AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಏನು ಧೈರ್ಯ ಈಕೆಯದು, ಹಗ್ಗದಂತೆ ಹಾವನ್ನು ಹಿಡಿದ ವಿದ್ಯಾರ್ಥಿನಿ

ವಿಷಕಾರಿ ಸರ್ಪಗಳೊಂದಿಗೆ ಆಟವಾಡುವುದು ಈಗಿನ ಯುವಕರಿಗೆ ಫ್ಯಾಷನ್ ಆಗಿಬಿಟ್ಟಿದೆ. ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಹಾಗೂ ಫಾಲ್ಲೋರ್ಸ್ ಗಳಿಗಾಗಿ ಹಾವುಗಳ ಜೊತೆಗೆ ಆಟಗಳನ್ನು ಆಡುತ್ತಾ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಕಾಲೇಜು ಕ್ಯಾಂಪಸ್‌ಗೆ ಹಾವು ನುಗ್ಗಿದೆ. ಯುವತಿಯೊಬ್ಬಳು ಧೈರ್ಯದಿಂದ ಪೊದೆಯೊಳಗೆ ಹೋದ ಹಾವನ್ನು ಹಿಡಿದಿದ್ದಾಳೆ, ಈ ದೃಶ್ಯ ನೋಡಿ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಸಾಯಿನಂದಾ
| Edited By: |

Updated on:Nov 02, 2024 | 12:46 PM

Share

ಸಾಮಾನ್ಯವಾಗಿ ಹುಡುಗಿಯರಿಗೆ ಕ್ರಿಮಿ ಕೀಟಗಳೆಂದರೆ ಭಯ ಹೆಚ್ಚು. ಹಲ್ಲಿ, ಜಿರಳೆಯಂತಹ ಕೀಟವು ಕಣ್ಣಿಗೆ ಬಿದ್ದರೆ ಸಾಕು, ಅಲ್ಲಿಂದ ಓಡಿ ಹೋಗುತ್ತಾರೆ. ಇನ್ನು ಕೆಲವರು ಹುಡುಗಿಯರಿಗೆ ಏನೇ ಬಂದರೂ ಹೆದರೋದೆ ಇಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಈ ಯುವತಿಯೊಬ್ಬಳು ಕೂಡ ಅಷ್ಟೇ ಧೈರ್ಯವಂತೆ ಎನ್ನುವುದು ತಿಳಿಯುತ್ತದೆ. ಕಾಲೇಜು ಹುಡುಗಿಯೊಬ್ಬಳು ಅತ್ಯಂತ ಧೈರ್ಯದಿಂದ ನಾಗರಹಾವನ್ನು ಸಲೀಸಾಗಿ ಹಿಡಿದಿದ್ದಾಳೆ. ಮೈ ಜುಮ್ಮ್ ಎನಿಸುವ ಈ ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ.

Introvert ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಕಾಲೇಜು ಕ್ಯಾಂಪಸ್‌ಗೆ ದೈತ್ಯಗಾತ್ರದ ನಾಗರಹಾವೊಂದು ನುಗ್ಗಿದೆ. ಅಲ್ಲೇ ಇದ್ದ ವಿದ್ಯಾರ್ಥಿಗಳೆಲ್ಲ ಭಯದಿಂದ ಓಡಿದ್ದಾರೆ. ಆದರೆ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಧೈರ್ಯದಿಂದ ಪೊದೆಯೊಳಗಿದ್ದ ನಾಗರ ಹಾವಿನ ಬಾಲವನ್ನು ಹಿಡಿದು ಹೊರತೆಗೆದಿದ್ದಾಳೆ.

ಇದನ್ನೂ ಓದಿ: ಬಾಲಕಿಯ ಸೂರ್ಯ ನಮಸ್ಕಾರಕ್ಕೆ ಆನಂದ್ ಮಹಿಂದ್ರಾ ಫುಲ್ ಫಿದಾ, ವಿಡಿಯೋ ವೈರಲ್

ಹಾವು ಕೈಯಿಂದ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೂ ಯುವತಿ ಯಾವುದೇ ಭಯವಿಲ್ಲದೆ ಅದನ್ನು ಬಿಗಿಯಾಗಿ ಹಿಡಿದಿದ್ದಾಳೆ. ವಿಷಕಾರಿ ಹಾವನ್ನು ಹಿಡಿದ ರೀತಿ ನೋಡಿ ಅಲ್ಲಿದ್ದ ವಿದ್ಯಾರ್ಥಿಗಳೆಲ್ಲ ಬೆಚ್ಚಿಬಿದ್ದಿದ್ದಾರೆ. ಈ ವಿಡಿಯೋವು ಎಂಟು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದೆ. ಈ ದೃಶ್ಯವು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ನೆಟ್ಟಿಗರೊಬ್ಬರು, ‘ಏನು ಧೈರ್ಯ ಗುರು ಈಕೆಯದು, ಹಾವು ಹಿಡಿಯುವುದರಲ್ಲಿ ನೈಪುಣ್ಯತೆ ಹೊಂದಿದ್ದಾಳೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಇಂತಹ ವಿಷಕಾರಿ ಹಾವುಗಳನ್ನು ಹಿಡಿಯಲು ಹೋಗಿ ಜೀವ ಕಳೆದುಕೊಳ್ಳಬೇಡಿ ಎಂದು ಎಚ್ಚರಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:45 pm, Sat, 2 November 24

Follow Us
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ