AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 4ವರ್ಷ ಪ್ರೀತಿಸಿ ಹಸೆಮಣೆ ಏರಿದ ವಿಶ್ವದ ಅತ್ಯಂತ ಕುಳ್ಳ ಬಾಡಿಬಿಲ್ಡರ್ ಪ್ರತೀಕ್ ವಿಠ್ಠಲ್

ಗಿನ್ನೆಸ್ ವಿಶ್ವ ದಾಖಲೆ ಪಡೆದುಕೊಂಡಿರುವ ವಿಶ್ವದ ಅತ್ಯಂತ ಕುಳ್ಳ ದೇಹದಾರ್ಢ್ಯ ಪಟು ಮಹಾರಾಷ್ಟ್ರದ ಪ್ರತೀಕ್ ವಿಠ್ಠಲ್ ಮೋಹಿತೆ(28), ವಿವಾಹವಾಗಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

Viral News: 4ವರ್ಷ ಪ್ರೀತಿಸಿ ಹಸೆಮಣೆ ಏರಿದ ವಿಶ್ವದ ಅತ್ಯಂತ ಕುಳ್ಳ ಬಾಡಿಬಿಲ್ಡರ್ ಪ್ರತೀಕ್ ವಿಠ್ಠಲ್
ಪ್ರತೀಕ್ ವಿಠ್ಠಲ್ ಜೊತೆಗೆ ಪತ್ನಿ ಜಯಾ ಮತ್ತು ಕುಟುಂಬImage Credit source: Instagram
ಅಕ್ಷತಾ ವರ್ಕಾಡಿ
|

Updated on:Mar 19, 2023 | 10:57 AM

Share

ಗಿನ್ನೆಸ್ ವಿಶ್ವ ದಾಖಲೆ ಪಡೆದುಕೊಂಡಿರುವ ವಿಶ್ವದ ಅತ್ಯಂತ ಕುಳ್ಳ ದೇಹದಾರ್ಢ್ಯ ಪಟು ಮಹಾರಾಷ್ಟ್ರದ ಪ್ರತೀಕ್ ವಿಠ್ಠಲ್ ಮೋಹಿತೆ(28), ವಿವಾಹವಾಗಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. 2021ರಲ್ಲಿ ವಿಶ್ವದ ಅತ್ಯಂತ ಕುಳ್ಳ(3 ಅಡಿ 4 ಇಂಚು ಎತ್ತರ) ಬಾಡಿಬಿಲ್ಡರ್​​​​ ಗಿನ್ನೆಸ್ ವಿಶ್ವ ದಾಖಲೆಯನ್ನು ಪಡೆದುಕೊಂಡಿದ್ದರು. ಇದೀಗಾ 4 ಅಡಿ 2 ಇಂಚು ಎತ್ತರದ ಜಯಾರವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ.

ಡೈಲಿ ಮೇಲ್ ವರದಿಯ ಪ್ರಕಾರ , ಪ್ರತೀಕ್ ನಾಲ್ಕು ವರ್ಷಗಳ ಹಿಂದೆ ತನ್ನ ಸಂಗಾತಿ ಜಯಾ ಅವರನ್ನು ಭೇಟಿಯಾಗಿದ್ದರು. ಜಯಾನನ್ನು ನೋಡಿದ ಕ್ಷಣದಲ್ಲೇ ಇಷ್ಟಪಟ್ಟು, ನಂತರ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಇನ್‌ಸ್ಟಾಗ್ರಾಮ್​​ನಲ್ಲಿ 2 ಲಕ್ಷಕ್ಕೂ ಹೆಚ್ಚು ಫಾಲೋವರ್ರ್​ಗಳನ್ನು ಹೊಂದಿರುವ ಬಾಡಿಬಿಲ್ಡರ್ ಪ್ರತೀಕ್, ಇದೀಗಾ ತನ್ನ ಮದುವೆಯ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

ಇದನ್ನೂ ಓದಿ: ರಸ್ತೆಯಲ್ಲಿ ಕತ್ತು ಸೀಳಿ, ಪಿಸ್ತೂಲಿನಿಂದ ಫಯರ್​​ ಮಾಡಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್

ಬಾಡಿಬಿಲ್ಡರ್ ಹಂಚಿಕೊಂಡ ವೀಡಿಯೊದಲ್ಲಿ, ವರನ ಮೆರವಣಿಗೆಯಲ್ಲಿ ಪ್ರತೀಕ್ ಮಧುಮಗನ ಬಟ್ಟೆಯನ್ನು ಧರಿಸಿ, ಡ್ಯಾನ್ಸ್​​ ಮಾಡುತ್ತಿರುವುದನ್ನು ಕಾಣಬಹುದು. ಇನ್ನೊಂದು ಫೋಟೋದಲ್ಲಿ ಪತ್ನಿ ಜಯಾ ಜೊತೆಗೆ ಕುಟುಂಬದವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಪ್ರತೀಕ್ 2012 ರಲ್ಲಿ ತಮ್ಮ ದೇಹದಾರ್ಢ್ಯ ವೃತ್ತಿಜೀವನವನ್ನು ಪ್ರಾರಂಭಿಸಿದರು. 2016 ರಲ್ಲಿ, ಮೊದಲ ಬಾರೀ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಸ್ಪರ್ಧಿಸಿದ್ದರು. ತನ್ನ ಕುಟುಂಬ ಹಾಗೂ ಸ್ನೇಹಿತರು ತನಗೆ ಸಾಕಷ್ಟು ಬೆಂಬಲವನ್ನು ನೀಡಿದ್ದಾರೆ ಎಂದು ಪ್ರತೀಕ್​​ ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:47 am, Sun, 19 March 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ