AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ
ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ!
TV9 Web
| Edited By: |

Updated on: Jun 17, 2021 | 3:19 PM

Share

ಎಂಥಹುದೇ ಕಠಿಣ ಗುರಿಯಾಗಿರಲಿ ಸತತ ಪ್ರಯತ್ನ ಮತ್ತು ಅಭ್ಯಾಸ ಹೊಂದಿದ್ದಾಗ ಸಾಧನೆಯ ಮೆಟ್ಟಿಲೇರಬಹುದು. ಅಂತಹುದೇ ಓರ್ವ ಮಹಿಳೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಓಡಿಸುವ ದೃಶ್ಯ ಜನರನ್ನು ದಿಗ್ಭ್ರಮೆಗೊಳಿಸುವಂತೆ ಮಾಡಿದೆ. ಮಹಿಳೆಯ ಪರಿಶ್ರಮಕ್ಕೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಡಾಕ್ಟರ್​ ಅಜಯಿತಾ ಎಂಬ ಟ್ವಿಟರ್​ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮಹಿಳೆಯ ಅದ್ಭುತ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ. ಮಹಿಳೆಯೋರ್ವಳು ನೀರಿನ ಮೇಲೆ ಬೈಕ್​ ಸವಾರಿ ಮಾಡುತ್ತಿರುವುದು ಕಂಡು ಬರುತ್ತದೆ. ಕೇವಲ ಬೈಕ್​ ಓಡಿಸುವುದೊಂದೇ ಅಲ್ಲ! ಪಾತ್ರೆ ತುಂಬಿದ ಬುಟ್ಟಿಯನ್ನು ತಲೆಯ ಮೇಲೆ ಇಟ್ಟುಕೊಂಡು ತನ್ನ ಎರಡೂ ಕೈಗಳಲ್ಲಿ ಬಕೆಟ್​ ಸಿಕ್ಕಿಸಿಕೊಂಡು ಬೈಕ್​ ಹ್ಯಾಂಡಲ್​ ಹಿಡಿದು ನೀರಿನ ಮೇಲೆ ಬೈಕ್​ ಓಡಿಸಿದ್ದಾಳೆ.

ಅದ್ಭುತ ಪ್ರತಿಭೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 41 ಸೆಕೆಂಡುಗಳ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಂತೆಯೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಮಹಿಳೆ ಮನಸ್ಸು ಮಾಡಿದರೆ ಏನನ್ನೂ ಬೇಕಾದರೂ ಸಾಧಿಸುತ್ತಾಳೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದು ಇನ್ನೋರ್ವರು ಪ್ರತಿಕ್ರಿಯೆ ನೀಡಿದ್ದಾರೆ. ಅವಳು ‘ವಂಡರ್​ ವುಮೆನ್​’ ಎಂಬ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ಭರ್ಜರಿ ಭೋಜನ ಸವಿಯುತ್ತಿರುವ ಯುವತಿ! ಕ್ಯಾಮರಾ ಬಂದ ತಕ್ಷಣ ರಿಯಾಕ್ಷನ್ ಹೇಗಿದೆ ನೋಡಿ

Viral Video : ಅಜ್ಜಿ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆದ್ರು, ಮೊಮ್ಮಕ್ಕಳು ಹೆಜ್ಜೆ ಹಾಕಿದ್ರು

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ