AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?

ಹೈದರಾಬಾದ್​ನಲ್ಲಿ ಝೊಮ್ಯಾಟೊ ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?
ಝೊಮ್ಯಾಟೊ ಡೆಲಿವರಿ ಬಾಯ್Image Credit source: News 18
ನಯನಾ ರಾಜೀವ್
|

Updated on:Jan 03, 2024 | 10:43 AM

Share

ಹೈದರಾಬಾದ್​ನಲ್ಲಿ ಝೊಮ್ಯಾಟೊ(Zomato) ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಕುದುರೆ ಮೇಲೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹಿಟ್​ ಆ್ಯಂಡ್​ ರನ್​ ಕಾನೂನು ಹಿಂಪಡೆಯುವ ಕುರಿತು ಟ್ರಕ್​, ಬಸ್​ ಚಾಲಕರು ದೇಶದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಈ ನಡುವೆ ಪೆಟ್ರೋಲ್​ ಬಂಕ್​ಗಳಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಮೂರು ಗಂಟೆಗಳ ಕಾಲ ಪೆಟ್ರೋಲ್​ ಬಂಕ್​ನಲ್ಲಿ ನಿಂತಿದ್ದೆ, ಬಳಿಕ ತಮ್ಮ ಬೈಕ್​ ಅನ್ನು ಪೆಟ್ರೋಲ್​ ಬಂಕ್ ಬಳಿಯೇ ಇಟ್ಟು ಕುದುರೆ ಬಾಡಿಗೆಗೆ ತೆಗೆದುಕೊಂಡು ಸವಾರಿ ಮುಂದುವರೆಸಿದೆ ಎಂದು ಹೇಳಿದ್ದಾರೆ.

ಡೆಲಿವರಿ ಬಾಯ್ ಕುದುರೆಯ ಮೇಲೆ ಆಹಾರವನ್ನು ತಲುಪಿಸಲು ಇಂಪೀರಿಯಲ್ ಹೋಟೆಲ್​ ಬಳಿಯ ಚಂಚಲಗುಡಕ್ಕೆ ಬಂದಿದ್ದಾರೆ. ಟ್ರಕ್ ಡ್ರೈವರ್‌ಗಳ ಮುಷ್ಕರದಿಂದಾಗಿ ಪೆಟ್ರೋಲ್ ಕೊರತೆ ಉಂಟಾಗಿದ್ದು, ಯುವಕನಿಗೆ ಕುದುರೆಯ ಮೇಲೆ ಆಹಾರವನ್ನು ತಲುಪಿಸುವುದು ಅನಿವಾರ್ಯವಾಗಿತ್ತು ಎಂದು ಯುವಕ ಹೇಳಿದ್ದಾನೆ.

ಮತ್ತಷ್ಟು ಓದಿ: ಮುಷ್ಕರ ವಾಪಸ್ ಪಡೆದ ಟ್ರಕ್ ಚಾಲಕರು; ಜನರು ನಿರಾಳ

ಇತ್ತೀಚೆಗೆ ಕೇಂದ್ರ ಸರ್ಕಾರವು ಹಿಟ್ ಆ್ಯಂಡ್​ ರನ್ ಕೇಸ್‌ನಲ್ಲಿ ಹೊಸ ನಿಬಂಧನೆಗಳನ್ನು ಜಾರಿಗೆ ತಂದಿದೆ.ದರ ಅಡಿಯಲ್ಲಿ 7 ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಈ ಕಾನೂನು ವಿರೋಧಿಸಿ ಟ್ರಕ್​, ಬಸ್​, ಅನೇಕ ಸಂಘಟನೆಗಳು ಮುಷ್ಕರ ನಡೆಸಿದ್ದವು. ಆದರೆ, ಈ ಹೊಸ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರುವುದಿಲ್ಲ ಎಂದು ಸರ್ಕಾರ ಈಗಷ್ಟೇ ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Wed, 3 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ