AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೀಲ್ಸ್‌ ಮಾಡಲು ಹೋದ ಯುವಕ, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದು ಸಾವು

ಯುವಕ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿ, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ರಕ್ಷಣಾ ತಂಡ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಯುವಕ ನೀರಿನಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ಇಲ್ಲಿದೆ ನೋಡಿ.

Viral Video: ರೀಲ್ಸ್‌ ಮಾಡಲು ಹೋದ ಯುವಕ, ಜಲಪಾತದಿಂದ 150 ಅಡಿ ಆಳಕ್ಕೆ  ಬಿದ್ದು ಸಾವು
ಅಕ್ಷತಾ ವರ್ಕಾಡಿ
|

Updated on: Aug 07, 2024 | 2:02 PM

Share

ಇತ್ತೀಚಿಗಷ್ಟೇ ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್ ಅನ್ವಿ ಕಾಮ್ದಾರ್ ರೀಲ್​ ಮಾಡುತ್ತಿರುವ ವೇಳೆ 300 ಅಡಿ ಆಳದ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಸುದ್ದಿ ವರದಿಯಾಗಿತ್ತು. ಇದೀಗ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಪಿಕ್‍ನಿಕ್‌ಗೆ ಬಂದಿದ್ದು, ಜಲಪಾತದ ಪಕ್ಕದಲ್ಲಿ ನಿಂತು ರೀಲ್ಸ್​​ ಮಾಡುತ್ತಿರುವ ವೇಳೆ ನೀರಿನ ರಭಸಕ್ಕೆ ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆ ರಾಜಸ್ಥಾನದ ಮೆನಾಲ್ ಜಲಪಾತದ ಬಳಿ ನಡೆದಿದೆ.

ಮೃತ ಯುವಕ ಭಿಲ್ವಾರಾ ಜಿಲ್ಲೆಯ ಭವಾನಿ ನಗರದ ನಿವಾಸಿ ಕನ್ಹಯ್ಯಾಲಾಲ್ ಬೈರ್ವಾ (26) ಎಂದು ಗುರುತಿಸಲಾಗಿದೆ. ತನ್ನ ಐದಾರು ಗೆಳೆಯರೊಂದಿಗೆ ಬಂದಿದ್ದ ರಭಸದಿಂದ ಹರಿಯುತ್ತಿದ್ದ ನೀರಿನ ಮಧ್ಯೆ ರೀಲ್ಸ್​​ ಮಾಡಲು ಮುಂದಾಗಿದ್ದಾನೆ. ಜಲಪಾತದ ನಡುವೆ ಪ್ರವಾಸಿಗರ ಸುರಕ್ಷತೆಗಾಗಿ ಸರಪಳಿಯನ್ನು ಹಾಕಲಾಗಿದ್ದು, ಈ ಸರಪಳಿಯ ಸಹಾಯದಿಂದ ಸ್ನೇಹಿತರು ಮಧ್ಯಕ್ಕೆ ಹೋಗಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಕನ್ಹಯ್ಯಾಲಾಲ್ ಕೊಚ್ಚಿ ಹೋಗಿದ್ದು, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

@priyarajputlive ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಯುವಕ ನೀರಿನಲ್ಲಿ ಸೆಳೆತಕ್ಕೆ ಕೊಚ್ಚಿ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬಳಿಕ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ತಂಡ ಸ್ಥಳಕ್ಕೆ ಬಂದಿದ್ದು, ಸ್ಥಳೀಯರು ಹಾಗೂ ರಕ್ಷಣಾ ತಂಡ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ