AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಭೂಪ ರೈಲ್ವೇ ಹಳಿಗಳ ಮೇಲೆ ಪಟಾಕಿ ಸುಟ್ಟಿದ್ದು ಈ ಕಾರಣಕ್ಕೆ​; ಜೈಪುರದ ರೈಲ್ವೇ ಅಧಿಕಾರಿ ಪ್ರತಿಕ್ರಿಯೆ

Rajasthan: ದೀಪಾವಳಿ ಇನ್ನೇನು ಹೊಸ್ತಿಲಲ್ಲಿದೆ. ಸಾಮಾಜಿಕ ಜಾಲತಾಣಗಳ ಪ್ರಭಾವಿ ವ್ಯಕ್ತಿಗಳು ಪಟಾಕಿ ಮತ್ತು ಅದರಿಂದ ಉಂಟಾಗುವ ವಾಯುಮಾಲಿನ್ಯದ ಕುರಿತು ಜನಜಾಗೃತಿ ಮೂಡಿಸುವಲ್ಲಿ ಭಯಂಕರವಾಗಿ ತೊಡಗಿಕೊಂಡಿದ್ದಾರೆ. ಅದೆಷ್ಟು ಭಯಂಕರ ಎಂದರೆ ಇದೀಗ ವೈರಲ್ ಆಗಿರುವ ಈ ವಿಡಿಯೋನೇ ಇದಕ್ಕೆ ಸಾಕ್ಷಿ. ಈ ಭೂಪನ ಕೃತ್ಯವನ್ನು ಗಮನಿಸಿದ ನೆಟ್ಟಿಗರು ಪೊಲೀಸರ ಗಮನಕ್ಕೆ ತಂದಿದ್ದಾರೆ.

Viral Video: ಈ ಭೂಪ ರೈಲ್ವೇ ಹಳಿಗಳ ಮೇಲೆ ಪಟಾಕಿ ಸುಟ್ಟಿದ್ದು ಈ ಕಾರಣಕ್ಕೆ​; ಜೈಪುರದ ರೈಲ್ವೇ ಅಧಿಕಾರಿ ಪ್ರತಿಕ್ರಿಯೆ
ಜೈಪುರದ ಬಳಿ ರೈಲ್ವೇ ಹಳಿಗಳ ಮೇಲೆ ಪಟಾಕಿ ಸುಟ್ಟ ಭೂಪ!
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Nov 09, 2023 | 11:21 AM

Share

Jaipur: ಸಾಮಾಜಿಕ ಜಾಲತಾಣಗಳಲ್ಲಿ ಪ್ರಭಾವವನ್ನು ಗಳಿಸಲು ಇಂದು ಏನೇನೆಲ್ಲ ಸರ್ಕಸ್​ ಮಾಡುತ್ತಿದ್ದಾರೆ ಎಂದು ನೋಡುತ್ತಿದ್ದೀರಿ. ಏನೇ ಆದರೂ ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆಯಾಗದಂತೆ ವರ್ತಿಸಬೇಕು ಎನ್ನುವುದು ಅವರಿಗೆ ಅರ್ಥವಾಗುತ್ತಲೇ ಇಲ್ಲ. ಮೆಟ್ರೋ ಮತ್ತು ರೈಲುಗಳಲ್ಲಿ ರೀಲಿಗರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನೆಟ್ಟಿಗರು ಈ ಬಗ್ಗೆ ರೋಸಿಹೋಗಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋ ರೈಲಿನೊಳಗಿನದ್ದಲ್ಲ, ರೈಲು ಹಳಿಗಳ (Railway Track) ಮೇಲಿನದು. ಜೈಪುರದ ರೈಲುಹಳಿಗಳ ಮೇಲೆ ಯೂಟ್ಯೂಬರ್​ನೊಬ್ಬ ಪಟಾಕಿ ಸುಟ್ಟಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಗಮನಿಸಿದ ಜೈಪುರದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ​ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : Viral Video: ರೈಲಿನಲ್ಲಿ ಭೋಜ್​ಪುರಿ ಹಾಡಿಗೆ ಯುವತಿಯ ನೃತ್ಯ; ರೋಸಿಹೋದ ನೆಟ್ಟಿಗರು 

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಟ್ರೇನ್​ ಆಫ್​ ಇಂಡಿಯಾ ಎಂಬ X ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಫುಲೇರಾ-ಅಜ್ಮೀರ್​ ವಿಭಾಗದ ದಾಂತ್ರಾ ನಿಲ್ದಾಣದ ಬಳಿ ಈ ವಿಡಿಯೋ ಚಿತ್ರೀಕರಿಸಲಾಗಿದೆ ಎನ್ನುವುದು ಈ ಪೋಸ್ಟ್​ ಮೂಲಕ ತಿಳಿದುಬಂದಿದೆ. ಹೀಗೆ ಪಟಾಕಿ ಸುಟ್ಟಿದ್ದನ್ನು ನೋಡಿ ಭಯವಾಗುತ್ತಿದೆ. ಇದು ಇನ್ನೇನೋ ಅನಾಹುತಕ್ಕೆ ಎಡೆಮಾಡಿಕೊಡಬಹುದು, ಇವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪ್ರತಿಕ್ರಿಯಿಸಿದ್ದಾರೆ. ಟ್ಯಾಗ್​ ಗಮನಿಸಿದ ಜೈಪುರದ ವಾಯುವ್ಯ ರೈಲ್ವೆ ಮತ್ತು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ರೈಲ್ವೇ ಹಳಿಗಳ ಮೇಲೆ ಪಟಾಕಿ ಸಿಡಿಸುತ್ತಿರುವ ವಿಡಿಯೋ

ಪಟಾಕಿಗಳು ಹೇಗೆ ಮಾಲಿನ್ಯವನ್ನುಂಟು ಮಾಡುತ್ತವೆ ಎನ್ನುವುದನ್ನು ತೋರಿಸುವುದು ಈ ವಿಡಿಯೋದ ಉದ್ದೇಶವಾಗಿದೆ. ನೋಡಿ ಪಟಾಕಿ ಹೇಗೆ ಲಾವಾದಂತೆ ತೋರುತ್ತಿವೆ ಎಂದೂ ಯೂಟ್ಯೂಬರ್​ ಹೇಳಿದ್ದಾನೆ. ಅನೇಕರು ಕೂಡಲೇ ಈ ಯೂಟ್ಯೂಬರ್​ನನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಈ ವಿಡಿಯೋದಡಿ ಜೈಪುರದ ವಿಭಾಗೀಯ ರೈಲ್ವೇ ವ್ಯವಸ್ಥಾಪಕರು, ‘ನಿಮ್ಮ ಕಾಳಜಿಯನ್ನು ನಾವು ಪ್ರಶಂಸಿಸುತ್ತೇವೆ. ಪ್ರಕರಣ ಸಂಖ್ಯೆ 716/23  ಅಡಿಯಲ್ಲಿ (ಸೆಕ್ಷನ್ 145-147 ಭಾರತೀಯ ರೈಲ್ವೆ ಕಾಯ್ದೆ-1989 ಅಡಿಯಲ್ಲಿ) ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದನ್ನು ನಮ್ಮ ಗಮನಕ್ಕೆ ತಂದಿದ್ದಕ್ಕೆ ಧನ್ಯವಾದ’ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:18 am, Thu, 9 November 23

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ