AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಅನ್ನ ಉಪ್ಪು ಮಾತ್ರ

Mid-day Meals : ‘ಯೋಗಿ ಬಾಬಾ ಸ್ವಲ್ಪ ಇತ್ತ ಗಮನಿಸಿ ಅಯೋಧ್ಯೆಯಲ್ಲಿ ಶಾಲಾಮಕ್ಕಳು ಮಧ್ಯಾಹ್ನದ ಬಿಸಿಯೂಟಕ್ಕೆ ಕೇವಲ ಅನ್ನ ಮತ್ತು ಉಪ್ಪನ್ನು ತಿನ್ನುತ್ತಿದ್ದಾರೆ.’ ಈ ವಿಡಿಯೋ ಅನ್ನು 3 ಮಿಲಿಯನ್​ಗಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ.

ಅಯೋಧ್ಯೆಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಅನ್ನ ಉಪ್ಪು ಮಾತ್ರ
ಮಧ್ಯಾಹ್ನದ ಬಿಸಿಯೂಟ ಅನ್ನ ಮತ್ತು ಉಪ್ಪು ಮಾತ್ರ
ಶ್ರೀದೇವಿ ಕಳಸದ
|

Updated on:Sep 30, 2022 | 10:21 AM

Share

Viral Video : ಉತ್ತರಪ್ರದೇಶದ ಅಯೋಧ್ಯೆಯ ಪ್ರಾಥಮಿಕ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಕೇವಲ ಅನ್ನ ಮತ್ತು ಉಪ್ಪನ್ನು ಮಾತ್ರ ಬಡಿಸಲಾಗಿದೆ. ಶಾಲಾಮಕ್ಕಳು ಅಂಗಳ ಮತ್ತು ಬರೀ ನೆಲದ ಮೇಲೆ ಕುಳಿತುಕೊಂಡು ಊಟ ಮಾಡುತ್ತಿದ್ದಾರೆ. ಪತ್ರಕರ್ತ ಪಿಯೂಷ್​ ರೈ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅನ್ನದ ಜೊತೆ ಸಾರು, ಪಲ್ಯ ಏನೊಂದು ಇಲ್ಲ ಏನಿದು ಅವ್ಯವಸ್ಥೆ ಎಂದು ಶಿಕ್ಷಕರಿಗೆ, ಗ್ರಾಮದ ಮುಖ್ಯಸ್ಥರಿಗೆ ಕೇಳಲಾಗಿ ಈ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಹಾಗಿದ್ದರೆ ಇದಕ್ಕೆ ಯಾರು ಹೊಣೆ?

ಮಕ್ಕಳಿಗೆ ಪೌಷ್ಠಿಕ ಆಹಾರ ಕೊಡಬೇಕು. ಇಲ್ಲಿ ಕೇವಲ ಅನ್ನ ಮತ್ತು ಉಪ್ಪು ತಿನ್ನುತ್ತಿದ್ದಾರೆ. ಇಂಥ ಶಾಲೆಗೆ ಮಕ್ಕಳನ್ನು ಯಾರು ಕಳಿಸುತ್ತಾರೆ? ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಡಿಯೋ ನೋಡಲೇಬೇಕು ಎಂಬ ಧ್ವನಿ ಈ ವಿಡಿಯೋದಲ್ಲಿ ಕೇಳಿಬರುತ್ತದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಗ್ರಾಮದ ಮುಖ್ಯಸ್ಥರಿಗೆ ನೋಟೀಸ್ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕು ಶಾಲೆಯ ಎದುರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಅಯೋಧ್ಯೆಯ ಜಿಲ್ಲಾ ನ್ಯಾಯಾಧೀಶ ನಿತೀಶ್ ಕುಮಾರ್ ಈ ಸಂಬಂಧಿ ತನಿಖೆಗೆ ಆದೇಶ ನೀಡಿದ್ದಾರೆ. ಬಿಎಸ್​ಎ ಅಧಿಕಾರಿಗಳು ಈ ಪರಿಸ್ಥಿತಿಯ ಕುರಿತು ಕೂಲಂಕಷವಾಗಿ ವಿಚಾರಣೆ ನಡೆಸಲಿದ್ದಾರೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಚೀಲಗಳ ಮೇಲೆ ಕುಳಿತುಕೊಳ್ಳಲು ಶಿಕ್ಷಕರು ಒತ್ತಾಯಿಸುತ್ತಾರೆ. ಅಲ್ಲದೆ, ಮೆನು ಪ್ರಕಾರ ಮಕ್ಕಳಿಗೆ ಸರಿಯಾಗಿ ಊಟ ಲಭ್ಯವಾಗುತ್ತಿಲ್ಲ. ಜೊತೆಗೆ ಶಾಲೆಯ ಪ್ರಾಂಶುಪಾಲರು ನಿಯಮಿತವಾಗಿ ಶಾಲೆಗೆ ಬರದೆ ಗೈರುಹಾಜರಾಗುತ್ತಿದ್ದಾರೆ ಎಂದು ಪಾಲಕರು ಆರೋಪಿಸಿದ್ದಾರೆ.

ಪ್ರತೀ ಮಗುವಿನ ಊಟಕ್ಕೆ ಉತ್ತರ ಪ್ರದೇಶ ರಾಜ್ಯಸರ್ಕಾರ ಕೇವಲ ರೂ. 4.97 ಖರ್ಚು ಮಾಡುತ್ತಿದೆ. ಇಷ್ಟು ಕಡಿಮೆ ಹಣದಲ್ಲಿ ಸಂಪೂರ್ಣ ಪೌಷ್ಠಿಕ ಆಹಾರ ಒದಗಿಸಲಾಗದು. ಆದ್ದರಿಂದ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಿ ಎಂದು ಅನೇಕ ಸಂದರ್ಭಗಳಲ್ಲಿ ಪ್ರಾಂಶುಪಾಲರು ಮತ್ತು ಗ್ರಾಮದ ಮುಖ್ಯಸ್ಥರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ ಎಂಬ ವಿಷಯವನ್ನು ಪತ್ರಕರ್ತ ಪಿಯೂಷ್​ ರೈ ಮತ್ತೊಂದು ಟ್ವೀಟ್​ನಲ್ಲಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:20 am, Fri, 30 September 22

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ