AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಹೋಟೆಲ್​ನಲ್ಲಿ ಉಳಿದುಕೊಳ್ತೀರಾ, ಹಾಸಿಗೆ ಕೆಳಗೆ ನೀರಿನ ಬಾಟಲಿ ಎಸೆಯುವುದ ಮರಿಬೇಡಿ

ನೀವು ಪದೇ ಪದೇ ಎಲ್ಲಿಗಾದರೂ ಪ್ರವಾಸಕ್ಕೆ ಹೋಗುತ್ತಿರಬಹುದು, ಹೋಟೆಲ್​ನಲ್ಲಿ ಉಳಿಯುವಂತಹ ಅನಿವಾರ್ಯತೆ ಎದುರಾಗಬಹುದು ಆ ಸಂದರ್ಭದಲ್ಲಿ ಹಾಸಿಗೆಯ ಕೆಳಗೆ ನೀರಿನ ಬಾಟಲಿ ಎಸೆಯುವುದನ್ನು ಮರೆಯಬೇಡಿ. ಹೋಟೆಲ್​ ಬುಕ್ ಮಾಡಿದಾಗ ನಿಮಗೆ ಆ ಹೋಟೆಲ್​ ಬಗ್ಗೆ ಏನೂ ತಿಳಿದಿರುವುದಿಲ್ಲ, ಎಲ್ಲೋ ಗುಪ್ತ ಕ್ಯಾಮರಾಗಳಿರಬಹುದು ಅಥವಾ ಯಾರಾದರೂ ನಿಮ್ಮ ಮೇಲೆ ಕಣ್ಣಿಟ್ಟಿರಬಹುದು.

ನೀವು ಹೋಟೆಲ್​ನಲ್ಲಿ ಉಳಿದುಕೊಳ್ತೀರಾ, ಹಾಸಿಗೆ ಕೆಳಗೆ ನೀರಿನ ಬಾಟಲಿ ಎಸೆಯುವುದ ಮರಿಬೇಡಿ
ಬಾಟಲಿ
ನಯನಾ ರಾಜೀವ್
|

Updated on:Aug 16, 2024 | 9:56 AM

Share

ನೀವು ಪದೇ ಪದೇ ಎಲ್ಲಿಗಾದರೂ ಪ್ರವಾಸಕ್ಕೆ ಹೋಗುತ್ತಿರಬಹುದು, ಹೋಟೆಲ್​ನಲ್ಲಿ ಉಳಿಯುವಂತಹ ಅನಿವಾರ್ಯತೆ ಎದುರಾಗಬಹುದು ಆ ಸಂದರ್ಭದಲ್ಲಿ ಹಾಸಿಗೆಯ ಕೆಳಗೆ ನೀರಿನ ಬಾಟಲಿ ಎಸೆಯುವುದನ್ನು ಮರೆಯಬೇಡಿ. ಹೋಟೆಲ್​ ಬುಕ್ ಮಾಡಿದಾಗ ನಿಮಗೆ ಆ ಹೋಟೆಲ್​ ಬಗ್ಗೆ ಏನೂ ತಿಳಿದಿರುವುದಿಲ್ಲ, ಎಲ್ಲೋ ಗುಪ್ತ ಕ್ಯಾಮರಾಗಳಿರಬಹುದು ಅಥವಾ ಯಾರಾದರೂ ನಿಮ್ಮ ಮೇಲೆ ಕಣ್ಣಿಟ್ಟಿರಬಹುದು.

ಬಹುತೇಕ ಎಲ್ಲರೂ ಈ ರೀತಿಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಹೋಟೆಲ್ ಕೊಠಡಿಗಳಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳಿಂದ ಅನೇಕ ಜನರು ಅನನುಕೂಲತೆ ಎದುರಿಸಿದ್ದಾರೆ. ಅದರಲ್ಲೂ ಮಹಿಳೆಯರ ವಿಷಯದಲ್ಲಿ ಭದ್ರತೆ ಹೆಚ್ಚು ಮುಖ್ಯ ಹಾಗೆಯೇ ಅವರು ಎಲ್ಲದರ ಬಗ್ಗೆ ಜಾಗರೂಕರಾಗಿರಬೇಕಾಗುತ್ತದೆ.

ಇದನ್ನು ಗಮನದಲ್ಲಿಟ್ಟುಕೊಂಡು, ಡಚ್ ಏರ್‌ಲೈನ್ಸ್ ಫ್ಲೈಟ್ ಅಟೆಂಡೆಂಟ್ ಎಸ್ಟರ್ ಸ್ಟ್ರೂಸ್ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪ್ರಯಾಣ ಸುರಕ್ಷತೆ ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಅವರು ತಮ್ಮ ಅನುಭವದಿಂದ ಹೇಳಿದರು, ನೀವು ಈ ಕೆಲವು ಹ್ಯಾಕ್‌ಗಳನ್ನು ನೆನಪಿಸಿಕೊಂಡರೆ ನೀವು ಹೋಟೆಲ್‌ನಲ್ಲಿ ಸುರಕ್ಷಿತವಾಗಿರುತ್ತೀರಿ.

ಮತ್ತಷ್ಟು ಓದಿ: Viral Photo: ಹುಡುಗಿ ಸಿಗದೇ ಕುಕ್ಕರನ್ನು ಮದುವೆಯಾದ ಯುವಕ

ನೀವು ಮಾಡಬೇಕಾದ ಮೊದಲ ಕೆಲಸವೆಂದರೆ ನೀರಿನ ಬಾಟಲಿಯನ್ನು ಹಾಸಿಗೆಯ ಕೆಳಗೆ ಎಸೆಯುವುದು. ಈ ಕೆಲಸ ನಿಮ್ಮ ಸುರಕ್ಷತೆಗಾಗಿ. ನಿಮಗನಿಸಬಹುದು ಹಾಸಿಗೆ ಕೆಳಗೆ ನೀರಿನ ಬಾಟಲು ಎಸೆಯುವುದಕ್ಕೂ ನಿಮ್ಮ ಸುರಕ್ಷತೆಗೂ ಏನು ಸಂಬಂಧವೆಂದು.

ವಾಸ್ತವವಾಗಿ, ಹಾಸಿಗೆಯ ಕೆಳಗೆ ನೀರಿನ ಬಾಟಲಿಯನ್ನು ಎಸೆದರೆ, ಅಲ್ಲಿ ಯಾರಾದರೂ ಅಡಗಿದ್ದಾರೆಯೇ ಎಂದು ತಿಳಿಯುತ್ತದೆಯೇ? ಕೆಳಗೆ ಯಾರೂ ಇಲ್ಲದಿದ್ದರೆ ನೀರಿನ ಬಾಟಲಿಯು ಹೊರಬರುತ್ತದೆ, ಇಲ್ಲದಿದ್ದರೆ ಅಲ್ಲಿ ಏನಾದರೂ ತಪ್ಪಾಗಿದೆ ಎಂದು ನಿಮಗೆ ತಿಳಿಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ತಕ್ಷಣ ಕೊಠಡಿಯನ್ನು ಬಿಟ್ಟು ಓಡಿಹೋಗಬಹುದು.

ಆಸ್ಟರ್ ಇನ್ನೂ ಕೆಲವು ತಂತ್ರಗಳನ್ನು ಹೇಳಿದ್ದಾರೆ. ಹೋಟೆಲ್ ರೂಮಿನಲ್ಲಿದ್ದಾಗ ಶೂ ಕಳಚಿ ಲಾಕರ್ ನಲ್ಲಿ ಇಡುತ್ತಾರೆ ಎಂದರು. ಇದರ ಹಿಂದೆ ಒಂದು ಕುತೂಹಲಕಾರಿ ಕಾರಣವೂ ಇದೆ.

ಅನೇಕ ಬಾರಿ ಜನರು ಲಾಕರ್‌ನಲ್ಲಿ ಪ್ರಮುಖ ವಸ್ತುಗಳನ್ನು ಇಡುತ್ತಾರೆ ಆದರೆ ಹೊರಡುವಾಗ ಅವುಗಳನ್ನು ತೆಗೆದುಕೊಳ್ಳಲು ಮರೆತುಬಿಡುತ್ತಾರೆ. ಪಾದರಕ್ಷೆ ಇಲ್ಲದೆ ಹೊರಗೆ ಹೋಗುವಂತಿಲ್ಲವಾದ್ದರಿಂದ ಲಾಕರ್ ನಲ್ಲಿ ಬೂಟುಗಳಿದ್ದರೆ ಲಾಕರ್ ತೆರೆದು ನೋಡುತ್ತಾರೆ. ಈ ರೀತಿಯಾಗಿ ನಿಮ್ಮ ಬೆಲೆಬಾಳುವ ವಸ್ತುಗಳು ಮರೆಯುವುದಿಲ್ಲ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:06 am, Fri, 16 August 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ