Sign In

By signing in or creating an account, you agree with Associated Broadcasting Company's Terms & Conditions and Privacy Policy.

Om shaped Temple: ವಿಶ್ವದ ಮೊದಲ ‘ಓಂ’ ಆಕಾರದ ದೇವಾಲಯ ಎಲ್ಲಿದೆ ಗೊತ್ತಾ?

ವಿಶ್ವದ ಮೊದಲ 'ಓಂ' ಆಕಾರದ ದೇವಾಲಯ ಇದೀಗಾ ಭಾರೀ ಸುದ್ದಿಯಲ್ಲಿದೆ. ದೇವಾಲಯದ ನಿರ್ಮಾಣದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ವರ್ಷ 2024 ಮುಗಿಯುವುದರೊಳಗೆ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.

Om shaped Temple: ವಿಶ್ವದ ಮೊದಲ 'ಓಂ' ಆಕಾರದ ದೇವಾಲಯ ಎಲ್ಲಿದೆ ಗೊತ್ತಾ?
World's first Om Shaped Shiva Temple
Follow us
ಅಕ್ಷತಾ ವರ್ಕಾಡಿ
|

Updated on: May 23, 2024 | 6:15 PM

ರಾಜಸ್ಥಾನದ ಪಾಲಿ ಜಿಲ್ಲೆಯ ಜಡಾನ್ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ‘ಓಂ’ ಆಕಾರದ ದೇವಾಲಯ(Om shaped Temple) ವು ಇದೀಗಾ ವಿಶ್ವದೆಲ್ಲಡೆ ಭಾರೀ ಸುದ್ದಿಯಲ್ಲಿದೆ. ಪ್ರಪಂಚದಲ್ಲೇ ಓಂ ಆಕಾರದಲ್ಲಿ ನಿರ್ಮಿಸಲಾದ ಮೊದಲ ದೇವಾಲಯ ಇದಾಗಿದೆ. 1995ರಲ್ಲಿ ಈ ಮಹಾ ದೇವಾಲಯದ ಶಂಕುಸ್ಥಾಪನೆ ನಡೆದಿದ್ದು, ಈ ದೇವಾಲಯದ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ವರ್ಷ 2024 ಮುಗಿಯುವುದರೊಳಗೆ ದೇವಾಲಯದ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.

250 ಎಕರೆ ಜಾಗದಲ್ಲಿ ಓಂ ಆಕಾರದ ಈ ಶಿವ ದೇವಾಲಯ ನಿರ್ಮಾಣವಾಗುತ್ತಿದೆ. ಈ ದೇವಾಲಯದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಫೆಬ್ರವರಿ 10-19 ರ ನಡುವೆ ನಡೆಯಲಿದೆ ಎಂದು ವರದಿಯಾಗಿದೆ. ಈ ಶಿವ ದೇವಾಲಯದಲ್ಲಿ 1008 ವಿವಿಧ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದ್ದು,ಈ ಓಂ ಆಕಾರದ ದೇವಾಲಯದ ಆವರಣದಲ್ಲಿ 108 ಕೊಠಡಿಗಳಿವೆ. ಇದರ ಗೋಪುರವು 135 ಅಡಿ ಎತ್ತರವಾಗಿದೆ ಮತ್ತು ದೇವಾಲಯದ ಮಧ್ಯಭಾಗದಲ್ಲಿ ಗುರು ಮಹಾರಾಜ್ ಸ್ವಾಮಿ ಮಾಧವಾನಂದರ ಸಮಾಧಿ ಇದೆ. ಮೇಲ್ಭಾಗದಲ್ಲಿ ಶಿವಲಿಂಗವನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: ಭಾರತದ ಈ ದೇವಾಲಯಗಳಿಗೆ ಪುರುಷರಿಗೆ ಪ್ರವೇಶವಿಲ್ಲ

ಈ ದೇವಾಲಯದ ಶಂಕುಸ್ಥಾಪನೆ 1995 ರಲ್ಲಿ ನಡೆದಿದ್ದು, ಕಳೆದ 25 ವರ್ಷಗಳಿಂದ ಈ ದೇವಾಲಯದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಓಂ ಆಶ್ರಮವನ್ನು ಉತ್ತರ ಭಾರತದ ವಾಸ್ತುಶಿಲ್ಪದ ಆಧಾರದ ಮೇಲೆ ಜದನ್ ಪಾಲಿ ನಾಗರ ಶೈಲಿಯಲ್ಲಿ ನಿರ್ಮಿಸಲಾಗುತ್ತಿದೆ. ಓಂ ಆಕಾರವು ಸುಮಾರು ಅರ್ಧ ಕಿಲೋಮೀಟರ್ ತ್ರಿಜ್ಯದಲ್ಲಿ ಹರಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್