AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?

ಹೈದರಾಬಾದ್​ನಲ್ಲಿ ಝೊಮ್ಯಾಟೊ ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?
ಝೊಮ್ಯಾಟೊ ಡೆಲಿವರಿ ಬಾಯ್Image Credit source: News 18
ನಯನಾ ರಾಜೀವ್
|

Updated on:Jan 03, 2024 | 10:43 AM

Share

ಹೈದರಾಬಾದ್​ನಲ್ಲಿ ಝೊಮ್ಯಾಟೊ(Zomato) ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಕುದುರೆ ಮೇಲೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹಿಟ್​ ಆ್ಯಂಡ್​ ರನ್​ ಕಾನೂನು ಹಿಂಪಡೆಯುವ ಕುರಿತು ಟ್ರಕ್​, ಬಸ್​ ಚಾಲಕರು ದೇಶದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಈ ನಡುವೆ ಪೆಟ್ರೋಲ್​ ಬಂಕ್​ಗಳಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಮೂರು ಗಂಟೆಗಳ ಕಾಲ ಪೆಟ್ರೋಲ್​ ಬಂಕ್​ನಲ್ಲಿ ನಿಂತಿದ್ದೆ, ಬಳಿಕ ತಮ್ಮ ಬೈಕ್​ ಅನ್ನು ಪೆಟ್ರೋಲ್​ ಬಂಕ್ ಬಳಿಯೇ ಇಟ್ಟು ಕುದುರೆ ಬಾಡಿಗೆಗೆ ತೆಗೆದುಕೊಂಡು ಸವಾರಿ ಮುಂದುವರೆಸಿದೆ ಎಂದು ಹೇಳಿದ್ದಾರೆ.

ಡೆಲಿವರಿ ಬಾಯ್ ಕುದುರೆಯ ಮೇಲೆ ಆಹಾರವನ್ನು ತಲುಪಿಸಲು ಇಂಪೀರಿಯಲ್ ಹೋಟೆಲ್​ ಬಳಿಯ ಚಂಚಲಗುಡಕ್ಕೆ ಬಂದಿದ್ದಾರೆ. ಟ್ರಕ್ ಡ್ರೈವರ್‌ಗಳ ಮುಷ್ಕರದಿಂದಾಗಿ ಪೆಟ್ರೋಲ್ ಕೊರತೆ ಉಂಟಾಗಿದ್ದು, ಯುವಕನಿಗೆ ಕುದುರೆಯ ಮೇಲೆ ಆಹಾರವನ್ನು ತಲುಪಿಸುವುದು ಅನಿವಾರ್ಯವಾಗಿತ್ತು ಎಂದು ಯುವಕ ಹೇಳಿದ್ದಾನೆ.

ಮತ್ತಷ್ಟು ಓದಿ: ಮುಷ್ಕರ ವಾಪಸ್ ಪಡೆದ ಟ್ರಕ್ ಚಾಲಕರು; ಜನರು ನಿರಾಳ

ಇತ್ತೀಚೆಗೆ ಕೇಂದ್ರ ಸರ್ಕಾರವು ಹಿಟ್ ಆ್ಯಂಡ್​ ರನ್ ಕೇಸ್‌ನಲ್ಲಿ ಹೊಸ ನಿಬಂಧನೆಗಳನ್ನು ಜಾರಿಗೆ ತಂದಿದೆ.ದರ ಅಡಿಯಲ್ಲಿ 7 ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಈ ಕಾನೂನು ವಿರೋಧಿಸಿ ಟ್ರಕ್​, ಬಸ್​, ಅನೇಕ ಸಂಘಟನೆಗಳು ಮುಷ್ಕರ ನಡೆಸಿದ್ದವು. ಆದರೆ, ಈ ಹೊಸ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರುವುದಿಲ್ಲ ಎಂದು ಸರ್ಕಾರ ಈಗಷ್ಟೇ ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Wed, 3 January 24

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?