AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಅನ್ನ ಉಪ್ಪು ಮಾತ್ರ

Mid-day Meals : ‘ಯೋಗಿ ಬಾಬಾ ಸ್ವಲ್ಪ ಇತ್ತ ಗಮನಿಸಿ ಅಯೋಧ್ಯೆಯಲ್ಲಿ ಶಾಲಾಮಕ್ಕಳು ಮಧ್ಯಾಹ್ನದ ಬಿಸಿಯೂಟಕ್ಕೆ ಕೇವಲ ಅನ್ನ ಮತ್ತು ಉಪ್ಪನ್ನು ತಿನ್ನುತ್ತಿದ್ದಾರೆ.’ ಈ ವಿಡಿಯೋ ಅನ್ನು 3 ಮಿಲಿಯನ್​ಗಿಂತಲೂ ಹೆಚ್ಚು ಜನ ವೀಕ್ಷಿಸಿದ್ದಾರೆ.

ಅಯೋಧ್ಯೆಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಅನ್ನ ಉಪ್ಪು ಮಾತ್ರ
ಮಧ್ಯಾಹ್ನದ ಬಿಸಿಯೂಟ ಅನ್ನ ಮತ್ತು ಉಪ್ಪು ಮಾತ್ರ
ಶ್ರೀದೇವಿ ಕಳಸದ
|

Updated on:Sep 30, 2022 | 10:21 AM

Share

Viral Video : ಉತ್ತರಪ್ರದೇಶದ ಅಯೋಧ್ಯೆಯ ಪ್ರಾಥಮಿಕ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಕೇವಲ ಅನ್ನ ಮತ್ತು ಉಪ್ಪನ್ನು ಮಾತ್ರ ಬಡಿಸಲಾಗಿದೆ. ಶಾಲಾಮಕ್ಕಳು ಅಂಗಳ ಮತ್ತು ಬರೀ ನೆಲದ ಮೇಲೆ ಕುಳಿತುಕೊಂಡು ಊಟ ಮಾಡುತ್ತಿದ್ದಾರೆ. ಪತ್ರಕರ್ತ ಪಿಯೂಷ್​ ರೈ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಅನ್ನದ ಜೊತೆ ಸಾರು, ಪಲ್ಯ ಏನೊಂದು ಇಲ್ಲ ಏನಿದು ಅವ್ಯವಸ್ಥೆ ಎಂದು ಶಿಕ್ಷಕರಿಗೆ, ಗ್ರಾಮದ ಮುಖ್ಯಸ್ಥರಿಗೆ ಕೇಳಲಾಗಿ ಈ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಹಾಗಿದ್ದರೆ ಇದಕ್ಕೆ ಯಾರು ಹೊಣೆ?

ಮಕ್ಕಳಿಗೆ ಪೌಷ್ಠಿಕ ಆಹಾರ ಕೊಡಬೇಕು. ಇಲ್ಲಿ ಕೇವಲ ಅನ್ನ ಮತ್ತು ಉಪ್ಪು ತಿನ್ನುತ್ತಿದ್ದಾರೆ. ಇಂಥ ಶಾಲೆಗೆ ಮಕ್ಕಳನ್ನು ಯಾರು ಕಳಿಸುತ್ತಾರೆ? ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಡಿಯೋ ನೋಡಲೇಬೇಕು ಎಂಬ ಧ್ವನಿ ಈ ವಿಡಿಯೋದಲ್ಲಿ ಕೇಳಿಬರುತ್ತದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಗ್ರಾಮದ ಮುಖ್ಯಸ್ಥರಿಗೆ ನೋಟೀಸ್ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕು ಶಾಲೆಯ ಎದುರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಅಯೋಧ್ಯೆಯ ಜಿಲ್ಲಾ ನ್ಯಾಯಾಧೀಶ ನಿತೀಶ್ ಕುಮಾರ್ ಈ ಸಂಬಂಧಿ ತನಿಖೆಗೆ ಆದೇಶ ನೀಡಿದ್ದಾರೆ. ಬಿಎಸ್​ಎ ಅಧಿಕಾರಿಗಳು ಈ ಪರಿಸ್ಥಿತಿಯ ಕುರಿತು ಕೂಲಂಕಷವಾಗಿ ವಿಚಾರಣೆ ನಡೆಸಲಿದ್ದಾರೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಚೀಲಗಳ ಮೇಲೆ ಕುಳಿತುಕೊಳ್ಳಲು ಶಿಕ್ಷಕರು ಒತ್ತಾಯಿಸುತ್ತಾರೆ. ಅಲ್ಲದೆ, ಮೆನು ಪ್ರಕಾರ ಮಕ್ಕಳಿಗೆ ಸರಿಯಾಗಿ ಊಟ ಲಭ್ಯವಾಗುತ್ತಿಲ್ಲ. ಜೊತೆಗೆ ಶಾಲೆಯ ಪ್ರಾಂಶುಪಾಲರು ನಿಯಮಿತವಾಗಿ ಶಾಲೆಗೆ ಬರದೆ ಗೈರುಹಾಜರಾಗುತ್ತಿದ್ದಾರೆ ಎಂದು ಪಾಲಕರು ಆರೋಪಿಸಿದ್ದಾರೆ.

ಪ್ರತೀ ಮಗುವಿನ ಊಟಕ್ಕೆ ಉತ್ತರ ಪ್ರದೇಶ ರಾಜ್ಯಸರ್ಕಾರ ಕೇವಲ ರೂ. 4.97 ಖರ್ಚು ಮಾಡುತ್ತಿದೆ. ಇಷ್ಟು ಕಡಿಮೆ ಹಣದಲ್ಲಿ ಸಂಪೂರ್ಣ ಪೌಷ್ಠಿಕ ಆಹಾರ ಒದಗಿಸಲಾಗದು. ಆದ್ದರಿಂದ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಿ ಎಂದು ಅನೇಕ ಸಂದರ್ಭಗಳಲ್ಲಿ ಪ್ರಾಂಶುಪಾಲರು ಮತ್ತು ಗ್ರಾಮದ ಮುಖ್ಯಸ್ಥರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ ಎಂಬ ವಿಷಯವನ್ನು ಪತ್ರಕರ್ತ ಪಿಯೂಷ್​ ರೈ ಮತ್ತೊಂದು ಟ್ವೀಟ್​ನಲ್ಲಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:20 am, Fri, 30 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ