AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ

ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಯುವಕ ನಿಂತಿದ್ದು, ನಾನು ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು? ಎಂದು ಬೋರ್ಡ್​ ಮೇಲೆ ಬರೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ.

Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ
ಅಕ್ಷತಾ ವರ್ಕಾಡಿ
|

Updated on: Sep 29, 2024 | 3:35 PM

Share

ಮಧ್ಯಪ್ರದೇಶ: ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು, ಯಾವ ರೀತಿ ಆಕೆಗೆ ಸಂದೇಶಗಳನ್ನು ಕಳುಹಿಸಬೇಕು ಎಂದು ಬರೆದ ಪೋಸ್ಟರ್​​ ಹಿಡಿದು ಯುವಕನೊಬ್ಬ ನಡುರಸ್ತೆಯಲ್ಲೇ ನಿಂತಿರುವ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮಾಹಿತಿಯ ಪ್ರಕಾರ, ಈ ವಿಡಿಯೋ ಭೋಪಾಲ್ ನ ಎಂಪಿ ನಗರ ಪ್ರದೇಶಕ್ಕೆ ಸಂಬಂಧಿಸಿದ್ದು ಎನ್ನಲಾಗಿದೆ. ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಮುಖ ಮುಚ್ಚಿಕೊಂಡು ಯುವಕ ಹೇಗೆ ನಿಂತಿದ್ದಾನೆ ಎಂಬುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?

ಈ ಕುರಿತು ಸೆ.29ರಂದು @FreePressMP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಯುವಕನ ಅವತಾರ ಕಂಡು ದಾರಿಯಲ್ಲಿ ಹೋಗುತ್ತಿದ್ದ ಯುವತಿಯರು ಆಶ್ಚರ್ಯಚಕಿತರಾಗಿ ನೋಡುವುದು ಮತ್ತು ನಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!