Video: ಪ್ರಧಾನಿ ಮೋದಿ, ರಾಷ್ಟ್ರಪತಿಯೆದುರು ಮೊಣಕಾಲೂರಿ ನಮಸ್ಕರಿಸಿದ 126 ವರ್ಷದ, ಪದ್ಮಶ್ರೀ ಪುರಸ್ಕೃತ ಯೋಗಗುರು

ಶಿವಾನಂದ ಬಾಬಾ ಹುಟ್ಟಿದ್ದು 1896ರ ಆಗಸ್ಟ್​ 8ರಂದು. ಅವಿಭಜಿತ ಭಾರತದ ಸೈಲ್ಹೆಟ್​ ಎಂಬುದು ಹುಟ್ಟೂರು. (ಇದೀಗ ಬಾಂಗ್ಲಾದೇಶದಲ್ಲಿದೆ). ಆರನೇ ವರ್ಷದಲ್ಲಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡವರು. 

Video: ಪ್ರಧಾನಿ ಮೋದಿ, ರಾಷ್ಟ್ರಪತಿಯೆದುರು ಮೊಣಕಾಲೂರಿ ನಮಸ್ಕರಿಸಿದ 126 ವರ್ಷದ, ಪದ್ಮಶ್ರೀ ಪುರಸ್ಕೃತ ಯೋಗಗುರು
ಪ್ರಧಾನಿ ಮೋದಿಯವರಿಗೆ ನಮಸ್ಕರಿಸಿದ ಯೋಗಗುರು
Follow us
| Updated By: ರಶ್ಮಿ ಕಲ್ಲಕಟ್ಟ

Updated on:Mar 22, 2022 | 1:08 PM

ನಿನ್ನೆ ರಾಷ್ಟ್ರಪತಿ ಭವನದಲ್ಲಿ ಅನೇಕ ಮಹಾನ್ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind)​ ಅವರು ಪ್ರದಾನ ಮಾಡಿದರು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್​ ಶಾ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿ ಇನ್ನೂ ಅನೇಕ ಗಣ್ಯರು ಭಾಗವಹಿಸಿದ್ದರು. ಈ ಸಮಾರಂಭದಲ್ಲಿ ತುಂಬ ಗಮನಸೆಳೆದವರು ವಾರಾಣಸಿಯ ಯೋಗ ಗುರು ಸ್ವಾಮಿ ಶಿವಾನಂದ ಬಾಬಾ. 126 ವರ್ಷದ ಇವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಿನ್ನೆ ಪ್ರಶಸ್ತಿ ಸ್ವೀಕಾರ ಮಾಡುವ ವೇಳೆ ಇವರು ನಡೆದುಕೊಂಡ ರೀತಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಶಸ್ತಿ ಸ್ವೀಕಾರ ಮಾಡಲು ಬರುವ ದಾರಿಯಲ್ಲಿ ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಎದುರು ಮೊಣಕಾಲೂರಿ, ನೆಲಕ್ಕೆ ಹಣೆ ಹಚ್ಚಿ ನಮಸ್ಕರ ಮಾಡಿದ್ದಾರೆ. ತಮ್ಮ ವಯಸ್ಸನ್ನು ಮರೆತು ಪ್ರಧಾನಿ ಮೋದಿಯವರಿಗೆ ನಮಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ತಮ್ಮ ಕುರ್ಚಿಯಿಂದ ಲಗುಬಗೆಯಿಂದ ಎದ್ದು, ಅವರೆದುರು ಬಾಗಿ ನಿಂತು ತಮ್ಮ ಕೈಯಿಂದ ನೆಲವನ್ನು ಸ್ಪರ್ಶಿಸಿ ನಮಿಸಿದ್ದಾರೆ. ಈ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ.  ಇವರಿಬ್ಬರ ಸಂಸ್ಕಾರ ಮೇರು ಮಟ್ಟದ್ದು ಎಂಬ ಮಾತುಗಳು ಕೇಳಿಬರುತ್ತಿವೆ.

ಸ್ವಾಮಿ ಶಿವಾನಂದ ಬಾಬಾ ಒಂದು ಧೋತಿ ಉಟ್ಟು, ಬಿಳಿಬಣ್ಣದ ಅಂಗಿ ತೊಟ್ಟು, ಬರಿಗಾಲಿನಲ್ಲಿಯೇ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅವರು ಪ್ರಧಾನಿ ನರೇಂದ್ರ ಮೋದಿಗೆ ನಮಸ್ಕರಿಸಿಯಾದ ಬಳಿಕ ಎದ್ದು ಪ್ರಶಸ್ತಿ ಸ್ವೀಕಾರ ಮಾಡುವ ವೇದಿಕೆಗೆ ಮತ್ತೊಮ್ಮೆ ಇದೇ ರೀತಿ ನಮಸ್ಕಾರ ಮಾಡಿದ್ದಾರೆ. ಹಾಗೇ, ರಾಷ್ಟ್ರಪತಿಯವರಿಗೂ ಅದೇ ರೀತಿ ನಮಿಸಿದ್ದಾರೆ. ಆಗ ರಾಷ್ಟ್ರಪತಿ ರಾಮನಾಥ ಕೋವಿಂದ್​ ತಮ್ಮ ಆಸನದಿಂದ ಎದ್ದು, ಯೋಗಗುರುವನ್ನೂ ಎಬ್ಬಿಸಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ನಂತರ ಶಿವಾನಂದ ಬಾಬಾ ಅವರು ತುಂಬ ಮುಗ್ಧತೆಯಿಂದ ಫೋಟೋಕ್ಕೆ ಪೋಸ್​ ಕೊಟ್ಟಿದ್ದನ್ನು ವಿಡಿಯೋದಲ್ಲಿ ನೋಡಬಹುದು. ಹಾಗೇ, ಅಷ್ಟು ವಯಸ್ಸಾದರೂ ಅವರು ತುಂಬ ವೇಗವಾಗಿ ನಡೆಯುತ್ತಾರೆ. ಚುರುಕಾಗಿ, ಚಟುವಟಿಕೆಯಿಂದ ಇದ್ದಾರೆ.

ಶಿವಾನಂದ ಬಾಬಾ ಹುಟ್ಟಿದ್ದು 1896ರ ಆಗಸ್ಟ್​ 8ರಂದು. ಅವಿಭಜಿತ ಭಾರತದ ಸೈಲ್ಹೆಟ್​ ಎಂಬುದು ಹುಟ್ಟೂರು. (ಇದೀಗ ಬಾಂಗ್ಲಾದೇಶದಲ್ಲಿದೆ). ಆರನೇ ವರ್ಷದಲ್ಲಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡವರು.  ಸದ್ಯ ಅವರು ವಾರಾಣಸಿಯ ದುರ್ಗಾಕುಂಡ್​ ಎಂಬಲ್ಲಿ, ಮನೆಯೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದು, ಪ್ರತಿದಿನ ಎರಡು ಬಾರಿ ಮೆಟ್ಟಿಲು ಹತ್ತಿ -ಇಳಿಯುತ್ತಾರೆ. ಅವರು ಯಾರದ್ದೂ ಸಹಾಯವಿಲ್ಲದೆ ಮೆಟ್ಟಿಲು ಹತ್ತುತ್ತಾರೆ ಎಂದು ಅವರ ಶಿಷ್ಯಂದಿರು ತಿಳಿಸಿದ್ದಾರೆ.  ಶಿವಾನಂದ ಬಾಬಾರ ತಂದೆ-ತಾಯಿ ಸಾಯಲು ಕಾರಣ ಹಸಿವು. ಇವರೂ ಕೂಡ ಬಾಲ್ಯವನ್ನೆಲ್ಲ ಬಹುತೇಕ ಅರ್ಧಹೊಟ್ಟೆಯಲ್ಲೇ ಕಳೆದಿದ್ದಾರೆ. ಪಾಲಕರನ್ನು ಕಳೆದುಕೊಂಡ ನಂತರ ಕಾಶಿಗೆ ಬಂದು ನೆಲೆಸಿದ ಇವರು, ಗುರು ಓಂಕಾರಾನಂದ ಎಂಬುವರ ಶಿಷ್ಯರಾದರು. 1925ರ ಹೊತ್ತಿಗೆ ಗುರುವಿನ ಆಣತಿ ಮೇರೆಗೆ ಪ್ರಪಂಚ ಪರ್ಯಟನೆ ಮಾಡಲು ತೆರಳಿದ್ದರು. ಸುಮಾರು 34 ವರ್ಷಗಳ ಕಾಲ ಇವರು ದೇಶ-ವಿದೇಶಗಳನ್ನು ಸುತ್ತಿದ್ದಾರೆ.  ಯೋಗದಲ್ಲಿ ಮಹಾನ್ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: Padma Awards 2022: ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್​​ರಿಂದ ಪ್ರಶಸ್ತಿ ಪ್ರದಾನ

Published On - 11:05 am, Tue, 22 March 22

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ