AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಕೂಟರ್​ ಸವಾರಿಯೊಂದಿಗೆ ಸ್ನಾನ ಮಾಡುತ್ತಿರುವ ಜೋಡಿ; ಪೊಲೀಸ್ ಕ್ರಮ

Maharashtra : ಹೋಗ್ರೋ ಹೋಗ್ರಿ ಎಲ್ಲಾ ರೀಲ್ಸ್​ಗಾಗಿ ಇಂಥ ಹುಚ್ಚಾಟ ಮಾಡ್ತೀರಿ. ಇದರಲ್ಲಿ ಅಚ್ಚರಿ ಪಡುವಂಥದ್ದೇನೂ ಇಲ್ಲ. ಹೋಗಿ ಮಾವನ ಮನೆಯಲ್ಲಿ ಆತಿಥ್ಯ ನಿಮಗಾಗಿ ಕಾಯ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ಸ್ಕೂಟರ್​ ಸವಾರಿಯೊಂದಿಗೆ ಸ್ನಾನ ಮಾಡುತ್ತಿರುವ ಜೋಡಿ; ಪೊಲೀಸ್ ಕ್ರಮ
ಉಲ್ಲಾನಗರದ ರಸ್ತೆಯಲ್ಲಿ ಈ ಜೋಡಿ ಸ್ಕೂಟರ್​ ಮೇಲೆ ಸ್ನಾನ ಮಾಡುತ್ತ ಸಾಗಿರುವುದು
TV9 Web
| Edited By: |

Updated on: May 19, 2023 | 11:48 AM

Share

Scooter: ಈಗೀಗ ಅಚ್ಚರಿ ಪಡಲೇಬೇಕಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಅಸಹಜವೆನ್ನಿಸುವ ಏನಾದರೂ ಚಟುವಟಿಕೆ ನಡೆಯುತ್ತಿದೆ ಎಂದರೆ ಅದು ರೀಲ್ಸ್​ಗಾಗಿ. ಸಾಮಾಜಿಕ ಜಾಲತಾಣದ ಮೂಲಕ ಅಸ್ತಿತ್ವ ಕಂಡುಕೊಳ್ಳಲು ನಡೆಸುವ ಕಸರತ್ತೇ ಎನ್ನುವುದು ಈಗೀಗ ಎಲ್ಲರಿಗೂ ಅರ್ಥವಾಗತೊಡಗಿದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಮಹಾರಾಷ್ಟ್ರದ ರಸ್ತೆಯಲ್ಲಿ ಸ್ಕೂಟರ್​ಮೇಲೆ ಚಲಿಸುತ್ತಿರುವ ಈ ಜೋಡಿ ಸ್ನಾನ ಮಾಡುತ್ತ ಸಾಗಿದೆ. ಮುಂದೇನಾಯಿತು?

ಮುಂದೇನಾಗುತ್ತದೆ? ದಾರಿಹೋಕರು ಈ ವಿಡಿಯೋ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಥಾಣೆಯ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿದ್ದಾರೆ. ಉಲ್ಲಾಸನಗರದ ಜನನಿಬಿಡ ರಸ್ತೆಯಲ್ಲಿ ಈ ಯುವಜೋಡಿ ಹೀಗೆ ಮಾಡಿದ್ದು ನೆಟ್ಟಿಗರ ಕಂಗೆಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ : Viral: ವರ್ಕ್ ಫ್ರಮ್ ರ್‍ಯಾಪಿಡೋ ಬೈಕ್! ಇದು ನಮ್ಮ ಬೆಂಗಳೂರಿನಲ್ಲಿ

ಸ್ಕೂಟರ್​ ಹಿಂದೆ ಬಕೆಟ್​, ಮಗ್​ ಹಿಡಿದುಕೊಂಡು ಕುಳಿತ ಯುವತಿ ತಾನೂ ನೀರು ಸುರಿದುಕೊಳ್ಳುತ್ತಾಳೆ. ಗಾಡಿ ಓಡಿಸುವ ಯುವಕನ ಮೇಲೂ ನೀರು ಸುರಿಯುತ್ತಾಳೆ. ನೋಡಲೇನೋ ಅತ್ಯಂತ ಉಲ್ಲಾಸದಾಯಕವಾಗಿದೆ ಈ ಬೇಸಿಗೆಯಲ್ಲಿ. ಆದರೆ ಏನೇ ಮೋಜು ಮಸ್ತಿ ಮಾಡುವ ಮೊದಲು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿಯೇ ಯೋಚಿಸಬೇಕಲ್ಲವೆ?

ಇದನ್ನೂ ಓದಿ : Viral Video: ಮಂಟಪದಿಂದ ನೇರ ಪರೀಕ್ಷಾ ಕೊಠಡಿ ಪ್ರವೇಶಿಸಿದ ಉತ್ತರಪ್ರದೇಶದ ನವವಧು

ಮೇ 15ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈತನಕ ಸುಮಾರು 4,500 ಜನರು ಈ ವಿಡಿಯೋ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಶಿಕ್ಷಣ ಎಂದರೆ ಸರ್ಟಿಫಿಕೇಟ್​ ಪಡೆಯುವುದಲ್ಲ, ಸಾಮಾನ್ಯ ತಿಳಿವಳಿಕೆ ಎಂದಿದ್ದಾರೆ ಒಬ್ಬರು. ಜನ ಪ್ರಸಿದ್ಧಿಗಾಗಿ ಏನೂ ಮಾಡುತ್ತಾರೆ ಹೀಗೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ ಹಲವರು. ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್