AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದಪ್ಪಾ ಟೈಮ್ ಮ್ಯಾನೆಜ್ಮೆಂಟ್ ಅಂದ್ರೆ; ಟ್ರಾಫಿಕ್​​ನಲ್ಲಿ ಬಟಾಣಿ ಸಿಪ್ಪೆ ಬಿಡಿಸಿದ ಮಹಿಳೆ 

ಈಗೀಗ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ನದ್ದೇ ದೊಡ್ಡ ತಲೆ ನೋವು. ಅದರಲ್ಲೂ ಈ ಟ್ರಾಫಿಕ್ ನಲ್ಲಿ ನಡೆಯುವ ಕೆಲವು ಘಟನೆಗಳು ನೋಡಲು ತುಂಬಾ ಸ್ವಾರಸ್ಯರವಾಗಿರುತ್ತವೆ. ಈ ಹಿಂದೆ ಬೆಂಗಳೂರಿನ ಟ್ರಾಫಿಕ್ ಕಾರಣದಿಂದ ಆಫೀಸಿಗೆ ಹೋಗಲು ತಡವಾಗುತ್ತೆ ಎಂದು ಮಹಿಳೆಯೊಬ್ಬರು ಸ್ಕೂಟಿಯಲ್ಲೇ ಕುಳಿತು ಲ್ಯಾಪ್ಟಾಪ್ ಹಿಡಿದು ಕೆಲಸ ಮಾಡಿದ ಸುದ್ದಿಯನ್ನು ಕೇಳಿರುತ್ತೀರಿ ಅಲ್ವಾ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಟ್ರಾಫಿಕ್ ನಲ್ಲಿ ಕುಳಿತು ಸುಮ್ಮನೆ ಟೈಮ್ ವೇಸ್ಟ್ ಮಾಡೋದು ಯಾಕೆ ಅಂತ, ಮಹಿಳೆಯೊಬ್ಬರು ನಡುರಸ್ತೆಯಲ್ಲಿಯೇ ಬಟಾಣಿ ಸಿಪ್ಪೆ ಬಿಡಿಸಿದ್ದಾರೆ.  ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. 

Viral Video: ಇದಪ್ಪಾ ಟೈಮ್ ಮ್ಯಾನೆಜ್ಮೆಂಟ್ ಅಂದ್ರೆ; ಟ್ರಾಫಿಕ್​​ನಲ್ಲಿ ಬಟಾಣಿ ಸಿಪ್ಪೆ ಬಿಡಿಸಿದ ಮಹಿಳೆ 
ಮಾಲಾಶ್ರೀ ಅಂಚನ್​
| Edited By: |

Updated on: Mar 11, 2024 | 12:40 PM

Share

ದೊಡ್ಡ ದೊಡ್ಡ ನಗರಗಳಲ್ಲಿ ಪ್ರತಿನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆ ಇದ್ದೇ ಇರುತ್ತದೆ. ಈ ಕಾರಣದಿಂದ ಜನರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನೂ ಹೊರಗೆ ಕೆಲಸಕ್ಕೆ ಹೋಗುವ ಮಹಿಳೆಯರಂತೂ ತುಸು ಹೆಚ್ಚೇ ಸಮಸ್ಯೆಗಳನ್ನು ಎದುರಿಸುತ್ತಾರೆ. ಹೌದು ಮನೆ ಕೆಲಸಗಳನ್ನು ಸಂಜೆ ಮಾಡಿದ್ರೆ ಆಯ್ತಾಪ್ಪಾ ಎನ್ನುತ್ತಾ ಬೇಗ ಆಫೀಸಿಗೆ ಹೋಗುವ ಮಹಿಳೆಯರು, ಈ ಟ್ರಾಫಿಕ್ ಕಾರಣದಿಂದ ಸಂಜೆ ಮನೆಗೆ ಬರುವುದು ಕೂಡಾ ತಡವಾಗುತ್ತದೆ. ಇದರಿಂದಾಗಿ  ಪೂರಾ ಮನೆ ಕೆಲಸ ಮಾಡೋದು ಬಿಡಿ, ಒಂಚೂರು ರೆಸ್ಟ್ ಮಾಡೋಕು ಅವರಿಗೆ ಟೈಮ್ ಸಿಗೋದಿಲ್ಲ. ಆದ್ರೆ ಇಲ್ಲೊಬ್ರು ಮಹಿಳೆ ಈ ಟ್ರಾಫಿಕ್ ಸಮಸ್ಯೆ ಇದ್ದಿದ್ದೇ, ಅದನ್ನು ಸರಿ ಪಡಿಸಲು ಬಹುಶಃ ಯಾರ ಕೈಯಿಂದಲೂ ಸಾಧ್ಯವಿಲ್ಲ. ಆದರೆ ನಾನು ಈ ಟ್ರಾಫಿಕ್ ನಲ್ಲಿ ಸುಮ್ಮನೆ ಕುಳಿತು ಸಮಯ ವ್ಯರ್ಥ ಮಾಡುವ ಬದಲು ಏನಾದ್ರೂ ಕೆಲಸ ಮಾಡ್ಬೋದಲ್ವಾ ಎನ್ನುತ್ತಾ ಟ್ರಾಫಿಕ್ ಮಧ್ಯೆ ನಡು ರಸ್ತೆಯಲ್ಲಿಯೇ ಮಾರುಕಟ್ಟೆಯಿಂದ ತಂದಂತಹ ಬಟಾಣಿಯ ಸಿಪ್ಪೆ ಬಿಡಿಸಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ರಸ್ತೆ ಮಧ್ಯೆ ನಿಂತು ಬಟಾಣಿ ಸಿಪ್ಪೆ ಬಿಡಿಸುತ್ತಿರುವ ದೃಶ್ಯವನ್ನು ಕಾಣಬಹುದು. @ghantaa ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಟೈಮ್ ಮ್ಯಾನೆಜ್ಮೆಂಟ್” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ:

View this post on Instagram

A post shared by ghantaa (@ghantaa)

ವೈರಲ್ ವಿಡಿಯೋದಲ್ಲಿ ಯಾವುದೋ ಒಂದು ನಗರದಲ್ಲಿ ಸಂಜೆ ಹೊತ್ತಿನಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿರುತ್ತದೆ. ಅಲ್ಲಿದ್ದ ವಾಹನ ಸವಾರರೆಲ್ಲರೂ ಅಬ್ಬಬ್ಬಾ ಈ ಟ್ರಾಫಿಕ್ ಯಾವಾಗ ಕ್ಲೀಯರ್ ಆಗುತ್ತೋ, ನಾವು ಯಾವಾಗ ಮನೆಗೆ ಹೋಗಿ ತಲುಪುತ್ತೆವೆಯೋ ಎಂದು ತಲೆ ಬಿಸಿ ಮಾಡಿಕೊಂಡು ಕೂತಿರುತ್ತಾರೆ. ಈ ಮಧ್ಯೆ ತಲೆ ಬಿಸಿ ಮಾಡಿಕೊಂಡ್ರೆ ಏನ್ ಪ್ರಯೋಜನ, ಟೈಮ್ ಸೇವ್ ಮಾಡಲು ಇಲ್ಲೇ ಏನಾದ್ರೂ ಮನೆ ಕೆಲಸ ಮಾಡ್ಬೋದಲ್ವಾ ಎನ್ನುತ್ತಾ ಮಹಿಳೆಯೊಬ್ಬರು ನಡುರಸ್ತೆಯಲ್ಲಿ ತಮ್ಮ ಸ್ಕೂಟಿಯ ಮೇಲೆ ಮಾರುಕಟ್ಟೆಯಿಂದ ತಂದಂತಹ ಬಟಾಣಿಯನ್ನಿಟ್ಟು, ಅಲ್ಲೇ ನಿಂತುಕೊಂಡು ಬಟಾಣಿ ಸಿಪ್ಪೆ ಸುಳಿಯುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಐ ಲವ್ ಯು ಬೇಬಿ; ಪ್ರೇಯಸಿಗೆ ಪ್ರಪೋಸ್ ಮಾಡಿ ಮುತ್ತು ಕೇಳಿದ ತುಂಟ ಗಿಳಿರಾಯ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ  2.3 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 80 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅನೇಕರು ಈ ದೃಶ್ಯ ವಾಸ್ತವವಾಗಿ ತಾಯಂದಿರ ಕಠಿಣ ಪರಿಶ್ರಮ  ಮತ್ತು ಅವರಿಗಿರುವ ಕೆಲಸದ ಒತ್ತಡದ ಪ್ರಮಾಣವನ್ನು ತೋರಿಸುತ್ತದೆ. ತಾಯಿ ಯಾವಾಗಲೂ, ಎಲ್ಲಿದ್ದರೂ ತನ್ನ ಕುಟುಂಬಕ್ಕಾಗಿಯೇ ಶ್ರಮಿಸುತ್ತಾಳೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್