AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆಮರಿಗಳಿಗೆ ಬಾಟಲಿಹಾಲು ಕುಡಿಸಿದ ಯೋಗಿ ಆದಿತ್ಯನಾಥ

Yogi Adityanath : ಗೋರಖ್‌ಪುರದ ಶಹೀದ್ ಅಶ್ಫಾಕ್ ಉಲ್ಲಾ ಖಾನ್ ಝೂಲಾಜಿಕಲ್ ಪಾರ್ಕ್​ಗೆ ಭೇಟಿ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಈ ಚಿರತೆಮರಿಗಳಿಗೆ ಭವಾನಿ ಮತ್ತು ಚಂಡಿ ಎಂದು ನಾಮಕರಣ ಮಾಡಿದ್ದಾರೆ.

ಚಿರತೆಮರಿಗಳಿಗೆ ಬಾಟಲಿಹಾಲು ಕುಡಿಸಿದ ಯೋಗಿ ಆದಿತ್ಯನಾಥ
Yogi Adityanath Feeds Milk to Leopard Cubs at Gorakhpur zoo
TV9 Web
| Updated By: ಶ್ರೀದೇವಿ ಕಳಸದ|

Updated on:Oct 06, 2022 | 5:04 PM

Share

Trending :  ಯೋಗಿ ಆದಿತ್ಯನಾಥ ಬುಧವಾರ ಗೋರಖ್‌ಪುರದ ಶಹೀದ್ ಅಶ್ಫಾಕ್ ಉಲ್ಲಾ ಖಾನ್ ಝೂಲಾಜಿಕಲ್ ಪಾರ್ಕ್ ಮತ್ತು ಪಶುವೈದ್ಯಕೀಯ ಆಸ್ಪತ್ರೆಗೆ ರಾಜಕಾರಣಿ ಮತ್ತು ನಟ ರವಿ ಕಿಶನ್​ ಜೊತೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪಾರ್ಕ್‌ನಲ್ಲಿ ಚಿರತೆಮರಿಗಳಿಗೆ ಬಾಟಲಿಯಿಂದ ಹಾಲು ಕುಡಿಸಿ ಅವುಗಳಿಗೆ ಚಂಡಿ ಮತ್ತು ಭವಾನಿ ಎಂದು ನಾಮಕರಣ ಮಾಡಿದರು. ನಂತರ ಕಾನ್ಪುರದ ಮೃಗಾಲಯದಿಂದ ತಂದಿರುವ ಬಿಳಿಹುಲಿ ಮತ್ತು ಎರಡು ಹಿಮಾಲಯನ್ ಕಪ್ಪು ಕರಡಿಗಳನ್ನು ಮೃಗಾಲಯವಾಸಕ್ಕೆ ಅನುವು ಮಾಡಿಕೊಟ್ಟರು. ಆರಂಭದಲ್ಲಿ ಪಶುವೈದ್ಯರು ಬಾಟಲಿಯಿಂದ ಹಾಲು ಕುಡಿಸಲು ಪ್ರಯತ್ನಿಸಿದಾಗ ಮರಿ ಒಲವು ತೋರಿಸಲಿಲ್ಲ. ಆಗ ಪಶುವೈದ್ಯರು ಸಿಎಂ ಆದಿತ್ಯನಾಥ ಅವರ ಬಳಿಗೆ ಕರೆತಂದರು. ಅವರು ಕಿತ್ತಳೆ ಬಣ್ಣದ ರಬ್ಬರ್ ಕೈಗವಸುಗಳನ್ನು ಧರಿಸಿ ಚಿರತೆ ಮರಿಯನ್ನು ಎತ್ತಿಕೊಂಡು ಬಾಟಲಿಯಿಂದ ಹಾಲು ಕುಡಿಸಲು ಶುರು ಮಾಡಿದರು. ನಂತರ ಎರಡೂ ಚಿರತೆಗಳು ಸರಾಗವಾಗಿ ಹಾಲು ಕುಡಿದವು.

ಯುಪಿ ಸರ್ಕಾರದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ನಂತರ ಮೃಗಾಲಯ ವೀಕ್ಷಣೆ ಸಂದರ್ಭದಲ್ಲಿ ಮೃಗಾಲಯದ ಅಧಿಕಾರಿಗಳು ಯೋಗಿ ಅವರಿಗೆ ಮೃಗಾಲಯದ ವೈಶಿಷ್ಟ್ಯವನ್ನು ವಿವರಿಸಿದರು. ಜೊತೆಗೆ ಪ್ರಾಣಿಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ನಂತರ ಆದಿತ್ಯನಾಥ್ ಸಭೆಯನ್ನು ಉದ್ದೇಶಿಸಿ ವನ್ಯಜೀವಿಗಳ ರಕ್ಷಣೆ ಮತ್ತು ಸಂರಕ್ಷಣೆಯ ಅನಿವಾರ್ಯತೆ ಮತ್ತು ಅಗತ್ಯದ ಬಗ್ಗೆ ಮಾತನಾಡಿ, ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಸೂಕ್ತ ಆರೈಕೆ, ಚಿಕಿತ್ಸೆಗಾಗಿ ಪಶುವೈದ್ಯರ ಪ್ರತ್ಯೇಕ ತಂಡದ ಅವಶ್ಯಕತೆ ಎಂದು ತಿಳಿಸಿದರು.

ಮೃಗಾಲಯದ ಅಧಿಕೃತ ವೆಬ್‌ಸೈಟ್ ಪ್ರಕಾರ ಇದು​ ಪೂರ್ವಾಂಚಲ ಪ್ರದೇಶದಲ್ಲಿ ಮೊದಲ ಮತ್ತು ಉತ್ತರ ಪ್ರದೇಶದಲ್ಲಿ ಮೂರನೇ ಪ್ರಾಣಿಶಾಸ್ತ್ರೀಯ ಉದ್ಯಾನವನವಾಗಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:02 pm, Thu, 6 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ