AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಅತ್ಯಾಚಾರವೆಸಗಲು ಬಂದ ಮಾಲೀಕನ ಮರ್ಮಾಂಗವನ್ನು ಕತ್ತರಿಸಿದ ಮಹಿಳೆ; ಮರುಜೋಡಣೆಗಾಗಿ ಆಸ್ಪತ್ರೆಗೆ ಓಡಿದ ಮಾಲೀಕ

ಘಟನೆಯ ನಂತರ ಹಲ್ಲೆಗೊಳಗಾದ ಬಾರ್​ ಮಾಲೀಕ ತುಂಡರಿಸಲ್ಪಟ್ಟ ಮರ್ಮಾಂಗದೊಂದಿಗೆ ಆಸ್ಪತ್ರೆಗೆ ಧಾವಿಸಿದ್ದು, ಅದನ್ನು ಮರುಜೋಡಿಸಲು ವೈದ್ಯರು ಪ್ರಯತ್ನಿಸಿದ್ದಾರೆ. ಆದರೆ, ಶಸ್ತ್ರಚಿಕಿತ್ಸೆಯ ಫಲಿತಾಂಶದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Shocking News: ಅತ್ಯಾಚಾರವೆಸಗಲು ಬಂದ ಮಾಲೀಕನ ಮರ್ಮಾಂಗವನ್ನು ಕತ್ತರಿಸಿದ ಮಹಿಳೆ; ಮರುಜೋಡಣೆಗಾಗಿ ಆಸ್ಪತ್ರೆಗೆ ಓಡಿದ ಮಾಲೀಕ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jun 07, 2021 | 4:44 PM

Share

ಕೆಲವೊಂದು ಬಾರಿ ಉದ್ದೇಶಪೂರ್ವಕವಾಗಿ ತಪ್ಪು ಮಾಡಲು ಹೋದವರು ಅದನ್ನು ಕಾರ್ಯಗತಗೊಳಿಸುವ ಮೊದಲೇ ಶಿಕ್ಷೆ ಅನುಭವಿಸಿ ಪರಿಸ್ಥಿತಿಯೇ ಅದಲುಬದಲಾಗಿ ಬಿಡುತ್ತದೆ. ಅಲ್ಲಿ ಸಂತ್ರಸ್ತರಾಗಬೇಕಾಗಿದ್ದವರು ತಪ್ಪಿತಸ್ಥರೂ, ತಪ್ಪಿತಸ್ಥರಾಗಬೇಕಾಗಿದ್ದವರು ಸಂತ್ರಸ್ಥರೂ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿ ಬಿಡುತ್ತದೆ. ಸ್ಪೇನ್​ನಲ್ಲಿ ಇಂಥದ್ದೇ ಒಂದು ಘಟನೆ ನಡೆದಿದ್ದು ವ್ಯಕ್ತಿಯ ಮರ್ಮಾಂಗವನ್ನು ಕತ್ತರಿಸಿದ್ದಕ್ಕಾಗಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಮಹಿಳೆ ಹೇಳುವ ಪ್ರಕಾರ ಆ ವ್ಯಕ್ತಿ ಅತ್ಯಾಚಾರಕ್ಕಾಗಿ ಪ್ರಯತ್ನಿಸಿದ ಸಂದರ್ಭದಲ್ಲಿ ಅನಿವಾರ್ಯವಾಗಿ ಈಕೆ ಚಾಕುವಿನಿಂದ ದಾಳಿ ಮಾಡಿದ್ದು, ಅದು ಆತ್ಮ ರಕ್ಷಣೆಯ ಪ್ರಯತ್ನ ಎನ್ನಲಾಗಿದೆ.

ಅಲ್ಲಿನ ಮಾಧ್ಯಮಗಳ ವರದಿ ಪ್ರಕಾರ ಬಾರ್​ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆ 30 ವರ್ಷದ ಆಸುಪಾಸಿನವರಾಗಿದ್ದು, ಬಾಂಗ್ಲಾದೇಶದ ಮೂಲದವರು ಎಂದು ತಿಳಿದುಬಂದಿದೆ. ಬಾರ್​ ಮಾಲೀಕ ಬಹಳ ಸಮಯದಿಂದ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ದೈಹಿಕ ಸಂಪರ್ಕಕ್ಕಾಗಿ ಒತ್ತಾಯಿಸುತ್ತಿದ್ದ ಎಂದು ಹೇಳಲಾಗಿದೆ. ಅಲ್ಲದೇ ಆಕೆ ಸ್ಪಷ್ಟವಾಗಿ ನಿರಾಕರಿಸಿದ ನಂತರವೂ ಪದೇ ಪದೇ ದೌರ್ಜನ್ಯ ನಡೆಸುತ್ತಿದ್ದರಿಂದ ಅನಿವಾರ್ಯವಾಗಿ ಮಹಿಳೆ ಹಲ್ಲೆ ನಡೆಸುವಂತಾಗಿದೆ. ಒಂದು ವಾರದ ಕೆಳಗೆ ನಡೆದ ಈ ಘಟನೆಯಲ್ಲಿ ಬಾರ್​ ಮಾಲೀಕ ಅತ್ಯಾಚಾರ ಯತ್ನ ನಡೆಸಿದಾಗ ಆಕೆ ಚಾಕುವಿನಿಂದ ಮರ್ಮಾಂಗವನ್ನು ಕತ್ತರಿಸಿರುವುದಾಗಿ ತಿಳಿಸಲಾಗಿದೆ.

ಘಟನೆಯ ನಂತರ ಹಲ್ಲೆಗೊಳಗಾದ ಬಾರ್​ ಮಾಲೀಕ ತುಂಡರಿಸಲ್ಪಟ್ಟ ಮರ್ಮಾಂಗದೊಂದಿಗೆ ಆಸ್ಪತ್ರೆಗೆ ಧಾವಿಸಿದ್ದು, ಅದನ್ನು ಮರುಜೋಡಿಸಲು ವೈದ್ಯರು ಪ್ರಯತ್ನಿಸಿದ್ದಾರೆ. ಆದರೆ, ಶಸ್ತ್ರಚಿಕಿತ್ಸೆಯ ಫಲಿತಾಂಶದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ ಆ ವ್ಯಕ್ತಿಯನ್ನೂ ಬಾಂಗ್ಲಾದೇಶ ಅಥವಾ ಪಾಕಿಸ್ತಾನ ಮೂಲದವನೆಂದು ಹೇಳಲಾಗುತ್ತಿದ್ದು, ಆಸ್ಪತ್ರೆಯಿಂದ ಸಂಪೂರ್ಣ ಚೇತರಿಸಿಕೊಂಡು ಹೊರಬಂದ ನಂತರ ತನಿಖೆಗೆ ಒಳಪಡಿಸುವ ಸಾಧ್ಯತೆ ಇದೆ.

ಘಟನೆಯ ಬಗ್ಗೆ ಮಹಿಳೆ ತಾನಾಗಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಲೀಕ ಅನೇಕ ದಿನಗಳಿಂದ ದೈಹಿಕ ಸಂಪರ್ಕಕ್ಕಾಗಿ ಪೀಡಿಸುತ್ತಿದ್ದ. ಜತೆಗೆ, ದೌರ್ಜನ್ಯವನ್ನೂ ಎಸಗಿದ್ದಾನೆ. ಹೀಗಾಗಿ ಎಲ್ಲಾ ರೀತಿಯಿಂದ ತಪ್ಪಿಸಿಕೊಳ್ಳಲೆತ್ನಿಸಿದ ಮೇಲೂ ಆತ ಅತ್ಯಾಚಾರಕ್ಕೆ ಪ್ರಯತ್ನಿಸಿದಾಗ ಚಾಕುವಿನಿಂದ ಇರಿಯುವ ನಿರ್ಧಾರ ತೆಗೆದುಕೊಳ್ಳಬೇಕಾಯಿತು. ಇದು ನನ್ನ ಆತ್ಮ ರಕ್ಷಣೆಗೆ ಅನಿವಾರ್ಯವಾಗಿತ್ತು ಎಂದು ತಿಳಿಸಿದ್ದಾರೆ. ಸದ್ಯ ಪೊಲೀಸರು ಮಹಿಳೆಯ ಮೇಲೆ ನಿಗಾ ವಹಿಸಿದ್ದು, ವ್ಯಕ್ತಿ ಚೇತರಿಸಿಕೊಂಡ ನಂತರ ತನಿಖೆಯನ್ನು ತೀವ್ರಗೊಳಿಸಲು ಕಾಯುತ್ತಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ 

ಬಾಲಕನ ಮರ್ಮಾಂಗ ಕತ್ತರಿಸಿ, ಚಿತ್ರಹಿಂಸೆ ನೀಡಿ ಕೊಲೆ: ಭೀಮಾ ನದಿಯ ದಡದಲ್ಲಿ ವಿದ್ಯಾರ್ಥಿ ಶವ ಪತ್ತೆ

Published On - 2:36 pm, Mon, 7 June 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು