AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Village of Widows: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಈ ಗ್ರಾಮದಲ್ಲಿ ಎಲ್ಲಿ ನೋಡಿದರೂ ಬರೀ ಮಹಿಳೆಯರೇ, ಅದರಲ್ಲೂ ವಿಧವೆ ಮಹಿಳೆಯರು. ಯಾಕೆಂದರೆ ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರಂತೆ. ಏನಪ್ಪಾ ಇದು ಯಾವುದೋ ಶಾಪಗ್ರಸ್ಥ ಹಳ್ಳಿ ಅಂತ ನೀವು ಅಂದುಕೊಂಡರೆ ಅದು ಸುಳ್ಳು. ಯಾಕೆಂದರೆ ಇಲ್ಲಿ ಪುರುಷರು ಚಿಕ್ಕ ವಯಸ್ಸಿನಲ್ಲಿ ಸಾಯಲು ಬಲವಾದ ಕಾರಣವಿದೆ.

Village of Widows: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!
'Widow Village' Image Credit source: Sharique Ahmad/DW
ಅಕ್ಷತಾ ವರ್ಕಾಡಿ
|

Updated on: May 07, 2024 | 10:22 AM

Share

ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿರುವ ಬುಧಪುರ ಗ್ರಾಮವನ್ನು ವಿಧವೆಯರ ಗ್ರಾಮ ಎಂದೂ ಕರೆಯುತ್ತಾರೆ. ಹೌದು, ಈ ಗ್ರಾಮದಲ್ಲಿ ವಾಸಿಸುವ ಬಹುತೇಕ ಮಹಿಳೆಯರು ವಿಧವೆಯರು. ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಗಂಡಂದಿರು ಸಾಯುವುದರಿಂದ ಬಹಳಷ್ಟು ಮಹಿಳೆಯರು ಚಿಕ್ಕ ವಯಸ್ಸಿನಲ್ಲೇ ವಿಧವೆಯರಾಗುತ್ತಾರೆ. ಏನಪ್ಪಾ ಇದು ಯಾವುದೋ ಶಾಪಗ್ರಸ್ಥ ಹಳ್ಳಿ ಅಂತ ನೀವು ಅಂದುಕೊಂಡರೆ ಅದು ಸುಳ್ಳು. ಯಾಕೆಂದರೆ ಇಲ್ಲಿ ಪುರುಷರು ಚಿಕ್ಕ ವಯಸ್ಸಿನಲ್ಲಿ ಸಾಯಲು ಬಲವಾದ ಕಾರಣವಿದೆ.

ಸಿಲಿಕೋಸಿಸ್ ಕಾಯಿಲೆ:

ಅನೇಕ ವರದಿಗಳ ನಂತರ, ಇಲ್ಲಿ ಪುರುಷರು ಸಿಲಿಕೋಸಿಸ್ ಎಂಬ ಕಾಯಿಲೆಯಿಂದ ಸಾಯುತ್ತಾರೆ ಎಂಬುದು ಸ್ಪಷ್ಟವಾಗಿದೆ. ಸಿಲಿಕೋಸಿಸ್ ಎನ್ನುವುದು ಸ್ಫಟಿಕದಂತಹ ಸಿಲಿಕಾ ಧೂಳಿನಿಂದ ಉಂಟಾಗುವ ಶ್ವಾಸಕೋಶದ ಕಾಯಿಲೆಯ ಒಂದು ರೂಪವಾಗಿದೆ. ವಾಸ್ತವವಾಗಿ, ಈ ಗ್ರಾಮದ ಹೆಚ್ಚಿನ ಪುರುಷರು ಗಣಿಗಳಲ್ಲಿ ಕೆಲಸ ಮಾಡುತ್ತಾರೆ. ಗಣಿಗಳಲ್ಲಿ ಕೆಲಸ ಮಾಡುವವರಿಗೆ ಈ ಶ್ವಾಸಕೋಶ ಸಂಬಂಧಿ ರೋಗ ಬರುತ್ತದೆ. ಸರ್ಕಾರದಿಂದ ಯಾವುದೇ ಸೌಲಭ್ಯಗಳು ಈ ಗ್ರಾಮಕ್ಕೆ ಸಿಗದೇ ಇರುವ ಕಾರಣ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೆ ಸಾವನ್ನಪ್ಪುತ್ತಿದ್ದಾರೆ.

ಇದನ್ನೂ ಓದಿ: ಹಿಟ್ಲರ್​ನ ಸಹಚರ ವಾಸವಿದ್ದ ಈ ವಿಲ್ಲಾವನ್ನು ಫ್ರೀ ಆಗಿ ಕೊಡ್ತಿದ್ದಾರಂತೆ ತಗೋತೀರಾ?

ಈ ಗ್ರಾಮದಲ್ಲಿ ಬಹುತೇಕ ವಿಧವೆ ಮಹಿಳೆಯರು ಜೀವನ ನಡೆಸುತ್ತಿದ್ದು, ಯಾವುದೇ ರೀತಿಯ ಸಹಾಯ ಸಿಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಗಂಡ ಸತ್ತ ಮೇಲೂ ಇಲ್ಲಿನ ಹೆಂಗಸರೆಲ್ಲ ಗಣಿ ಕೆಲಸ ಮಾಡಿ ಮಕ್ಕಳನ್ನು ಸಾಕಬೇಕು. ಈ ಗಣಿಗಳಲ್ಲಿ ಮರಳುಗಲ್ಲು ಒಡೆಯುವ ಕೆಲಸ ಹಲವು ಗಂಟೆಗಳ ಕಾಲ ನಡೆಯುತ್ತದೆ. ಈ ಕಲ್ಲುಗಳನ್ನು ಕೆತ್ತುವಾಗ ಹೊರಬರುವ ಧೂಳಿನಿಂದ ಕಾರ್ಮಿಕರ ಶ್ವಾಸಕೋಶದಲ್ಲಿ ಸೋಂಕು ಉಂಟಾಗುತ್ತದೆ. ಚಿಕಿತ್ಸೆ ನೀಡಿದರೆ ಅವರ ಜೀವ ಉಳಿಯುತ್ತದೆ. ಇಲ್ಲದಿದ್ದರೆ ಸಾವು ಖಚಿತ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?