Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಪ್ಪು ಮಾಡಿದ ಮಗನಿಗೆ ‘ನಾನು ಪುಂಡ’ ಎಂದು ಬೋರ್ಡ್​ ಹಿಡಿಸಿ ರಸ್ತೆ ಪಕ್ಕ ನಿಲ್ಲಿಸಿದ ಪೋಷಕರು

ತಪ್ಪು ಮಾಡಿದ ಮಗನಿಗೆ ಶಿಕ್ಷೆಯಾಗಿ ಪೋಷಕರು ಪುಂಡ ಎನ್ನುವ ಬೋರ್ಡ್ ಹಿಡಿಸಿ ರಸ್ತೆಯ ಪಕ್ಕ ನಿಲ್ಲಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್​ ಆಗಿದೆ

Viral Video: ತಪ್ಪು ಮಾಡಿದ ಮಗನಿಗೆ 'ನಾನು ಪುಂಡ' ಎಂದು ಬೋರ್ಡ್​ ಹಿಡಿಸಿ ರಸ್ತೆ ಪಕ್ಕ ನಿಲ್ಲಿಸಿದ ಪೋಷಕರು
ಬೋರ್ಡ್​ ಹಿಡಿದಿರುವ ಬಾಲಕ
Follow us
TV9 Web
| Updated By: Pavitra Bhat Jigalemane

Updated on: Dec 26, 2021 | 12:36 PM

ತಪ್ಪು ಮಾಡಿದ ಮಗನಿಗೆ ಶಿಕ್ಷೆಯಾಗಿ ಪೋಷಕರು ನಾನು ಪುಂಡ ಎನ್ನುವ ಬೋರ್ಡ್ ಹಿಡಿಸಿ ರಸ್ತೆಯ ಪಕ್ಕ ನಿಲ್ಲಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್​ ಆಗಿದೆ. ಯುಎಸ್​ನಲ್ಲಿ ಈ ಘಟನೆ ನಡೆದಿದೆ. ಪ್ಲೋರಿಡಾದ ಗೆಲ್ವಿನ್​ ​ ಕ್ಲೈನ್​ ಎನ್ನುವ ಟಿಕ್​ ಟಾಕ್​ ಬಳಕೆದಾರರೊಬ್ಬರು ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಳತಾಣದಲ್ಲಿ ವೀಡಿಯೋ ಸಖತ್​ ಸದಸ ಮಾಡುತ್ತಿದೆ. ಜತೆಗೆ ಬಾಲಕನಿಗೆ ಈ ರಿತಿ ಶಿಕ್ಷೆ ನೀಡಿದ ತಂದೆ ತಾಯಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಬಾಲಕ ಹಿಡಿದುಕೊಂಡ ಬೋರ್ಡ್​ನಲ್ಲಿ ನಾನು ಪುಂಡ. ಪುಂಡರನ್ನು ದ್ವೇಷಿಸುವುದಾದರೆ ನಿಮ್ಮ ಗಾಡಿಯಲ್ಲಿ ಹಾರ್ನ್ ಮಾಡಿರಿ ಎಂದು ಬರೆಯಲಾಗಿತ್ತು. ಬಾಲಕನ ಪಕ್ಕದಲ್ಲೇ ಬೇಂಚಿನ ಮೇಲೆ  ಆತನ ಪೋಷಕರು ಕುಳಿತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

ವೀಡಿಯೋ ಹಂಚಿಕೊಂಡ ಗೆಲ್ವಿನ್​ ​ ಕ್ಲೈನ್​  ಅವರು ಘಟನೆಯ ಬಗ್ಗೆ ಪೂರ್ಣ ವಿವರ ತಿಳಿದಿಲ್ಲ. ಆದರೆ ಬಾಲಕನನ್ನು ಸಾರ್ವಜನಿಕವಾಗಿ ಅವಮಾನಿಸುವುದು ಸರಿಯಲ್ಲ ಎಂದಿದ್ದಾರೆ. ಈ ಬಗ್ಗೆ ಹಲವರು ಆಕ್ರೋಶದಿಂದಲೇ ಕಾಮೆಂಟ್​ ಮಾಡಿದ್ದಾರೆ. ಶಿಕ್ಷೆಯ ಶಿಸ್ತು ಸರಿಯಾಗಿದೆ ಆದರೆ ಸಾರ್ವಜನಿಕರು ಬಾಲಕನಿಗೆ ಏನನ್ನೂ ಕಲಿಸುವುದಿಲ್ಲ ಎಂದಿದ್ದಾರೆ.

ಇನ್ನೊಬ್ಬರು ಸಾರ್ವಜನಿಕರ ಎದುರು ನಿಮ್ಮ ಮಗನನ್ನು ಮುಜುಗರಕ್ಕೆ ಒಳಪಡಿಸಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಕಾಮೆಂಟ್​ ಮಾಡಿದ್ದಾರೆ. ಒಟ್ಟಿನಲ್ಲಿ ಬಾಲಕನಿಗೆ ನೀಡಿದ ಶಿಕ್ಷೆಯನ್ನು ಕಂಡು ನೆಟ್ಟಿಗರು ಕಿಡಿಕಾರಿದ್ದಾರೆ. ಮಕ್ಕಳು ತಪ್ಪು ಮಾಡಿದರೆ ಅವರಿಗೆ ತಿಳಿ ಹೇಳಿವುದರ ಬದಲು ಈ ರೀತಿ ಸಾರ್ವಜನಿಕವಾಗಿ ಅವಮಾನ ಮಾಡಿದರೆ ಅವರ ಸೂಕ್ಷ್ಮ ಮನಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎನ್ನುವುದು ಹಲವರ ಅಭಿಪ್ರಾಯ.

ಇದನ್ನೂ ಓದಿ:

ಜಗತ್ತು ನೈಸರ್ಗಿಕ ವಿಕೋಪ, ಹೊಸ ಮಾರಕ ವೈರಸ್​ಗೆ ತುತ್ತಾಗಲಿದೆ: 2022ರ ಬಗ್ಗೆ ಬಾಬಾ ವಂಗಾ ಭವಿಷ್ಯ

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ