AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧನಾಡು ಉಕ್ರೇನ್​ನ ಎಲ್ವಿವ್ ರೈಲ್ವೇ ನಿಲ್ದಾಣದ ಹೊರಗೆ ಕುಳಿತು ಪಿಯಾನೋ ನುಡಿಸಿದ ಯುವತಿ: ವಿಡಿಯೋ ವೈರಲ್​

ಯುದ್ಧದ ಆತಂಕ, ಭಯ, ನೋವಿನ ನಡುವೆ ಯುವತಿಯೊಬ್ಬಳು ರೈಲ್ವೆ ನಿಲ್ದಾಣದ ಹೊರಗೆ ಕುಳಿತು ಜಗತ್ತು ಎಷ್ಟು ಸುಂದರ ಎಂದು ಪಿಯಾನೋ ನುಡಿಸಿದ ವಿಡಿಯೋ ಸಖತ್​ ವೈರಲ್​ ಆಗಿದೆ.

ಯುದ್ಧನಾಡು ಉಕ್ರೇನ್​ನ ಎಲ್ವಿವ್ ರೈಲ್ವೇ ನಿಲ್ದಾಣದ ಹೊರಗೆ ಕುಳಿತು ಪಿಯಾನೋ ನುಡಿಸಿದ ಯುವತಿ: ವಿಡಿಯೋ ವೈರಲ್​
ಪಿಯಾನೋ ನುಡಿಸುತ್ತಿರುವ ಯುವತಿ
Follow us
TV9 Web
| Updated By: Pavitra Bhat Jigalemane

Updated on:Mar 06, 2022 | 4:00 PM

ಉಕ್ರೇನ್​ ಮೇಲಿನ ರಷ್ಯಾ ಯುದ್ಧ (Ukraine Russia War)  11 ನೇ ದಿನಕ್ಕೆ ಕಾಲಿರಿಸಿದೆ. ಐದುವರೆ ಗಂಟೆಗಳ ಕದನವಿರಾಮದ ಬಳಿಕ ಮತ್ತೆ ರಷ್ಯಾ ಯುದ್ಧ ಮುಂದುವರೆಸಿದೆ. ಜನಜೀವನ ಅಕ್ಷರಶಃ ನಲುಗಿಹೋಗಿದೆ.  ಎಲ್ಲಿ ಯಾವ ಹೊತ್ತಿಗೆ ಬಾಂಬ್​ ಸ್ಫೋಟದ ಸದ್ದು ಕೇಳಿಸಲಿದೆ ಎನ್ನುವ ಅರಿವಿಲ್ಲದೆ ಕ್ಷಣಕ್ಷಣಕ್ಕೂ ಭಯದಲ್ಲೇ  ಬದುಕುತ್ತಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ನೆಟ್ಟಿಗರ ಮನ ಗೆದ್ದಿದೆ. ಯುದ್ಧನಾಡು ಉಕ್ರೇನ್​ನ ಎಲ್ವಲ್ ​(Lviv Train Station) ರೈಲು ನಿಲ್ದಾಣದಲ್ಲಿ ಕುಳಿತು ಯುವತಿಯೊಬ್ಬಳು ಪಿಯಾನೋ (Piano) ನುಡಿಸಿದ್ದಾಳೆ. ಯುದ್ಧದ ಆತಂಕ, ಭಯ, ನೋವಿನ ನಡುವೆ ಯುವತಿ ‘ಜಗತ್ತು ಎಷ್ಟು ಸುಂದರ’ ಎಂದು ಪಿಯಾನೋ ನುಡಿಸಿದ್ದು, ಅದರ ವಿಡಿಯೋ ಸಖತ್​ ವೈರಲ್​ ಆಗಿದೆ.

ಜನನಿಬಿಡ ಪ್ರದೇಶದಲ್ಲಿ ಭಾರೀ ಗಾತ್ರದ ಪಿಯಾನೋ ಇಟ್ಟುಕೊಂಡು ಲೋಯಸ್ ಆರ್ಮ್ಸ್ಟ್ರಾಂಗ್ ಅವರ ಹಾಡು What A Wonderful World ಹಾಡನ್ನು ನುಡಿಸಿದ್ದಾಳೆ.  ಆಕೆಯ ಸುತ್ತಲೂ ಬ್ಯಾಗ್​ಗಳನ್ನು ಹಿಡಿದುಕೊಂಡು ವಿವರಿಸಲಾಗದ ಭಯದಲ್ಲಿ ರೈಲಿಗಾಗಿ ಕಾಯುತ್ತಿರುವ ಜನರು ಓಡಾಡುತ್ತಿರುವ ದೃಶ್ಯವನ್ನು ಕಾಣಬಹುದು. ಅದೆಲ್ಲವನ್ನು ಕಡೆಗಣಿಸಿ ತನ್ನದೇ ಪ್ರಪಂಚದಲ್ಲಿ ಭಯದ ನಡುವೆಯೂ ಪಿಯಾನೋ ನುಡಿಸಿದ್ದಾಳೆ.

ವಿಡಿಯೋ ನೋಡಿದ ನೆಟ್ಟಿಗರು ಕಣ್ಣಾಲಿಗಳಲ್ಲಿ ನೀರು ತುಂಬುತ್ತಿದೆ ಎಂದು ಕಾಮೆಂಟ್​ ಮಾಡಿದ್ದಾರೆ. ವಿಡಿಯೋವನ್ನು ಆ್ಯಂಡ್ರೂ ಮಾರ್ಶಲ್​ ಎನ್ನುವವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು 85 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಯುದ್ಧದ ನಡುವೆಯೂ ಜಗತ್ತು ಎಷ್ಟು ಸುಂದರ ಎನ್ನುವುದನ್ನು ಕಂಡು ಬಳಕೆದಾರರು ಅಚ್ಚರಿಗೊಂಡಿದ್ದಾರೆ.

ಇದನ್ನೂ ಓದಿ:

Viral Video: ಹೆಪ್ಪುಗಟ್ಟಿದ ನದಿಯಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆ: ಅಗ್ನಿಶಾಮಕ ಸಿಬ್ಬಂದಿ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ

Published On - 3:56 pm, Sun, 6 March 22

ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು