AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಕೂಟರ್​ ಸವಾರಿಯೊಂದಿಗೆ ಸ್ನಾನ ಮಾಡುತ್ತಿರುವ ಜೋಡಿ; ಪೊಲೀಸ್ ಕ್ರಮ

Maharashtra : ಹೋಗ್ರೋ ಹೋಗ್ರಿ ಎಲ್ಲಾ ರೀಲ್ಸ್​ಗಾಗಿ ಇಂಥ ಹುಚ್ಚಾಟ ಮಾಡ್ತೀರಿ. ಇದರಲ್ಲಿ ಅಚ್ಚರಿ ಪಡುವಂಥದ್ದೇನೂ ಇಲ್ಲ. ಹೋಗಿ ಮಾವನ ಮನೆಯಲ್ಲಿ ಆತಿಥ್ಯ ನಿಮಗಾಗಿ ಕಾಯ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ಸ್ಕೂಟರ್​ ಸವಾರಿಯೊಂದಿಗೆ ಸ್ನಾನ ಮಾಡುತ್ತಿರುವ ಜೋಡಿ; ಪೊಲೀಸ್ ಕ್ರಮ
ಉಲ್ಲಾನಗರದ ರಸ್ತೆಯಲ್ಲಿ ಈ ಜೋಡಿ ಸ್ಕೂಟರ್​ ಮೇಲೆ ಸ್ನಾನ ಮಾಡುತ್ತ ಸಾಗಿರುವುದು
TV9 Web
| Edited By: |

Updated on: May 19, 2023 | 11:48 AM

Share

Scooter: ಈಗೀಗ ಅಚ್ಚರಿ ಪಡಲೇಬೇಕಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಅಸಹಜವೆನ್ನಿಸುವ ಏನಾದರೂ ಚಟುವಟಿಕೆ ನಡೆಯುತ್ತಿದೆ ಎಂದರೆ ಅದು ರೀಲ್ಸ್​ಗಾಗಿ. ಸಾಮಾಜಿಕ ಜಾಲತಾಣದ ಮೂಲಕ ಅಸ್ತಿತ್ವ ಕಂಡುಕೊಳ್ಳಲು ನಡೆಸುವ ಕಸರತ್ತೇ ಎನ್ನುವುದು ಈಗೀಗ ಎಲ್ಲರಿಗೂ ಅರ್ಥವಾಗತೊಡಗಿದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಮಹಾರಾಷ್ಟ್ರದ ರಸ್ತೆಯಲ್ಲಿ ಸ್ಕೂಟರ್​ಮೇಲೆ ಚಲಿಸುತ್ತಿರುವ ಈ ಜೋಡಿ ಸ್ನಾನ ಮಾಡುತ್ತ ಸಾಗಿದೆ. ಮುಂದೇನಾಯಿತು?

ಮುಂದೇನಾಗುತ್ತದೆ? ದಾರಿಹೋಕರು ಈ ವಿಡಿಯೋ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಥಾಣೆಯ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿದ್ದಾರೆ. ಉಲ್ಲಾಸನಗರದ ಜನನಿಬಿಡ ರಸ್ತೆಯಲ್ಲಿ ಈ ಯುವಜೋಡಿ ಹೀಗೆ ಮಾಡಿದ್ದು ನೆಟ್ಟಿಗರ ಕಂಗೆಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ : Viral: ವರ್ಕ್ ಫ್ರಮ್ ರ್‍ಯಾಪಿಡೋ ಬೈಕ್! ಇದು ನಮ್ಮ ಬೆಂಗಳೂರಿನಲ್ಲಿ

ಸ್ಕೂಟರ್​ ಹಿಂದೆ ಬಕೆಟ್​, ಮಗ್​ ಹಿಡಿದುಕೊಂಡು ಕುಳಿತ ಯುವತಿ ತಾನೂ ನೀರು ಸುರಿದುಕೊಳ್ಳುತ್ತಾಳೆ. ಗಾಡಿ ಓಡಿಸುವ ಯುವಕನ ಮೇಲೂ ನೀರು ಸುರಿಯುತ್ತಾಳೆ. ನೋಡಲೇನೋ ಅತ್ಯಂತ ಉಲ್ಲಾಸದಾಯಕವಾಗಿದೆ ಈ ಬೇಸಿಗೆಯಲ್ಲಿ. ಆದರೆ ಏನೇ ಮೋಜು ಮಸ್ತಿ ಮಾಡುವ ಮೊದಲು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿಯೇ ಯೋಚಿಸಬೇಕಲ್ಲವೆ?

ಇದನ್ನೂ ಓದಿ : Viral Video: ಮಂಟಪದಿಂದ ನೇರ ಪರೀಕ್ಷಾ ಕೊಠಡಿ ಪ್ರವೇಶಿಸಿದ ಉತ್ತರಪ್ರದೇಶದ ನವವಧು

ಮೇ 15ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈತನಕ ಸುಮಾರು 4,500 ಜನರು ಈ ವಿಡಿಯೋ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಶಿಕ್ಷಣ ಎಂದರೆ ಸರ್ಟಿಫಿಕೇಟ್​ ಪಡೆಯುವುದಲ್ಲ, ಸಾಮಾನ್ಯ ತಿಳಿವಳಿಕೆ ಎಂದಿದ್ದಾರೆ ಒಬ್ಬರು. ಜನ ಪ್ರಸಿದ್ಧಿಗಾಗಿ ಏನೂ ಮಾಡುತ್ತಾರೆ ಹೀಗೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ ಹಲವರು. ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್