AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದು ಪವಾಡ ಸದೃಶ್ಯ, ಜೈನ ಮುನಿಗಳ ಮಂತ್ರ ಪಠಣೆಗೆ ಎದ್ದು ಕುಳಿತ ಗಾಯಗೊಂಡ ಬಸವ

ಈ ಪ್ರಪಂಚದಲ್ಲಿ  ಹಲವು ವಿಸ್ಮಯಗಳು ನಡಿತಾನೆ ಇರುತ್ತವೆ. ಕೆಲವು ವಿಸ್ಮಯಗಳು ಜನರಲ್ಲಿ ಭಕ್ತಿಯನ್ನು ಹೆಚ್ಚಿಸುತ್ತದೆ. ಅಂತಹದ್ದೇ ಘಟನೆಯೊಂದು ಇದೀಗ ನಡೆದಿದ್ದು, ಜೈನ ಮುನಿಗಳು ಮಂತ್ರ ಪಠಿಸುತ್ತಿದ್ದಂತೆ, ಕಾಲಿಗೆ ಗಾಯವಾಗಿ ನರಳುತ್ತಾ ಬಿದ್ದಿದ್ದ ಹೋರಿಯೊಂದು  ಪವಾಡ ಸದೃಶ್ಯವೆಂಬಂತೆ ಎದ್ದು ಕುಳಿತಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Viral Video: ಇದು ಪವಾಡ ಸದೃಶ್ಯ, ಜೈನ ಮುನಿಗಳ ಮಂತ್ರ ಪಠಣೆಗೆ ಎದ್ದು ಕುಳಿತ ಗಾಯಗೊಂಡ ಬಸವ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Mar 28, 2024 | 5:07 PM

Share

ಮಂತ್ರಗಳಿಗೆ ನಮ್ಮ ಜೀವನವನ್ನು ಬದಲಾಯಿಸುವ ಶಕ್ತಿಯಿದೆ. ಸನಾತನ ಧರ್ಮದಲ್ಲಿ ಮಂತ್ರ ಪಠಣಕ್ಕೆ ವಿಶೇಷ ಮಹತ್ವವಿದ್ದು, ಧಾರ್ಮಿಕ ಗ್ರಂಥಗಳಲ್ಲಿ ಮಂತ್ರಗಳನ್ನು ಪಠಿಸುವ ಮೂಲಕ ದೇವರನ್ನು ಸಂತುಷ್ಟಗೊಳಿಸಬಹುದು ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ದೇವರನ್ನು ಒಲಿಸಲು, ಸಂತುಷ್ಟಗೊಳಿಸಲು  ಅನಾದಿ ಕಾಲದಿಂದಲೂ ಋಷಿ ಮುನಿಗಳು, ಸಾಧು ಸಂತರು, ತಪಸ್ವಿಗಳು ಮಂತ್ರಗಳನ್ನು ಪಠಿಸುತ್ತಾ ಧ್ಯಾನದಲ್ಲಿ ಮಗ್ನರಾಗುತ್ತಿದ್ದರು. ದೇವರನ್ನು ಸಂತುಷ್ಟಗೊಳಿಸುವುದು ಮಾತ್ರವಲ್ಲದೆ  ಮಂತ್ರಗಳಿಗೆ  ದೇಹದಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುವ ಶಕ್ತಿಯೂ ಇದೆ. ಇದೀಗ ಇಲ್ಲೊಂದು ಅಚ್ಚರಿಯ ಘಟನೆ  ನಡೆದಿದ್ದು, ಜೈನ ಮುನಿಗಳು ಮಂತ್ರ ಪಠಿಸುತ್ತಿದ್ದಂತೆ ಕಾಲಿಗೆ ಗಾಯವಾಗಿ ನರಳುತ್ತಾ ಬಿದ್ದಿದ್ದ ಹೋರಿ  ಪವಾಡ ಸದೃಶ್ಯವೆಂಬಂತೆ ಎದ್ದು ಕುಳಿತಿದೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ  ಕಾಲಿಗೆ ತೀವ್ರ ಗಾಯವಾಗಿ ಎದ್ದು ಕೂರಲು ಆಗದೆ ಹೋರಿಯೊಂದು ನೆಲದಲ್ಲಿ ಬಿದ್ದು ಪರದಾಡುತ್ತಿತ್ತು.  ಅಲ್ಲಿಗೆ ಬಂದ ಜೈನ ಮುನಿಗಳು ಮಂತ್ರ ಪಠಿಸುತ್ತಿದ್ದಂತೆ ಆ ಹೋರಿ ಪವಾಡ ಸದೃಶ್ಯವೆಂಬಂತೆ ಎದ್ದು ಕುಳಿತಿದೆ.

ಈ ಕುರಿತ ವಿಡಿಯೋವನ್ನು @ನಮ್ಮ ಮೋದಿ ಎಂಬ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ತಪಸ್ವಿ ಜೈನ ಮುನಿಗಳು ಮಂತ್ರ ಪಠಣ ಮಾಡುತ್ತಿದ್ದಂತೆ ಕಾಲಿಗೆ ಗಾಯವಾಗಿದ್ದ ಗೋ ಮಾತೆ ಹೇಗೆ ಏಳುತ್ತದೆ ನೋಡೊ; ಇದಲ್ಲವೆ ಸನಾತನ ಧರ್ಮದ ಶಕ್ತಿ. ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ಕಾಲಿಗೆ ಗಾಯವಾಗಿ ಎದ್ದು ಕೂರಲು ಆಗದೆ, ಹೋರಿಯೊಂದು ಅಲ್ಲೇ ನೆಲದ ಮೇಲೆ ಬಿದ್ದು ಒದ್ದಾಡುತ್ತಿರುವ ದೃಶ್ಯವನ್ನು ಕಾಣಬಹುದು.   ಆ ಸಂದರ್ಭದಲ್ಲಿ ಅಲ್ಲಿಗೆ ಬಂದಂತಹ ಜೈನ ಮುನಿಗಳು ಹೋರಿಯ ಎದುರು ಮಂತ್ರ ಪಠಣ ಮಾಡುತ್ತಾರೆ. ಜೈನ ಮುನಿಗಳು ಮಂತ್ರ ಪಠಿಸುತ್ತಿದ್ದಂತೆ ನೆಲದ ಮೇಲೆ  ನರಳಾಡುತ್ತ ಬಿದ್ದಿದ್ದ ಹೋರಿ ಆ ತಕ್ಷಣ ಪವಾಡ ಸದೃಶ್ಯವೆಂಬಂತೆ ಎದ್ದು ಕುಳಿತಿದೆ.

ಇದನ್ನೂ ಓದಿ: ಈ ಫೋಟೋದಲ್ಲಿ ನಿಮಗೆ ಮೊದಲು ಕಾಣಿಸಿದ್ದು ಏನು? ನಿಮ್ಮ ವ್ಯಕ್ತಿತ್ವ ತಿಳಿಯಿರಿ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಮೂರುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದೇ ಅಲ್ಲವೇ ಮಂತ್ರಗಳ ಶಕ್ತಿʼ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇದು ಸನಾತನ ಧರ್ಮದ ಶಕ್ತಿ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಮಂತ್ರಗಳ ಶಕ್ತಿಯನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್