಕಪ್‌ನೊಂದಿಗೆ ರಸ್ತೆಯ ಮಧ್ಯದಲ್ಲಿ ವಿಕಾರವಾಗಿ ನೃತ್ಯ ಮಾಡುವುದನ್ನು ಕಾಣಬಹುದು.

ಇದನ್ನೂ ಓದಿ: ಅಮ್ಮಾ ನಾನು ಕಳ್ಳನನ್ನು ಹಿಡಿದುಬಿಟ್ಟೆ,  ಮೆಟ್ರೋದಲ್ಲಿ ಜೇಬುಗಳ್ಳನನ್ನು ಹಿಡಿದ ಯೂಟ್ಯೂಬರ್

ಪ್ರೀತಿ ಥಾಪಾ ಸ್ವತಃ ತನ್ನ @preetithapasoss ಇನ್‌ಸ್ಟಾ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದು, ಪ್ರಿಯ ಮಂಜುಲಿಕಾ ದಯವಿಟ್ಟು ಸಂಚಾರ ನಿಯಮಗಳನ್ನು ಅನುಸರಿಸಿ. ಮತ್ತೊಬ್ಬ ಬಳಕೆದಾರರು ಜನರು ಇಂತಹ ಹುಚ್ಚುತನವನ್ನು ಹೇಗೆ ಸಹಿಸಿಕೊಳ್ಳುತ್ತಾರೆ ಎಂದು ನನಗೆ ತಿಳಿದಿಲ್ಲ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು